ಸಮರಸ ದಾಂಪತ್ಯಕ್ಕೆ ವರಕವಿ ದ.ರಾ.ಬೇಂದ್ರೆ ಕಾವ್ಯ ಆದರ್ಶ
Team Udayavani, Feb 1, 2022, 1:40 PM IST
ಬೀದರ: ಈ ನೆಲದ ಭಾಷಾ ಸೊಗಡನ್ನು ಕಾವ್ಯಕ್ಕೆ ತಂದ ಅಪ್ಪಟ ದೇಸಿ ಕವಿಯೆಂದರೆ ಬೇಂದ್ರೆ. ಅವರ ಕಾವ್ಯದಲ್ಲಿ ಅದಮ್ಯ ಜೀವನ ಪ್ರೀತಿ ಇತ್ತು. ಸಮರಸ ದಾಂಪತ್ಯಕ್ಕೆ ಬೇಂದ್ರೆ ಕಾವ್ಯ ಆದರ್ಶ ಎಂದು ಸಾಹಿತಿ ಡಾ| ಭತಮುರ್ಗೆ ಚಂದ್ರಪ್ಪ ಹೇಳಿದರು.
ನಗರದ ಕರ್ನಾಟಕ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ವರಕವಿ ಡಾ| ದ.ರಾ ಬೇಂದ್ರೆ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾಹಿತ್ಯವೆಂದರೆ ನವೋದಯ, ಕವಿ ಎಂದರೆ ಬೇಂದ್ರೆ ಎಂದು ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ, ಬೇಂದ್ರೆ ಅವರ ಬದುಕು ಬರಹ ಸಾರ್ವಕಾಲೀಕವಾಗಿದ್ದು, ನಮಗೆ ಸದಾ ಸತ್ಪ್ರೇರಣೆಯಾಗಿದೆ. ಸರಳ ಜೀವನಕ್ಕೆ ಹೆಸರಾದ ಬೇಂದ್ರೆಯವರ ಚಿಂತನೆ ನಮ್ಮ ಬದುಕಲ್ಲಿ ಅಳವಡಿಸಿಕೊಂಡರೆ ಇಂಥ ಜಯಂತಿ ಸಾರ್ಥಕತೆ ಪಡೆದುಕೊಳ್ಳುತ್ತವೆ ಎಂದರು.
ಸಾಹಿತಿ ಸುನಿತಾ ದಾಡಗೆ ಮಾತನಾಡಿ, ಬೇಂದ್ರೆಯವರ ಕವಿತೆ ಅರ್ಥವಾದರೆ ಸರಳ ಬದುಕು ಅರ್ಥವಾಗುತ್ತದೆ. ನಾಕು ತಂತಿ ಎಂಬ ಕಾವ್ಯದ ಮೂಲಕ ಜ್ಞಾನ ಪೀಠ ತಂದುಕೊಟ್ಟ ಕವಿ ಎಂದು ಹೇಳಿದರು.
ಸಾಹಿತಿ ರಮೇಶ ಬಿರಾದಾರ ವೇದಿಕೆಯಲ್ಲಿದ್ದರು. ಸಚಿನ ವಿಶ್ವಕರ್ಮ, ನೆಹರು ಪವಾರ, ಎಂ. ರಾಸೂರ, ವೀರಶೆಟ್ಟಿ ಪಾಟೀಲ, ಗಣೇಶ ಘಂಟಿ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?