ಆಲಿಕಲ್ಲು ಮಳೆಗೆ ನೆಲಕಚ್ಚಿದ ಭತ್ತ: ಅಧಿಕಾರಿಗಳ ಭೇಟಿ
Team Udayavani, Apr 9, 2020, 3:29 PM IST
ವಡಗೇರಾ: ತಾಲೂಕಿನಲ್ಲಿ ಮಂಗಳವಾರ ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ವಡಗೇರಾ ವ್ಯಾಪ್ತಿಯ ಗ್ರಾಮಗಳಲ್ಲಿ ಅಂದಾಜು 250 ಎಕರೆ ಪ್ರದೇಶದಲ್ಲಿನ ಭತ್ತದ ಬೆಳೆ ನಾಶವಾಗಿದೆ. ವಡಗೇರಾ ವ್ಯಾಪ್ತಿಯಲ್ಲಿ ಗುಡುಗು- ಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಯಿಂದಾಗಿ ಭತ್ತದ ಪೈರು ನೆಲಕಚ್ಚಿದೆ. ಕ್ಯಾತನಾಳ, ಹಂಚಿನಾಳ, ಐಕೂರ, ಅನಕಸೂಗರ, ಕುರಿಯಾಳ, ಕೊಂಕಲ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆ ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಕಟಾವು ಹಂತದಲ್ಲಿದ್ದ ಬೆಳೆ ಇದೀಗ ಮಳೆಗೆ ನಾಶವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭತ್ತದ ಬೆಳೆ ಕಟಾವಿಗೆ ಬಂದಿದ್ದರೂ ಇಲ್ಲಿಯ ವರೆಗೆ ಮಾರುಕಟ್ಟೆ ದೊರೆಯದೇ ಕಂಗಾಲಾಗಿದ್ದ ರೈತರಿಗೆ ಏಕಾಏಕಿ ಸುರಿದ ಆಲಿಕಲ್ಲು ಮಳೆ ರೈತರನ್ನು ಮತ್ತಷ್ಟು ಸಂದಿಗ್ಧತೆಗೆ ತಳ್ಳಿದೆ.
ಅಧಿಕಾರಿಗಳ ಪರಿಶೀಲನೆ: ಹಾನಿಯಾಗಿರುವ ಜಮೀನುಗಳಿಗೆ ಕಂದಾಯ ಹಾಗೂ ಕೃಷಿ ಇಲಾಖೆ ಅ ಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಐಕೂರ ಗ್ರಾಪಂ ವ್ಯಾಪ್ತಿಯಲ್ಲಿ 38 ಮಿ.ಮೀ. ಮಳೆಬಿದ್ದಿದ್ದು, ಭತ್ತದ ಪೈರಿನ ಬೀಜಗಳು ಉದುರಿವೆ. ಈ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ಅ ಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಕಂದಾಯ ನಿರೀಕ್ಷಕ ಬಸಯ್ಯ ಸ್ವಾಮಿ, ಕೃಷಿ ಇಲಾಖೆ ಅಧಿಕಾರಿ ಅತೀಕ್ ಉಲ್ಲಾ, ಸಹಾಯಕ ಅಧಿಕಾರಿ ಅಮರೇಶ ಸೇರಿದಂತೆ ಸಿಬ್ಬಂದಿಗಳು, ರೈತರು ಇದ್ದರು.
ಮಳೆಯಿಂದ ಅನಕಸೂಗರ ಗ್ರಾಮದಲ್ಲಿ 250 ಎಕರೆ ಬೆಳೆ ಸಂಪೂರ್ಣ ನಾಶವಾಗಿದೆ. ಕಟಾವು ಹಂತಕ್ಕೆ ಬಂದಿದ್ದ ಭತ್ತ ಮಳೆಯಿಂದ ಸಂಪೂರ್ಣ ನೆಲಕಚ್ಚಿದೆ. ಈ
ಬಗ್ಗೆ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತೇನೆ.
ಮಲ್ಲಿಕಾರ್ಜುನ ರಡ್ಡಿ,
ರೈತ, ಅನಕಸೂಗರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್