ಅನುಭವ ಮಂಟಪಕ್ಕೆ ಶಾ ಭೇಟಿ


Team Udayavani, Feb 27, 2018, 12:43 PM IST

bid-2.jpg

ಬಸವಕಲ್ಯಾಣ (ಬೀದರ):ವಿಶ್ವದ ಪ್ರಥಮ ಪಾರ್ಲಿಮೆಂಟ್‌ ಎಂದೆನಿಸಿಕೊಂಡಿರು12ವ ಬಸವಕಲ್ಯಾಣದ ಅನುಭವ ಮಂಟಪಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ  ಭೇಟಿ ಬೆನ್ನಲ್ಲೇ ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಭೇಟಿ ನೀಡಿ ಬಸವೇಶ್ವರರ ದರ್ಶನ ಪಡೆದರು. ಬಸವ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಧನ್ಯತೆ ವ್ಯಕ್ತಪಡಿಸಿದರು. ಈ ವೇಳೆ ಒಂದು ಶಬ್ದವನ್ನೂ ಮಾತನಾಡದಿರುವುದು ಬಸವಾನುಯಾಯಿಗಳಲ್ಲಿ ಬೇಸರ ಮೂಡಿಸಿತು.

ಸೇಡಂನಿಂದ ಹೆಲಿಕಾಪ್ಟರ್‌ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಿ ನೆರವಾಗಿ ಅನುಭವ ಮಂಟಪಕ್ಕೆ ತೆರಳಿದ ಅಮಿತ್‌ ಶಾ ಅವರಿಗೆ ಅನುಭವ ಮಂಟಪ ಟ್ರಸ್ಟ್‌ನಿಂದ ಸ್ವಾಗತ ಕೋರಲಾಯಿತು. ಟ್ರಸ್ಟ್‌ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದ್ದೇವರು ಶಾ ಅವರ ಹಣೆಗೆ ವಿಭೂತಿ ಹಚ್ಚಿ, ರುದ್ರಾಕ್ಷಿ ಮಾಲೆ ಹಾಕಿದರು. ನಂತರ ಶಾಲು, ಪೇಟಾ ಹಾಕಿ ಸನ್ಮಾನ ಮಾಡಿದರು. ಬಸವಣ್ಣನ ನೇತೃತ್ವದಲ್ಲಿ ಶರಣರು ನಡೆಸುತಿದ್ದ ಚಿಂತನೆಯ ಪರಿಕಲ್ಪನೆಯುಳ್ಳ ಭಾವಚಿತ್ರವನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಿದರು. ತದನಂತರ ನೂತನ
ಅನುಭವ ಮಂಟಪ ಮಾದರಿಯ ವಿನ್ಯಾಸದ ಬಗ್ಗೆ ಪಟ್ಟದ್ದೇವರಿಂದ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಪಟ್ಟದ್ದೇವರು, 12ನೇ ಶತಮಾನದಲ್ಲಿ ಬಸವಣ್ಣ ಸ್ಥಾಪಿಸಿದ ಅನುಭವ ಮಂಟಪ ವಿಶ್ವದ ಮೊದಲ ಪಾರ್ಲಿಮೆಂಟ್‌ ಆಗಿದೆ. ರಾಜಾಶ್ರಯದ ಕಾಲದಲ್ಲಿ ಪ್ರಜಾಪ್ರಭುತ್ವದ ಮೌಲ್ಯವನ್ನು ಕೊಟ್ಟಿರುವ ಕೇಂದ್ರ ಇದಾಗಿದೆ. ಜಾತಿ- ವರ್ಗ ರಹಿತ, ಹೊಸ ಸಮಾಜ ನಿರ್ಮಾಣಕ್ಕಾಗಿ ಬಸವಣ್ಣನ ನೇತೃತ್ವದಲ್ಲಿ ಮಹಾನ್‌ ಕ್ರಾಂತಿ ಈ ನೆಲದಲ್ಲಿ ನಡೆದಿದೆ. ಸಂಸತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನುಭವ ಮಂಟಪದ ಬಗ್ಗೆ ಪ್ರಸ್ತಾಪಿಸುವ ಮೂಲಕ ಪವಿತ್ರ ಕೇಂದ್ರದ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ ಎಂದು ಸ್ಮರಿಸಿದರು.

ವಿಶಿಷ್ಟ ಕ್ಷೇತ್ರ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿ ಬೆಳೆಯುವ ಮೂಲಕ ಜಗತ್ತಿಗೆ ಬಸವಣ್ಣನವರ ಸಂದೇಶಗಳನ್ನು ಸಾರಬೇಕಿದೆ. ಗುರುನಾನಕ ಜಯಂತಿ ಮಾದರಿಯಲ್ಲಿ ಬಸವಣ್ಣನವರ ಜಯಂತಿಯನ್ನು ಭಾರತ ಸರ್ಕಾರದಿಂದ ದೇಶಾದ್ಯಂತ ಆಚರಣೆಗೆ ತರಬೇಕು ಎಂದು ಮನವಿ ಮಾಡಿದ ಡಾ.ಪಟ್ಟದ್ದೇವರು, ಪ್ರಧಾನಿ ಮೋದಿ ಚಂದ್ರಗುಪ್ತನಾದರೆ, ಅಮಿತ್‌ ಶಾ ಚಾಣುಕ್ಯ ಆಗಿದ್ದಾರೆ ಎಂದು ಬಣ್ಣಿಸಿದರು. 

ಅನುಭವ ಮಂಟಪದಲ್ಲಿ ದರ್ಶನ ಪಡೆದ ಬಳಿಕ ಒಂದು ಶಬ್ದವನ್ನೂ ಮಾತನಾಡದಿರುವುದು, ಬಸವಾದಿ ಶರಣರು ಮತ್ತು ಮಂಟಪದ ಐತಿಹಾಸಿಕ ಮಹತ್ವ ಕುರಿತು ಮಾಹಿತಿಯನ್ನೂ ಪಡೆಯದಿರುವುದು ನೆರೆದಿದ್ದ ಬಸವ ಭಕ್ತರಲ್ಲಿ ನಿರಾಶೆ ಮೂಡಿಸಿತು.

ಡಾ| ಚನ್ನವೀರ ಶಿವಾಚಾರ್ಯರು, ಶ್ರೀ ಶಿವಾನಂದ ಸ್ವಾಮೀಜಿ, ಶ್ರೀ ಗುರುಬಸವ ಪಟ್ಟದ್ದೇವರು, ಡಾ| ರಾಜಶೇಖರ ಸ್ವಾಮಿ ಗೋರ್ಟಾ, ಅಕ್ಕ ಅನ್ನಪೂರ್ಣತಾಯಿ, ಡಾ| ಗಂಗಾಂಬಿಕಾ ಪಾಟೀಲ, ಶ್ರೀ ಶಿವಾನಂದ ದೇವರು, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಸಹ ಪ್ರಭಾರಿ ಪುರಂದೇಶ್ವರಿ, ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ, ಸಂಸದ ಭಗವಂತ ಖೂಬಾ, ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಮತ್ತು ಗುರುನಾಥ ಕೊಳ್ಳೂರ್‌ ಇದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.