ಕಾಲುಬಾಯಿ ರೋಗಕ್ಕೆ ಲಸಿಕೆ
Team Udayavani, Jun 4, 2018, 10:32 AM IST
ಭಾಲ್ಕಿ: ಕಾಲುಬಾಯಿ ರೋಗ ತಡೆಗಟ್ಟಲು ಪಶುವೈದ್ಯಕೀಯ ಇಲಾಖೆ ವತಿಯಿಂದ 14ನೇ ಸುತ್ತಿನ ಲಸಿಕೆ ಕಾರ್ಯಕ್ರಮದಡಿ ಹಲಬರ್ಗಾ ಹೋಬಳಿಯ ವಿವಿಧ ಗ್ರಾಮಗಳಲ್ಲಿ ರಾಸುಗಳಿಗೆ ಲಸಿಕೆ ಹಾಕಲಾಯಿತು.
ಪಶುವೈದ್ಯಾಧಿಕಾರಿ ಮರುಳುಸಿದ್ದ ಮಾತನಾಡಿ, ರೈತರು ಕಡ್ಡಾಯವಾಗಿ ತಮ್ಮ ರಾಸುಗಳಿಗೆ ಲಸಿಕೆ ಹಾಕಿಸಬೇಕು.
ಇದರಿಂದ ರೋಗ ನಿವಾರಣೆಯ ಜತೆಗೆ ಹಾಲು ಉತ್ಪಾದನೆಯಲ್ಲಿ ಪ್ರಗತಿ ಆಗುತ್ತದೆ ಎಂದು ತಿಳಿಸಿದರು.
ವೈದ್ಯಾಧಿಕಾರಿ ಮಹಿಪಾಲ್ಸಿಂಗ್ ಮಾತನಾಡಿ, ರೋಗಗ್ರಸ್ತ ರಾಸುಗಳಲ್ಲಿ ಮೊದಲಿಗೆ ಜ್ವರ ಕಾಣಿಸುತ್ತದೆ. ಮೇವು
ಹೆಚ್ಚಾಗಿ ತಿನ್ನುವುದಿಲ್ಲ. ಬಾಯಲ್ಲಿ ಚಿಕ್ಕಚಿಕ್ಕ ನೀರ್ಗುಳ್ಳೆಗಳಾಗಿ ಕ್ರಮೇಣ ಗುಳ್ಳೆಗಳು ಒಡೆದು ಜೊಲ್ಲು ಸುರಿಯುತ್ತವೆ.
ಒಮ್ಮೊಮ್ಮೆ ನಾಲಿಗೆಯ ಮೇಲೆ ಹುಣ್ಣು ಜಾಸ್ತಿಯಾಗಿ ಮೇಲಿನ ಪದರವೇ ಕಿತ್ತು ಬರುತ್ತದೆ. ಬಾಯಿ ಹುಣ್ಣಿನಿಂದಾಗಿ
ಮೇವು ತಿನ್ನಲಾಗುವುದಿಲ್ಲ. ಕಾಲಿನ ಗೊರಸಿನ ಮಧ್ಯ ಹುಣ್ಣುಗಳಾಗಿ ನೋಣ ಕುಳಿತು ಹುಳುಗಳಾಗುತ್ತವೆ. ಕೆಲವು
ರಾಸುಗಳಲ್ಲಿ ಕೆಚ್ಚಲಿನ ಮೇಲೆ ಗುಳ್ಳೆಗಳು ಕಾಣಿಸುತ್ತವೆ. ತುಂಬು ಗರ್ಭದ ರಾಸುಗಳಲ್ಲಿ ಗರ್ಭಪಾತವಾಗುವ
ಸಂಭವ ಹೆಚ್ಚು. ಸುಮಾರು 8ರಿಂದ 12 ದಿನಗಳ ವರೆಗೆ ರಾಸುಗಳು ಅಪಾರ ವೇದನೆಯಿಂದ ನರಳುತ್ತವೆ ಎಂದು
ರೋಗದ ಲಕ್ಷಣಗಳ ಕುರಿತು ಮಾಹಿತಿ ನೀಡಿದರು. ವೈದ್ಯಾಧಿಕಾರಿ ಶ್ರೀಧರ ವೃಂದಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ