ಜ್ಞಾನಾಭಿವೃದ್ದಿಗೆ ವಿದ್ಯಾಸೇತು ಕೈಪಿಡಿ ಪೂರಕ
Team Udayavani, Dec 9, 2021, 1:15 PM IST
ಭಾಲ್ಕಿ: ವಿದ್ಯಾರ್ಥಿಗಳ ಜ್ಞಾನಾರ್ಜನೆ ಹೆಚ್ಚಿಸಲು ವಿದ್ಯಾಸೇತು ಕೈಪಿಡಿ ಪೂರಕ ಆಗಿವೆ ಎಂದು ಬೀದರ್ ರೋಟರಿ ಕ್ಲಬ್ನ ಜಿಲ್ಲಾ ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ ಹೇಳಿದರು.
ತಾಲೂಕಿನ ಮದಕಟ್ಟಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಬೀದರ್ ರೋಟರಿ ಕ್ಲಬ್ ವತಿಯಿಂದ ನಡೆದ ವಿದ್ಯಾಸೇತು ಕೈಪಿಡಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ ಸಂಸ್ಥೆಯದ್ದು ಸೇವೆಯೇ ಮೂಲ ಧ್ಯೇಯವಾಗಿದೆ. ಸಾಮಾಜಿಕ ಕೆಲಸಗಳ ಮೂಲಕ ಈ ಸಂಸ್ಥೆ ವಿಶಿಷ್ಟವಾಗಿ ಗುರುತಿಸಿ ಕೊಂಡಿದೆ. ಸುಮಾರು 200ಕ್ಕೂ ಅಧಿಕ ದೇಶಗಳಲ್ಲಿ ರೋಟರಿ ಕ್ಲಬ್ ಸಂಸ್ಥೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. 14 ಲಕ್ಷ ಸದಸ್ಯರು ಈ ಸಂಸ್ಥೆಯೊಂದಿಗೆ ಗುರುತಿಸಿ ಕೊಂಡು ತನು, ಮನ, ಧನದಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
ತಾಲೂಕು ಕಸಾಪದ ನಿಕಟ ಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿ, ರೋಟರಿ ಅನ್ನುವ ಹೆಸರಿನಲ್ಲಿಯೇ ಅದ್ಭುತ ಶಕ್ತಿ ಅಡಗಿದೆ. ಪೋಲಿಯೋ ನಿರ್ಮೂಲನೆಯಲ್ಲಿ ಈ ಸಂಸ್ಥೆಯ ಪಾತ್ರ ದೊಡ್ಡದಿದೆ. ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿಯು ರೋಟರಿ ಕ್ಲಬ್ ವಿಶಿಷ್ಟವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಆಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಗುರು ಅಶೊಕ ಬರ್ಮಾ ಮಾತನಾಡಿದರು. ಈ ಸಂದರ್ಭದಲ್ಲಿ ಬೀದರ ರೋಟರಿ ಕಾರ್ಯದರ್ಶಿ ಅನಿಲಕುಮಾರ ಔರಾದೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಂಗಮೇಶ ಹುಣಜೆ, ಶಿಕ್ಷಕರಾದ ದೀಪಕ ಹೊನ್ನಾಳೆ, ಶಿವಶರಣಪ್ಪ ಬಿರಾದಾರ್, ಕವಿರತ್ನ ಬರ್ಮಾ, ಲೋಕೇಶ ಸಿದ್ದೇಶ್ವರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ