ಅಡವಿಯಲ್ಲಿ ಮೇವಿಗಾಗಿ ಹಸುಗಳ ಅಲೆದಾಟ


Team Udayavani, May 23, 2020, 4:40 PM IST

23-May-18

ಸಾಂದರ್ಭಿಕ ಚಿತ್ರ

ವಾಡಿ: ನಾಗಾವಿ ನಾಡು, ಗಲ್ಲು ಗಣಿಗಳ ತವರು, ಸಿಮೆಂಟ್‌ ಕಾಶಿ ಚಿತ್ತಾಪುರ ತಾಲೂಕಿಗೆ ಈ ವರ್ಷ ಎರಡು ರೀತಿಯಿಂದ ಹೊಡೆತ ಬಿದ್ದಿದೆ. ಒಂದೆಡೆ ಮನುಷ್ಯರಿಗೆ ಮಹಾಮಾರಿ ಕೋವಿಡ್ ಕಾಡುತ್ತಿದ್ದರೆ, ಇನ್ನೊಂದೆಡೆ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.

ಬರದ ಛಾಯೆ ಮಧ್ಯೆ ತಾಲೂಕಿನ ಜನರು ಜೀವ ರಕ್ಷಣೆಗೆ ಪರದಾಡುವಂತಾಗಿದೆ. ಭೀಮಾ ಮತ್ತು ಕಾಗಿಣಾ ನದಿಗಳು ಬತ್ತಿದ್ದರಿಂದ ವಾಡಿ, ನಾಲವಾರ, ಚಿತ್ತಾಪುರ ಹೋಬಳಿ ವ್ಯಾಪ್ತಿಯ ಅಡವಿಗಳಲ್ಲಿ ನೀರು ಮತ್ತು ಮೇವಿನ ಕೊರತೆ ಉಂಟಾಗಿದೆ. ಹಸಿದ ಹಸುಗಳ ದಂಡು ಆಹಾರಕ್ಕಾಗಿ ಎಲ್ಲೆಂದರಲ್ಲಿ ಅಲೆಯುತ್ತಿವೆ. ಹಳಕರ್ಟಿ, ಲಾಡ್ಲಾಪುರ, ಕಮರವಾಡಿ, ಅಳ್ಳೊಳ್ಳಿ, ಕುಂಬಾರಹಳ್ಳಿ, ಸ್ಟೇಷನ್‌ ತಾಂಡಾ, ಬಳವಡಗಿ, ಕೊಂಚೂರು ಭಾಗದ ಅಡವಿಗಳಲ್ಲಿ ಜಾನುವಾರುಗಳು ಮೇವಿನ ಹಾಹಾಕಾರ ಎದುರಿಸುತ್ತಿವೆ.

ಬೇಸಿಗೆ ಕಳೆಯಲು ರಸ್ತೆಗಳ ಬದಿಯಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಿಸಲು ಗ್ರಾಪಂ ಆಡಳಿತಗಳಿಗೆ ವಿಶೇಷ ಅನುದಾನ ಬಿಡುಗಡೆಯಾಗಿದೆ. ಕಚೇರಿ ಕಡತಗಳಲ್ಲಿ ವರದಿಯೂ ದಾಖಲಾಗಿದೆ. ಬಹುತೇಕ ಕಡೆಗಳಲ್ಲಿ ನೀರಿನ ತೊಟ್ಟಿಗಳೇ ಕಾಣಸಿಗುವುದಿಲ್ಲ. ಅಲ್ಲೊಂದು ಇಲ್ಲೊಂದು ಕಂಡರೂ ಅವುಗಳಲ್ಲಿ ನೀರಿಲ್ಲ. ಜೋಳದ ಹೊಲಗಳಲ್ಲಿ ಕಣಕಿ ಬಣವೆಗಳನ್ನು ನಿರ್ಮಿಸಲಾಗಿದ್ದು, ಬೀಡಾಡಿ ದನಗಳಿಂದ ಮೇವು ರಕ್ಷಣೆಗೆ ಜಮೀನುದಾರರ ಆಳುಗಳು ಹೊಲ ಕಾಯುತ್ತಿದ್ದಾರೆ. ಮೇವಿಲ್ಲದ ಅಡವಿಯಲ್ಲಿ ಹಸುಗಳು ಮಣ್ಣು ಮೂಸಿ ನೋಡುತ್ತಿರುವ ಚಿಂತಾಜನಕ ದೃಶ್ಯಗಳು ಗೋಚರಿಸುತ್ತಿವೆ.

ಈ ವಿಷಯ ತಿಳಿದ ಶಾಸಕ ಪ್ರಿಯಾಂಕ್‌ ಖರ್ಗೆ ಸರಕಾರಕ್ಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದಾರೆ. ಚಿತ್ತಾಪುರ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಸರಕಾರ ಇನ್ನೂ ಸ್ಪಂದಿಸಿಲ್ಲ. ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಡ್ಡಾಯವಾಗಿ ನೀರಿನ ತೊಟ್ಟಿಗಳ ಸಂಖ್ಯೆ ಹೆಚ್ಚಿಸಬೇಕು ಮತ್ತು ಅವುಗಳಿಗೆ ನಿತ್ಯ ನೀರು ತುಂಬಿಸಬೇಕು ಎಂದು ರೈತ ಕೃಷಿ ಕಾರ್ಮಿಕ ಸಂಘ (ಆರ್‌ಕೆಎಸ್‌) ತಾಲೂಕು ಅಧ್ಯಕ್ಷ ರಾಘವೇಂದ್ರ ಅಲ್ಲಿಪುರ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.