ವೀರಭದ್ರೇಶ್ವರ ರಥೋತ್ಸವ ಸಂಭ್ರಮ; ಜ.26ರ ರಾತ್ರಿ ರಥ ಎಳೆದ ಭಕ್ತರು

ದೇವಸ್ಥಾನದಿಂದ ತೆರಳಿದ ದೇವರ ಮೆರವಣಿಗೆ ನೇರವಾಗಿ ತೇರು ಮೈದಾನಕ್ಕೆ ಆಗಮಿಸಿತ್ತು.

Team Udayavani, Jan 28, 2021, 3:43 PM IST

ವೀರಭದ್ರೇಶ್ವರ ರಥೋತ್ಸವ ಸಂಭ್ರಮ; ಜ.26ರ ರಾತ್ರಿ ರಥ ಎಳೆದ ಭಕ್ತರು

ಹುಮನಾಬಾದ: ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಭಕ್ತರ ಝೇಂಕಾರ, ಸಾಂಸ್ಕೃತಿಕ ಕಲಾ ತಂಡಗಳ ಮೆರಗಿನಲ್ಲಿ ಸಾವಿರಾರು ಭಕ್ತರ ಮಧ್ಯೆ ವೀರಭದ್ರಸ್ವಾಮಿಯ ಅದ್ಧೂರಿ ರಥೋತ್ಸವ ಜರುಗಿತು. ರಾಜ್ಯದ ವಿವಿಧ ಜಿಲ್ಲೆಗಳ, ನೇರೆ ರಾಜ್ಯ ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಂದ ಜಾತ್ರೆಗೆ ಬಂದಿದ್ದ ಭಕ್ತರು ರಥೋತ್ಸವದ ವೈಭವವನ್ನು ಕಣ್ತುಂಬಿಕೊಂಡು ಕೃತಾರ್ಥ ಭಾವ ಮೆರೆದರು.

ರಥೋತ್ಸವ ನಿಮಿತ್ತ ಮಂಗಳವಾರ ರಾತ್ರಿ 8:30ಗಂಟೆಗೆ ದೇವಸ್ಥಾನದಿಂದ ಹೊರಟ ವೀರಭದ್ರ ಸ್ವಾಮಿಯ ಉತ್ಸವ ಮೂರ್ತಿ ಮೆರವಣಿಗೆ 10:30ಕ್ಕೆ ತೇರು ಮೈದಾನಕ್ಕೆ ತಲುಪಿತ್ತು. ಒಂದು ಕಿ.ಮೀ. ಉದ್ದದ ವರೆಗೆ ಭಕ್ತರು ದೂರದಲ್ಲಿ ನಿಂತು ವೀರಭದ್ರಸ್ವಾಮಿಯ ದರ್ಶನ ಪಡೆದರು.

ಇತಿಹಾಸ ಮರು ಸೃಷ್ಟಿ: ಕಳೆದ ನಾಲ್ಕು ದಶಕಗಳ ಹಿಂದೆ ವೀರಭದ್ರೇಶ್ವರ ರಥೋತ್ಸವ ಜನವರಿ 26ರಂದು ನಡೆಯುತ್ತಿತ್ತು. ಭಕ್ತ ಸಂಖ್ಯೆ ಹೆಚ್ಚಾದಂತೆ ವಿಳಂಬ ಆಗಲು ಆರಂಭಿಸಿತ್ತು. ಕೆಲ ವರ್ಷಗಳ ಇತಿಹಾಸ ನೋಡಿದರೆ ಜ.26ರಂದು 8ಗಂಟೆಗೆ ದೇವಸ್ಥಾನದಿಂದ ಹೊರಟ ಪಲ್ಲಕ್ಕಿ ಉತ್ಸವ ಒಂದು ಕಿ.ಮೀ. ಕ್ರಮಿಸಲು 13 ಗಂಟೆ ಸಮಯ ತೆಗೆದುಕೊಂಡಿತ್ತು. ಆ.27ರಂದು ಮಧ್ಯಾಹ್ನ ಅದ್ಧೂರಿ ರಥೋತ್ಸವ ನಡೆಯುತ್ತಿತ್ತು. ಆದರೆ, ಈ ವರ್ಷ ಕೊರೊನಾ ಹಿನ್ನೆಲೆಯಲ್ಲಿ ದೇವರಿಗೆ ಶಾಲು ಹೊದಿಸುವ ಕಾರ್ಯಕ್ಕೆ ನಿಷೇಧ ಹಾಕಿದ ಹಿನ್ನೆಲೆಯಲ್ಲಿ ದೇವಸ್ಥಾನದಿಂದ ತೆರಳಿದ ದೇವರ ಮೆರವಣಿಗೆ ನೇರವಾಗಿ ತೇರು ಮೈದಾನಕ್ಕೆ ಆಗಮಿಸಿತ್ತು. ಒಂದು ಗಂಟೆಗಳ ಕಾಲ ತೇರು ಎಳೆಯುವ ಕಾರ್ಯಕ್ರಮ ಜರುಗಿತು.

ಪಟ್ಟಣದ ಹಿರೇಮಠ ಸಂಸ್ಥಾನದ ರೇಣುಕ ವೀರ ಗಂಗಾಧರ ಸ್ವಾಮಿಗಳನ್ನು ರಥದಲ್ಲಿ ಕೂರಿಸಿ, ಶಾಸಕ ರಾಜಶೇಖರ ಪಾಟೀಲ, ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ಜಿಪಂ ಮಾಜಿ ಸದಸ್ಯ ವೀರಣ್ಣಾ ಪಾಟೀಲ, ತಹಶೀಲ್ದಾರ್‌ ನಾಗಯ್ನಾ ಹಿರೇಮಠ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಭೀಮರಾವ ಪಾಟೀಲ, ಬಸವರಾಜ ಆರ್ಯ, ಮಹಾಂತಯ್ನಾ ತೀರ್ಥಾ ಸೇರಿದಂತೆ ಇತರೆ ಗಣ್ಯರು ರಥ ಎಳೆಯುಲು ಚಾಲನೆ ನೀಡಿದರು.

ನಂತರ ಭಕ್ತ ಮಂಡಳಿ ರಥವನ್ನು ಬಸವಣ್ಣ ಕಟ್ಟೆಯ ವೆರೆಗೆ ಎಳೆದರು. ನಂತರ ರಥದಲ್ಲಿದ್ದ ಗಂಗಾಧರ ಶಿವಾಚಾರ್ಯರು ಬಾಳೆ ಹಣ್ಣು, ದುಡ್ಡು, ಖಾರಿಕಗಳು ಭಕ್ತರ ಕಡೆಗೆ ಎಸೆದು ಆಶೀರ್ವದಿಸಿದರು. ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ಘಟಿಸದಂತೆ ಡಿವೈಎಸ್‌ಪಿ ಶೀವಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ್‌, ಪಿಎಸ್‌ಐ ರವಿಕುಮಾರ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.