ದೇವರ ಸ್ಮರಣೆ-ತೀರ್ಥಯಾತ್ರೆಯಿಂದ ಸಾರ್ಥಕತೆ


Team Udayavani, Jan 26, 2018, 2:36 PM IST

bid-2.jpg

ಬಸವಕಲ್ಯಾಣ: ದೇವರ ಸ್ಮರಣೆ, ತೀರ್ಥಯಾತ್ರೆ ಜೀವನದಲ್ಲಿ ಸಾರ್ಥಕತೆ ತಂದು ಕೊಡುತ್ತದೆ ಎಂದು ಹುಮನಾಬಾದನ ವಿಶ್ವಕರ್ಮ ಏಕದಂಡಗಿ ಶಾಖಾ ಮಠದ ಶ್ರೀ ಕುಮಾರ ಸ್ವಾಮೀಜಿ ನುಡಿದರು.

ನಗರದ ಮೌನೇಶ್ವರ ದೇವಸ್ಥಾನದಲ್ಲಿ ವಿಶ್ವಕರ್ಮ ಜಗದ್ಗುರು ಶ್ರೀಮೌನೇಶ್ವರರ 8ನೇ ವರ್ಷದ ಜಾತ್ರಾ ಮಹೋತ್ಸವ ನಿಮಿತ್ತ ಗುರುವಾರ ನಡೆದ ಧರ್ಮ ಸಭೆ ನೇತೃತ್ವ ವಹಿಸಿ ಅವರು ಆಶೀರ್ವಚನ ನೀಡಿದರು.

ಸಾಲ ಮಾಡಿ ಮೊಬೈಲ್‌ ಖರೀದಿಸಬಾರದು. ಸಾಲ ಮಾಡಿಯಾದರೂ ತೀರ್ಥ ಯಾತ್ರೆಗೆ ಹೋಗಬೇಕು, ಇದರಿಂದ ಪುಣ್ಯ ಬರುತ್ತದೆ. ಯುವಕರು ಆರೋಗ್ಯಕ್ಕೆ ಹಾನಿಕರವಾಗುವ ಯಾವುದೇ ದುಶ್ಚಟಗಳಿಗೆ ಆಕರ್ಷಿತರಾಗದೇ ಸದ್ಗುರು ಮೌನೇಶ್ವರ ನಾಮ ಸ್ಮರಣೆ ಮಾಡುವ ಹವ್ಯಾಸ ಬೆಳೆಸಿಕೊಳ್ಳಿ. ಜೀವನ ಎನ್ನುವುದನ್ನು ಅರಿತುಕೊಳ್ಳಬೇಕು ಎಂದರು.

ಉದ್ಘಾಟನೆ ನೆರವೇರಿಸಿದ ಬಿಕೆಡಿಬಿ ಸದಸ್ಯ ಶಿವರಾಜ ನರಶೆಟ್ಟಿ ಮಾತನಾಡಿ, ಗುರು ಬಸವಣ್ಣನವರ ಕಾಯಕ ಭೂಮಿ ಬಸವಕಲ್ಯಾಣದಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ ಬರುವ ಬಜೆಟ್‌ನಲ್ಲಿ ಅನುದಾನ ಕಲ್ಪಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು. 

ಜಿಪಂ ಸದಸ್ಯ ಸುಧೀರ ಕಾಡಾದಿ ಮಾತನಾಡಿ, ಮೌನೇಶ್ವರ ದೇವಸ್ಥಾನದ ಮಹಾದ್ವಾರ ನೀರ್ಮಾಣಕ್ಕಾಗಿ ವೈಯಕ್ತಿಕವಾಗಿ ಸಹಾಯ ಧನ ನೀಡಲಾಗುವುದು ಎಂದರು.

ಸಾನ್ನಿಧ್ಯ ವಹಿಸಿದ್ದ ತ್ರಿಪುರಾಂತನ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು, ಸಸ್ತಾಪುರ ಶ್ರೀ ಸದಾನಂದ ಅಪ್ಪಗಳು, ಹಿರನಾಗಾಂವನ ಶ್ರೀ ಜೈಶಾಂತಲಿಂಗ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ
ಶಾಸಕ ಎಂ.ಜಿ. ಮುಳೆ, ಬಿಜೆಪಿ ಮುಖಂಡ ರವಿ ಚಂದನಕೆರೆ ಮಾತನಾಡಿದರು. 

ಜಿಪಂ ಮಾಜಿ ಅಧ್ಯಕ್ಷ ಅನೀಲ ಭುಸಾರೆ, ತಾಪಂ ಸದಸ್ಯೆ ಶಾಂತಮ್ಮ ಪಂಚಾಳ, ಮುಖಂಡರಾದ ಸಂಜಯ
ಪಟವಾರಿ, ಲಿಂಗರಾಜ ಪಾಟೀಲ ಅಟ್ಟೂರ, ವಿಜಯಕುಮಾರ ಮಂಠಾಳೆ, ಪ್ರದೀಪ ವಾತಡೆ, ನಗರಸಭೆ ಉಪಾಧ್ಯಕ್ಷೆ
ಚಮ್ಮಾಬಾಯಿ ಮಾಳಿ, ಬಾಳಾಸಾಹೇಬ ಕುಲ್ಕರ್ಣಿ, ಚನ್ನಪ್ಪ ರಾಜಾಪೂರೆ, ವೀರಣ್ಣ ಪಂಚಾಳ, ಸಮಾಜದ ಅಧ್ಯಕ್ಷ
ತಿಪ್ಪಣ್ಣ ಪಂಚಾಳ, ಹರಿಶ್ಚಂದ್ರ ಪಂಚಾಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು. 

ವಿಜಯಕುಮಾರ ಪಂಚಾಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ವೈಜಿನಾಥ ಪಂಚಾಳ ನಿರೂಪಿಸಿದರು.
ರಾಜಶೇಖರ ಶೀಲವಂತ ಪ್ರಾರ್ಥನಾ ಗೀತೆ ಹಾಡಿದರು. ಇದಕ್ಕೂ ಮುನ್ನ ನಗರದಲ್ಲಿ ಮೌನೇಶ್ವರರ ಉತ್ಸವ ಮೂರ್ತಿಯ ಪಲ್ಲಕಿ ಮೆರವಣಿಗೆ ಜರುಗಿತು. ಡೊಳ್ಳು ಕಲಾವಿದರಿಂದ ದೊಳ್ಳು ಕುಣಿತ, ಪುರವಂತರಿಂದ ನಡೆದ ಪ್ರದರ್ಶನ ಗಮನ ಸೆಳೆಯಿತು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.