ನಿಂಬೂರಲ್ಲಿ ಬಗೆಹರಿಯದ ನೀರಿನ ಸಮಸ್ಯೆ
Team Udayavani, Jun 15, 2022, 5:21 PM IST
ಹುಮನಾಬಾದ: ಕುಡಿವ ನೀರಿನ ಸಮಸ್ಯೆ ಬಗೆಹರಿಸದ ಹಿನ್ನೆಲೆಯಲ್ಲಿ ಸೀತಾಳಗೇರಾ ಗ್ರಾಪಂ ಜೆ.ಇ ರಾಜು, ಪಿಡಿಒ ಸವಿತಾ, ಗ್ರಾಪಂ ಅಧ್ಯಕ್ಷೆ ಕಸ್ತೂರಬಾಯಿ ಸೇರಿದಂತೆ ಇತರೆ ನಾಲ್ಕು ಜನ ಸದಸ್ಯರನ್ನು ಗ್ರಾಮಸ್ಥರು ಬಸವಣ್ಣ ದೇವಸ್ಥಾನದಲ್ಲಿ ಕೂಡಿ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದೆ.
ನಿಂಬೂರ್ ಗ್ರಾಮದಲ್ಲಿ ಕಳೆದೊಂದು ತಿಂಗಳಿಂದ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ. ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಧಿಕಾರಿಗಳಿಗೆ ಹೇಳಿದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಗ್ರಾಮದಲ್ಲಿನ ಸಮಸ್ಯೆ ಬಗೆಹರಿಯಬೇಕೆಂದು ಮಂಗಳವಾರ ಬೆಳಗ್ಗೆ ಗ್ರಾಮಸ್ಥರೆಲ್ಲ ಸೇರಿ ಸೀತಾಳಗೇರ ಗ್ರಾಪಂಗೆ ತೆರಳಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಆಕ್ರೋಶಗೊಂಡ ನಿಂಬೂರ್ ಗ್ರಾಮಸ್ಥರು ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆ ತಂದು ಬಸವಣ್ಣ ದೇವಸ್ಥಾನದಲ್ಲಿ ಕೂಡಿ ಹಾಕಿ ಸಮಸ್ಯೆ ಬಗೆಹರಿಸಿದ ನಂತರವೇ ಗ್ರಾಮದಿಂದ ಬಿಡುವುದಾಗಿ ಪಟ್ಟು ಹಿಡಿದಿದ್ದರು. ಘಟನೆ ಮಾಹಿತಿ ಪಡೆದ ಹಳ್ಳಿಖೇಡ (ಬಿ) ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಗ್ರಾಮಕ್ಕೆ ಭೇಟಿ ನೀಡಿದ ತಾಪಂ ಇಒ ಮುರಗೆಪ್ಪ ಜನರ ಸಮಸ್ಯೆ ಆಲಿಸಿದರು.
ಗ್ರಾಮದಲ್ಲಿ ಜೆಜೆಎಂ ಯೋಜನೆ ಕಾಮಗಾರಿ ನಡೆಯುತ್ತಿದೆ. ಪಂಚಾಯಿತಿ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿ ಕಾಮಗಾರಿ ಆರಂಭಿಸಬೇಕಿತ್ತು. ಕಾಮಗಾರಿ ಆರಂಭಗೊಂಡ ಹಿನ್ನೆಲೆಯಲ್ಲಿ ಟ್ಯಾಂಕರ್ ನೀರು ಪೂರೈಸಲಾಗಿದ್ದು, ಜನರಿಗೆ ಸೂಕ್ತವಾಗಿ ನೀರು ಪೂರೈಕೆ ಆಗುತ್ತಿಲ್ಲ ಎಂದು ದೂರಿದ್ದಾರೆ.
ಅಲ್ಲದೇ ನೀರು ಸರಬರಾಜು ಮಾಡುವ ವ್ಯಕ್ತಿ ವಿರುದ್ಧವೂ ಜನರು ಆರೋಪಿಸಿದ್ದಾರೆ. ಇದೀಗ ಗ್ರಾಮದಲ್ಲಿನ ಟ್ಯಾಂಕರ್ಗೆ ನೀರು ತುಂಬಿಸುವ ಕೆಲಸ ಆರಂಭಗೊಂಡಿದ್ದು, ಬುಧವಾರದಿಂದ ಜನರಿಗೆ ನೀರು ಪೂರೈಕೆಯಾಗುತ್ತದೆ. ಅಲ್ಲದೇ, ಮುಂದಿನ ಒಂದು ವಾರದಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.
ಪಂಚಾಯಿತಿ ಸಿಬ್ಬಂದಿ ವಿರುದ್ಧವೂ ಕ್ರಮ ಜರುಗಿಸುವಂತೆ ತಿಳಿಸಲಾಗಿದೆ ಎಂದು ತಾಪಂ ಇಒ ಮಾಹಿತಿ ನೀಡಿದ್ದಾರೆ. ನಂತರ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಸದಸ್ಯರನ್ನು ಬಿಡುಗಡೆ ಮಾಡಿ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು