ವಿಧಾನ ಪರಿಷತ್‌ ಟಿಕೆಟ್‌ ಪಡೆಯಲು ಜೋರಾಗಿದೆ ಕಸರತ್ತು


Team Udayavani, Nov 10, 2021, 1:08 PM IST

16vote

ಮಸ್ಕಿ: ರಾಜ್ಯ ವಿಧಾನ ಪರಿಷತ್‌ ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹಾಲಿ ಎಂಎಲ್‌ಸಿ ಬಸವರಾಜ ಪಾಟೀಲ್‌ ಇಟಗಿ ಪ್ರತಿನಿಧಿಸಿದ್ದ ರಾಯಚೂರು-ಕೊಪ್ಪಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಟಿಕೆಟ್‌ ಪೈಪೋಟಿ ಪ್ರಬಲವಾಗಿ ನಡೆದಿದೆ.

2015ರಲ್ಲಿ ಈ ಕ್ಷೇತ್ರಕ್ಕೆ ಚುನಾಯಿತರಾಗಿ ಆಯ್ಕೆಯಾಗಿದ್ದ ಬಸವರಾಜ ಪಾಟೀಲ್‌ ಇಟಗಿ ಪುನಃ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದರಿಂದ ಹೊಸ ಮುಖಗಳಿಂದ ಕಳೆದೊಂದು ತಿಂಗಳಿಂದಲೂ ಟಿಕೆಟ್‌ಗೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಈಗ ಚುನಾವಣೆಗೆ ಅಧಿಸೂಚನೆ ಹೊರ ಬಿದ್ದಿದ್ದು ಸ್ಥಳೀಯ ಸಂಸ್ಥೆ ಚುನಾಯಿತರು ವೋಟ್‌ ಮಾಡುವ ಈ ಸ್ಥಾನದ ಚುನಾವಣೆಗೆ ಈಗ ಮತ್ತಷ್ಟು ಮಹತ್ವ ಬಂದಿದೆ.

ಮೂರು ಹೆಸರು ಪ್ರಸ್ತಾಪ

2015ರಲ್ಲಿ ರಾಯಚೂರು-ಕೊಪ್ಪಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಕ್ಷೇತ್ರಕ್ಕೆ ಚುನಾವಣೆ ನಡೆದಾಗ ಆಗ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಬಸವರಾಜ ಪಾಟೀಲ್‌ ಇಟಗಿ (3441 ಪಡೆದ ಮತ) 328 ಮತಗಳ ಅಂತರದಿಂದ ವಿಜೇತರಾಗಿದ್ದರು. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಸಿ.ವಿ.ಚಂದ್ರಶೇಖರ (3113) ಪರಾಭವಗೊಂಡಿದ್ದರು. ಈಗ ಇದೇ ಸ್ಥಾನಕ್ಕೆ ಡಿ.10ರಂದು ಮತದಾನ ದಿನಾಂಕ ಘೋಷಣೆ ಮಾಡಲಾಗಿದೆ. ಈಗ ನಡೆಯುವ ಈ ಸ್ಥಾನಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡು ಪಕ್ಷದಲ್ಲೂ ಟಿಕೆಟ್‌ಗೆ ಪೈಪೋಟಿ ಆರಂಭವಾಗಿದೆ. ಅದರಲ್ಲೂ ಈ ಬಾರಿ ಕಾಂಗ್ರೆಸ್‌ನಲ್ಲಿ ಆಂತರಿಕ ಪೈಪೋಟಿ ಹೆಚ್ಚಾಗಿದೆ. ರಾಯಚೂರು ಜಿಲ್ಲಾ ಕಾಂಗ್ರೆಸ್‌ ಮುಖಂಡರ ಬಳಿ ಮೂವರ ಹೆಸರು ಇದುವರೆಗೆ ಪ್ರಸ್ತಾಪವಾಗಿವೆ.

ಶರಣಗೌಡ ಪಾಟೀಲ್‌ ದೇವದುರ್ಗ, ರಾಮಣ್ಣ ಇರಬಗೇರಾ, ಮಲ್ಲಿಕಾರ್ಜುನ ಪಾಟೀಲ್‌ ಯದ್ದಲದಿನ್ನಿ ಮೂವರು ಆಕಾಂಕ್ಷಿಗಳಿರುವ ಪಟ್ಟಿಯನ್ನು ಜಿಲ್ಲಾ ಕಾಂಗ್ರೆಸ್‌ ಕೆಪಿಸಿಸಿ ಕಚೇರಿಗೆ ಕಳುಹಿಸಿದೆ. ಆದರೆ ಇದರಲ್ಲಿ ಮಸ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಯದ್ದಲದಿನ್ನಿ ಹೆಸರು ಮುಂಚೂಣಿಯಲ್ಲಿದೆ. ರಾಯಚೂರು, ಕೊಪ್ಪಳ ಎರಡು ಜಿಲ್ಲೆಯ ಕಾಂಗ್ರೆಸ್‌ನ ಹಿರಿಯ ಮುಖಂಡರು, ರಾಜ್ಯಮಟ್ಟದ ನಾಯಕರು ಕೂಡ ಮಲ್ಲಿಕಾರ್ಜುನ ಪಾಟೀಲ್‌ ಯದ್ದಲದಿನ್ನಿ ಅವರಿಗೆ ಟಿಕೆಟ್‌ ನೀಡಲು ಹೆಚ್ಚು ಒಲವು ತೋರುತ್ತಿರುವುದರಿಂದ ಮಸ್ಕಿ ರಾಜಕೀಯ ವಲಯದಲ್ಲೂ ಸಂಚಲನ ಉಂಟು ಮಾಡಿದೆ. ಇದಕ್ಕಾಗಿ ಪ್ರಚಾರದ ಪೂರ್ವ ತಯಾರಿ ಕೂಡ ಬಲವಾಗಿ ನಡೆದಿವೆ.

ಇಲ್ಲೂ ಪೈಪೋಟಿ

ಬಿಜೆಪಿಯಲ್ಲೂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಕಳೆದ ಬಾರಿ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದ ಸಿ.ವಿ.ಚಂದ್ರಶೇಖರ ಪುನರ್‌ ಸ್ಪರ್ಧೆಗೆ ಆಸಕ್ತಿ ತೋರಿದ್ದರೆ, ಇವರ ಜತೆಗೆ ಜಿಲ್ಲೆಯ ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ವಿಶ್ವನಾಥ ಲಿಂಗಸುಗೂರು, ಶರಣು ತಳ್ಳಿಕೇರಿ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿಯಲ್ಲೂ ಎಂಎಲ್ಸಿ ಟಿಕೆಟ್‌ ಗಿಟ್ಟಿಸಲು ಬಲವಾದ ಪೈಪೋಟಿ ನಡೆದಿದ್ದು ಯಾರಿಗೆ ಫೈನಲ್‌ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮಡಿಕೇರಿ: ಬಿಜೆಪಿ ಪ್ರಮುಖರು, ನಗರಸಭಾ ಸದಸ್ಯರನ್ನು ವಶಕ್ಕೆ ಪಡೆದ ಪೊಲೀಸರು

ಆರ್ಥಿಕ ಬಲ ಮಾನದಂಡ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ “ಲಕ್ಷ್ಮೀ’ ಪುತ್ರರನ್ನೇ ಕಣಕ್ಕೆ ಇಳಿಸಬೇಕು ಎಂಬುದು ಕಾಂಗ್ರೆಸ್‌, ಬಿಜೆಪಿ ಮುಖಂಡರ ಇರಾದೆ. ಹೀಗಾಗಿ ಎರಡು ಪಕ್ಷದಿಂದ ಎಂಎಲ್ಸಿ ಸ್ಥಾನದ ಟಿಕೆಟ್‌ಗೆ ಬೇಡಿಕೆ ಇಟ್ಟ ವ್ಯಕ್ತಿಗಳನ್ನು ಅಳೆದೂ ತೂಗಿ ಲೆಕ್ಕ ಹಾಕಲಾಗುತ್ತಿದೆ. ಎರಡು ಜಿಲ್ಲೆಯಲ್ಲೂ ಉತ್ತಮ ಹೆಸರು, ಮುಖಂಡರ ಜತೆಗಿನ ಒಡನಾಟ ಜತೆಗೆ ಸ್ಥಳೀಯ ಸಂಸ್ಥೆಗಳ(ಜಿಪಂ, ತಾಪಂ, ಗ್ರಾಪಂ) ಸದಸ್ಯರನ್ನು ಸೆಳೆಯುವ ಬಲ ಇರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ.

ಎಂಎಲ್ಸಿ ಸ್ಥಾನಕ್ಕೆ ಸ್ಪರ್ಧೆ ಮಾಡಲು ಜಿಲ್ಲೆಯಲ್ಲಿ ಹಲವು ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಮೂವರಿಂದ ನಾಲ್ಕು ಜನರ ಹೆಸರು ಪಟ್ಟಿ ಮಾಡಿಕೊಂಡಿದ್ದೇವೆ. ಇವರ ಹೆಸರನ್ನು ಹೈಕಮಾಂಡ್‌ಗೆ ಸಲ್ಲಿಸುತ್ತೇವೆ. -ರಮಾನಂದ ಯಾದವ್‌, ಬಿಜೆಪಿ ಜಿಲ್ಲಾಧ್ಯಕ್ಷ, ರಾಯಚೂರು

ಈ ಬಾರಿ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ಮಾಡಲು ಕೊಪ್ಪಳ-ರಾಯಚೂರು ಎರಡು ಜಿಲ್ಲೆಯ ಹಿರಿಯ ಮುಖಂಡರು ಸಲಹೆ ನೀಡಿದ್ದಾರೆ. ಹೀಗಾಗಿ ನಾನು ಸ್ಪರ್ಧೆ ಮಾಡಲು ಇಚ್ಛಿಸಿದ್ದೇನೆ. ವರಿಷ್ಠರು ಕೂಡ ಟಿಕೆಟ್‌ ನೀಡುವ ಭರವಸೆ ನೀಡಿದ್ದಾರೆ. -ಮಲ್ಲಿಕಾರ್ಜುನ ಯದ್ದಲದಿನ್ನಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಸ್ಕಿ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.