ಮಕ್ಕಳ ಹಸಿವು ಹಂಗಿಸುತ್ತಿದೆ ಉಚಿತ ಡೈರಿ ಹಾಲು


Team Udayavani, Apr 16, 2020, 5:32 PM IST

16-April-30

ವಾಡಿ: ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನ ಹಿಂಭಾಗದ ಬಡಾವಣೆಯ ಬಡ ಕುಟುಂಬಗಳ ಮಕ್ಕಳು ಉಚಿತ ಹಾಲಿನಿಂದ ವಂಚಿತರಾಗಿದ್ದಾರೆ

ವಾಡಿ: ಕೊರೊನಾ ಸಂಕಟದಲ್ಲಿ ಸಿಲುಕಿ ಕೂಲಿಯಿಲ್ಲದೆ ನರಳುತ್ತಿರುವ ಬಡ ಕುಟುಂಬಗಳಿಗೆ ಉಚಿತವಾಗಿ ಹಾಲು ವಿತರಿಸುವ ಕಾರ್ಯಕ್ಕೆ ಸ್ಥಳೀಯ ಆಡಳಿತಗಳಿಂದ ಚಾಲನೆ ದೊರೆತಿದ್ದು, ಹಸಿದವರನ್ನು ಬಿಟ್ಟು ಹೊಟ್ಟೆ ತುಂಬಿದವರ ಮನೆಗೆ ಡೈರಿ ಪ್ಯಾಕೇಟ್‌ಗಳು ತಲುಪುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ.

ಲಾಕ್‌ಡೌನ್‌ ಅಂತ್ಯದ ವರೆಗೂ ಪುರಸಭೆ ವ್ಯಾಪ್ತಿಯ ಬಡವರು, ನಿರ್ಗತಿಕರು ಹಾಗೂ ಊಟ ವಸತಿಗಾಗಿ ಪರದಾಡುತ್ತಿರುವವರಿಗೆ ನೆರವಾಗಬೇಕು ಎನ್ನುವ ಕಾರಣಕ್ಕೆ ಆಹಾರ ಮತ್ತು ನಂದಿನಿ ಡೈರಿ ಹಾಲನ್ನು ಪ್ರತಿನಿತ್ಯ ಉಚಿತವಾಗಿ ಮನೆ ಮನೆಗೆ ತಂದು ವಿತರಿಸಬೇಕು ಎನ್ನುವ ಆದೇಶ ಸರಕಾರದಿಂದ ಹೊರಬಿದ್ದಿದೆ. ಆದರೆ ವಿತರಣೆಯಲ್ಲಿ ರಾಜಕೀಯ ಸೇರಿಕೆಯಾಗಿದ್ದು, ಸ್ಥಿತಿವಂತರೂ ಹಾಲಿಗೆ, ಊಟಕ್ಕೆ ಕೈಯೊಡ್ಡುತ್ತಿದ್ದಾರೆ.

ಹಸಿದವರ ಮಕ್ಕಳು ಮಾತ್ರ ನಮಗೂ ಹಾಲು ಬರುತ್ತದೆ ಎಂದು ಕಾಯ್ದು ಕುಳಿತು ನಿರಾಸೆ ಅನುಭವಿಸುತ್ತಿದ್ದಾರೆ. ಪೌರಕಾರ್ಮಿಕರು ವಾಹನದಲ್ಲಿ ಸಾಗಿಸುವ ಹಾಲುಗಳತ್ತ ದೃಷ್ಟಿ ನೆಡುತ್ತಿರುವ ಬಡ ಮಕ್ಕಳು, ಹಾಲು ಕೊಡಿ ಎಂದು ಕೈಚಾಚುತ್ತಿದ್ದರೂ ಸಿಬ್ಬಂದಿ ನೋಡಿಯೂ ನೋಡದಂತೆ ಬೇರೆ ಬಡಾವಣೆಗಳಿಗೆ ಹೋಗುತ್ತಿದ್ದಾರೆ. ಪುರಸಭೆಯ ವಾರ್ಡ್‌ 13ರ ಮಲ್ಲಿಕರ್ಜುನ ದೇವಸ್ಥಾನ ಹಿಂಭಾಗದ ಸಣ್ಣ ಬಡಾವಣೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಬಡ ಕುಟುಂಬಗಳು ಆಶ್ರಯ ಪಡೆದಿವೆ. ಕಳೆದ ಒಂದು ವಾರದಿಂದ ವಿವಿಧ ಬಡಾವಣೆಗಳಿಗೆ ಹಾಲು ವಿತರಿಸಲಾಗುತ್ತಿದೆ. ಆದರೆ ಈ ಬಡಾವಣೆಯ ಮಕ್ಕಳಿಗೆ ಒಮ್ಮೆಯೂ ಹಾಲು ತಲುಪಿಲ್ಲ. ಹೋಟೆಲ್‌ಗ‌ಳಲ್ಲಿ ಪಾತ್ರೆ ತೊಳೆಯುವ, ಮನೆಗಳಲ್ಲಿ ಬಟ್ಟೆ ಒಗೆಯುವ, ಕಟ್ಟಡ ಕಾರ್ಮಿಕರು, ದಿನಗೂಲಿ ಕಾರ್ಮಿಕರು ಇಲ್ಲಿ ವಾಸವಿದ್ದಾರೆ.

ಇತರ ಸ್ಲಂ ಬಡಾವಣೆಗಳಲ್ಲೂ ಬಡತನ ಭೀಕರವಾಗಿ ಕಾಡುತ್ತಿದೆ. ಇವೆಲ್ಲ ಕುಟುಂಬಗಳಿಗೆ ಸರಿಯಾಗಿ ಹಾಲು ವಿತರಣೆಯಾಗುತ್ತಿಲ್ಲ ಎಂದು ಎಐಯುಟಿಯುಸಿ ಕಾರ್ಮಿಕ ಸಂಘಟನೆ ಸಂಚಾಲಕ ಶರಣು ಎಸ್‌.ಕೆ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.