ವಚನ ವಿಶ್ವವಿದ್ಯಾಲಯ ಆರಂಭ ಅಗತ್ಯ: ಪ್ರೊ| ಕೋರಗಲ್
Team Udayavani, Feb 2, 2019, 7:44 AM IST
ಬಸವಕಲ್ಯಾಣ: ಕಲ್ಯಾಣ ಕರ್ನಾಟಕದಲ್ಲಿ ವಚನ ಸಾಹಿತ್ಯ ಬೆಳೆದಂತೆ, ಆಧುನಿಕ ಸಾಹಿತ್ಯ ಕೂಡ ಬೆಳೆಯುತ್ತಿರುವುದು ಸಾಹಿತಿಗಳಿಗೆ ಮತ್ತು ಸಾಹಿತ್ಯ ಆಸಕ್ತರಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹಾವೇರಿಯ ಸಾಹಿತಿ ಪ್ರೊ| ವಿರೂಪಾಕ್ಷಪ್ಪಾ ಕೋರಗಲ್ ಹೇಳಿದರು.
ಸಸ್ತಾಪುರ ಗ್ರಾಮದಲ್ಲಿ ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ ಪ್ರಭುಗಳ 33ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ವಚನ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕಾಯಕ ಸಂಸ್ಕೃತಿ ಮೂಲಕ ವಿಶ್ವಗುರು ಬಸವಣ್ಣನವರು, ದಾಸೋಹ ಸಂಸ್ಕೃತಿ ಕಲಿಸಿದ್ದರು. ಹಾಗಾಗಿ ಆಧುನಿಕ ವಚನಕಾರರು, ಪ್ರಸಕ್ತ ಸಮಸ್ಯೆಗಳನ್ನು ಇಟ್ಟುಕೊಂಡು ವಚನ ರಚಿಸಲಿ ಎಂದ ಅವರು, ಜೀವನಕ್ಕೆ ಧಾರ್ಮಿಕ ಆಚರಣೆಗಳು ಮತ್ತು ವಚನಗಳು ದಾರಿದೀಪವಾಗಿವೆ ಎಂದು ಹೇಳಿದರು.
ಸಮ್ಮೇಳನಾಧ್ಯಕ್ಷರಾದ ಉದಗಿರಿಯ ಸಾಹಿತಿ ಮಾಣಿಕರಾವ್ ಬಿರಾದಾರ್ ಮಾತನಾಡಿ, ವಚನ ಸಾಹಿತ್ಯದ ಅನುಭವ ಹಾಗೂ ಅನುಭಾವದಿಂದಲೇ ಆಧುನಿಕ ವಚನ ಸಾಹಿತ್ಯ ಹುಟ್ಟಿಕೊಂಡಿದೆ. ವಚನ ಸಾಹಿತ್ಯ ಇಂದು ಆಂಧ್ರ, ಮಹಾರಾಷ್ಟ್ರ ಮತ್ತು ಕರ್ನಾಟಕದಿಂದಲೇ ಹೊರ ಬಂದಿದೆ ಎಂದರು.
ಆದ್ದರಿಂದ ವಚನ ಸಾಹಿತ್ಯ ವಿಶ್ವ ಸಾಹಿತ್ಯಕ್ಕೆ ಕನ್ನಡ ಕೊಟ್ಟ ಅದ್ಭುತ ದೇಣಿಯಾಗಿದ್ದು, ಇಂದು ದೇಶಕ್ಕೆ ಮಾನವತೆಗೆ ಪೀಡಿಸುತ್ತಿರುವ ಭಯೋತ್ಪಾದನೆ, ಕೋಮುವಾದ, ಭ್ರಷ್ಟಾಚಾರ ನಿರ್ಮೂಲನೆಗೆ ವಚನಗಳು ಸಂಜೀವಿಯಾಗಲಿರುವ ವಚನಗಳ ಪ್ರಚಾರದ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು. ಶರಣರ ಕ್ರಾಂತಿಯ ನಾಡಾದ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಅಗತ್ಯವಿದೆ. ಇದರ ಶಾಖೆಗಳನ್ನು ಉಳವಿ, ಕೂಡಲ ಸಂಗಮ, ವಿಜಯಪುರ, ಸೊಲ್ಲಾಪುರ, ತೆಲಂಗಾಣ, ಹೈದರಾಬಾದ್ನಲ್ಲಿ ಆರಂಭಿಸುವುದು ಅವಶ್ಯಕವಾಗಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಸಸ್ತಾಪುರ ಗ್ರಾಮದ ಶ್ರೀ ಯಲ್ಲಾಲಿಂಗೇಶ್ವರ ಮಠದ ಬಾಲತಪಸ್ವಿನಿ ಶಿವಶರಣೆ ಮಹಾದೇವಿ ತಾಯಿ, ಸಾನ್ನಿಧ್ಯ ವಹಿಸಿದ್ದ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಹಾಗೂ ಬೇಲೂರಿನ ಉರುಲಿಂಗ ಪೆದ್ದಿ ಮಠದ ಶ್ರೀ ಪಂಚಾಕ್ಷರಿ ಸ್ವಾಮಿಜಿ ಮಾತನಾಡಿದರು.
ಹಿರಿಯ ಸಾಹಿತಿ ಹಾಗೂ ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಡಾ| ವಜ್ರಾ ಪಾಟೀಲ್, ಎಂ.ಎಂ.ತಂಬಾಕೆ, ಗ್ರಾಪಂ ಅಧ್ಯಕ್ಷೆ ಬ್ರಹ್ಮಾರೆಡ್ಡಿ, ಬಾಬುರೆಡ್ಡಿ ಚಾಮಲೆ, ಸಿದ್ರಾಮಪ್ಪಾ ಗುದಗೆ, ಸಮ್ಮೇಳನದ ಸಮಿತಿ ಸಂಯೋಜಕ ಡಾ| ಗವಿಸಿದ್ದಪ್ಪಾ ಪಾಟೀಲ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ