ಆಲಿಕಲ್ಲು ಮಳೆಗೆ ನೆಲಕಚ್ಚಿದ ಭತ್ತ: ಅಧಿಕಾರಿಗಳ ಭೇಟಿ


Team Udayavani, Apr 9, 2020, 3:29 PM IST

09-April-21

ವಡಗೇರಾ: ತಾಲೂಕಿನಲ್ಲಿ ಮಂಗಳವಾರ ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ವಡಗೇರಾ ವ್ಯಾಪ್ತಿಯ ಗ್ರಾಮಗಳಲ್ಲಿ ಅಂದಾಜು 250 ಎಕರೆ ಪ್ರದೇಶದಲ್ಲಿನ ಭತ್ತದ ಬೆಳೆ ನಾಶವಾಗಿದೆ. ವಡಗೇರಾ ವ್ಯಾಪ್ತಿಯಲ್ಲಿ ಗುಡುಗು- ಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಯಿಂದಾಗಿ ಭತ್ತದ ಪೈರು ನೆಲಕಚ್ಚಿದೆ. ಕ್ಯಾತನಾಳ, ಹಂಚಿನಾಳ, ಐಕೂರ, ಅನಕಸೂಗರ, ಕುರಿಯಾಳ, ಕೊಂಕಲ್‌ ಸೇರಿದಂತೆ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆ ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಕಟಾವು ಹಂತದಲ್ಲಿದ್ದ ಬೆಳೆ ಇದೀಗ ಮಳೆಗೆ ನಾಶವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭತ್ತದ ಬೆಳೆ ಕಟಾವಿಗೆ ಬಂದಿದ್ದರೂ ಇಲ್ಲಿಯ ವರೆಗೆ ಮಾರುಕಟ್ಟೆ ದೊರೆಯದೇ ಕಂಗಾಲಾಗಿದ್ದ ರೈತರಿಗೆ ಏಕಾಏಕಿ ಸುರಿದ ಆಲಿಕಲ್ಲು ಮಳೆ ರೈತರನ್ನು ಮತ್ತಷ್ಟು ಸಂದಿಗ್ಧತೆಗೆ ತಳ್ಳಿದೆ.

ಅಧಿಕಾರಿಗಳ ಪರಿಶೀಲನೆ: ಹಾನಿಯಾಗಿರುವ ಜಮೀನುಗಳಿಗೆ ಕಂದಾಯ ಹಾಗೂ ಕೃಷಿ ಇಲಾಖೆ ಅ ಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಐಕೂರ ಗ್ರಾಪಂ ವ್ಯಾಪ್ತಿಯಲ್ಲಿ 38 ಮಿ.ಮೀ. ಮಳೆಬಿದ್ದಿದ್ದು, ಭತ್ತದ ಪೈರಿನ ಬೀಜಗಳು ಉದುರಿವೆ. ಈ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ಅ ಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಕಂದಾಯ ನಿರೀಕ್ಷಕ ಬಸಯ್ಯ ಸ್ವಾಮಿ, ಕೃಷಿ ಇಲಾಖೆ ಅಧಿಕಾರಿ ಅತೀಕ್‌ ಉಲ್ಲಾ, ಸಹಾಯಕ ಅಧಿಕಾರಿ ಅಮರೇಶ ಸೇರಿದಂತೆ ಸಿಬ್ಬಂದಿಗಳು, ರೈತರು ಇದ್ದರು.

ಮಳೆಯಿಂದ ಅನಕಸೂಗರ ಗ್ರಾಮದಲ್ಲಿ 250 ಎಕರೆ ಬೆಳೆ ಸಂಪೂರ್ಣ ನಾಶವಾಗಿದೆ. ಕಟಾವು ಹಂತಕ್ಕೆ ಬಂದಿದ್ದ ಭತ್ತ ಮಳೆಯಿಂದ ಸಂಪೂರ್ಣ ನೆಲಕಚ್ಚಿದೆ. ಈ
ಬಗ್ಗೆ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತೇನೆ.
ಮಲ್ಲಿಕಾರ್ಜುನ ರಡ್ಡಿ,
ರೈತ, ಅನಕಸೂಗರ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.