ಸಿಮೆಂಟ್‌ ನಗರಿಯಲ್ಲಿ ಅನ್ನ-ನೀರಿಗೆ ಲಾರಿ ಚಾಲಕರ ಪರದಾಟ

144 ನಿಷೇಧಾಜ್ಞೆ: ವಾಡಿ ಸಂಪೂರ್ಣ ಸ್ತಬ್ಧ

Team Udayavani, Mar 21, 2020, 12:15 PM IST

21-March-7

ವಾಡಿ: ಕೊರೊನಾ ಹಿಂದೆಂದೂ ಕೇಳರಿಯದ ರೀತಿಯಲ್ಲಿ ಪ್ರಾಣ ಕಂಟಕವಾಗಿ ಕಾಡುತ್ತಿದ್ದು, 144ನೇ ಕಲಂ ಜಾರಿ ಆಗಿರುವುದರಿಂದ ಸಿಮೆಂಟ್‌ ನಗರಿ ಸಂಪೂರ್ಣ ಸ್ತಬ್ಧವಾಗಿದೆ.

ದೇಶದ ವಿವಿಧ ರಾಜ್ಯಗಳಿಂದ ಎಸಿಸಿ ಕಾರ್ಖಾನೆಗೆ ಬರುವ ಸಿಮೆಂಟ್‌ ಸಾಗಾಣಿಕೆ ಲಾರಿಗಳ ಚಾಲಕರು ಅನ್ನ-ನೀರಿಗಾಗಿ ಪರಿತಪಿಸುತ್ತಿದ್ದಾರೆ. ಹೋಟೆಲ್‌, ಖಾನಾವಳಿ, ದಾಭಾ, ಕ್ಯಾಂಟೀನ್‌ಗಳು ಬಾಗಿಲು ಮುಚ್ಚಿದ್ದರಿಂದ ಹಸಿವು ನೀಗಿಸಿಕೊಳ್ಳಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಪಟ್ಟಣದ ಪ್ರಮುಖ ವೃತ್ತಗಳಲ್ಲಿನ ಗೂಡಂಗಡಿಗಳಿಗೂ ಬೀಗ ಜಡಿದಿರುವ ಕೊರೊನಾ ಭೀತಿ ಕುಡಿಯಲು ಚಹಾ ಮತ್ತು ಬೊಗಸೆ ನೀರು ಸಿಗದಂತ ಪರಿಸ್ಥಿತಿ ಸೃಷ್ಟಿಸಿದೆ. ಹೋಟೆಲ್‌-ಖಾನಾವಳಿಗಳನ್ನೇ ನಂಬಿ ಬಂದಿರುವ ನೂರಾರು ಸಂಖ್ಯೆಯ ಲಾರಿ ಚಾಲಕರು, ಕ್ಲೀನರ್‌ಗಳು ಉಪಹಾರಕ್ಕಾಗಿ ಪಟ್ಟಣದ ಗಲ್ಲಿ-ಗಲ್ಲಿಗಳಲ್ಲಿ ಓಡಾಡಿ ತಿನ್ನಲು ಏನೂ ಸಿಗದೇ ಪರದಾಡುತ್ತಿದ್ದಾರೆ.

ಕೆಲವರು ಬಾಳೆ ಹಣ್ಣು, ದ್ರಾಕ್ಷಿ, ಟೋಮೋಟೊ ಹಣ್ಣುಗಳನ್ನು ತಿಂದು ದಿನ ದೂಡುತ್ತಿದ್ದಾರೆ. ಇನ್ನು ಕೆಲವರು ನರಕದ ಬದುಕು ಸಹಿಸಲಾಗದೆ ಲಾರಿಗಳನ್ನು ಇಲ್ಲೇ ಬಿಟ್ಟು, ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ. ವಿಶ್ವ ಭೂಪಟದಲ್ಲಿ ಹೆಸರು ನಮೂದಾಗಿರುವ ಸ್ಥಳೀಯ ಎಸಿಸಿ ಸಿಮೆಂಟ್‌ ಕಂಪನಿ ತನ್ನ ಉತ್ಪದನೆಯನ್ನು ದೇಶದಾದ್ಯಂತ ಸರಬರಾಜು ಮಾಡುವ ಲಾರಿ ಚಾಲಕರ ಕಷ್ಟ ಕೇಳಲು ಮುಂದಾಗದಿರುವುದು ಬೇಸರದ ಸಂಗತಿಯಾಗಿದೆ.

ವಾಡಿ ನಗರಕ್ಕೆ ಕಾಲಿಟ್ಟ ಗಳಿಗೆಯಿಂದ ಬಂದ್‌ ಬಿಸಿ ಅನುಭವಿಸುತ್ತಿರುವ ಚಾಲಕರು ಕೊರೊನಾ ಭೀತಿಯ ನಿಷೇಧಾಜ್ಞೆಗೆ ಸಿಲುಕಿ ಫಜೀತಿ ಅನುಭವಿಸುತ್ತಿದ್ದಾರೆ. ಊಟ, ವಸತಿ ಸೌಲಭ್ಯದ ಕೊರತೆಯಿಂದ ಕಂಪನಿಯ ಲಾರಿ ಯಾರ್ಡ್ ನಲ್ಲಿ ಕಳೆದ ನಾಲ್ಕು ದಿನಗಳಿಂದ ನೂರಾರು ಲಾರಿಗಳು ಚಾಲಕರಿಲ್ಲದೇ ನಿಂತಿವೆ. ಚಾಲಕರ ಸಮಸ್ಯೆಯಿಂದ ಸಿಮೆಂಟ್‌ ಚೀಲಗಳನ್ನು ಲೋಡ್‌ ಮಾಡಲಾಗುತ್ತಿಲ್ಲ. ಇದು ಸಿಮೆಂಟ್‌ ಉತ್ಪಾದನೆಯ ಆರ್ಥಿಕ ದುಸ್ಥಿತಿಗೂ ಕಾರಣವಾಗಿದೆ. ಲಾರಿ ಮಾಲೀಕರು ವಾಹನ ಬಾಡಿಗೆ ನಷ್ಟ ಅನುಭವಿಸುವಂತಾಗಿದೆ.

ಜಮ್ಮು ಮೂಲದ ಚಾಲಕನಿಗೆ ಮಾಲೀಕನ ಮನೆ ಊಟ: ಸಿಮೆಂಟ್‌ ಸಾಗಾಣಿಕೆಗಾಗಿ ವಾಡಿ ಎಸಿಸಿ ಕಾರ್ಖಾನೆಗೆ ಬಂದಿರುವ ಜಮ್ಮು-ಕಾಶ್ಮೀರ ಮೂಲದ ಲಾರಿ ಚಾಲಕ ಮಹ್ಮದ್‌ ಶಕೀಲ್‌ ಎಂಬಾತ ಕೊರೊನಾ ವೈರಸ್‌ ಭೀತಿಗೆ ಸಿಲುಕಿ ಊಟ, ವಸತಿ ತೊಂದರೆ ಅನುಭವಿಸಿದ ಪ್ರಸಂಗ ಬೆಳಕಿಗೆ ಬಂದಿದೆ. ಖಾನಾವಳಿ, ಹೋಟೆಲ್‌, ಅಂಗಡಿಗಳು ಮುಚ್ಚಿದ್ದರಿಂದ ಲಾರಿ ಮಾಲೀಕ ಅನ್ವರ್‌ ಪಟೇಲ ಕಡಬೂರ ಎನ್ನುವಾತ ತಮ್ಮ ಮನೆಯಿಂದ ಊಟ ಸರಬರಾಜು ಮಾಡುತ್ತಿದ್ದಾರೆ.

ಇನ್ನು ಕೆಲ ಚಾಲಕರು ಕಿರಾಣಿ ಅಂಗಡಿಯಿಂದ ಚುರುಮುರಿ ತಂದು, ಅದಕ್ಕೆ ಖಾರಾ- ಉಪ್ಪು ಬೆರೆಸಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಹೋಟೆಲ್‌, ಖಾನಾವಳಿ, ಟ್ರಾನ್ಸ್‌ಫೋರ್ಟ್‌ ಕಚೇರಿಗಳಲ್ಲಿ ಕೆಲಸ ಮಾಡುವವರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೂಲಿಯೂ ಇಲ್ಲ, ಹೊಟ್ಟೆಗೆ ಅನ್ನವೂ ಇಲ್ಲ ಎಂದು ಕಾರ್ಮಿಕರು ಗೋಳಾಡುತ್ತಿದ್ದಾರೆ.

„ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.