ಸಿಮೆಂಟ್‌ ನಗರಿಯಲ್ಲಿ ಅನ್ನ-ನೀರಿಗೆ ಲಾರಿ ಚಾಲಕರ ಪರದಾಟ

144 ನಿಷೇಧಾಜ್ಞೆ: ವಾಡಿ ಸಂಪೂರ್ಣ ಸ್ತಬ್ಧ

Team Udayavani, Mar 21, 2020, 12:15 PM IST

21-March-7

ವಾಡಿ: ಕೊರೊನಾ ಹಿಂದೆಂದೂ ಕೇಳರಿಯದ ರೀತಿಯಲ್ಲಿ ಪ್ರಾಣ ಕಂಟಕವಾಗಿ ಕಾಡುತ್ತಿದ್ದು, 144ನೇ ಕಲಂ ಜಾರಿ ಆಗಿರುವುದರಿಂದ ಸಿಮೆಂಟ್‌ ನಗರಿ ಸಂಪೂರ್ಣ ಸ್ತಬ್ಧವಾಗಿದೆ.

ದೇಶದ ವಿವಿಧ ರಾಜ್ಯಗಳಿಂದ ಎಸಿಸಿ ಕಾರ್ಖಾನೆಗೆ ಬರುವ ಸಿಮೆಂಟ್‌ ಸಾಗಾಣಿಕೆ ಲಾರಿಗಳ ಚಾಲಕರು ಅನ್ನ-ನೀರಿಗಾಗಿ ಪರಿತಪಿಸುತ್ತಿದ್ದಾರೆ. ಹೋಟೆಲ್‌, ಖಾನಾವಳಿ, ದಾಭಾ, ಕ್ಯಾಂಟೀನ್‌ಗಳು ಬಾಗಿಲು ಮುಚ್ಚಿದ್ದರಿಂದ ಹಸಿವು ನೀಗಿಸಿಕೊಳ್ಳಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಪಟ್ಟಣದ ಪ್ರಮುಖ ವೃತ್ತಗಳಲ್ಲಿನ ಗೂಡಂಗಡಿಗಳಿಗೂ ಬೀಗ ಜಡಿದಿರುವ ಕೊರೊನಾ ಭೀತಿ ಕುಡಿಯಲು ಚಹಾ ಮತ್ತು ಬೊಗಸೆ ನೀರು ಸಿಗದಂತ ಪರಿಸ್ಥಿತಿ ಸೃಷ್ಟಿಸಿದೆ. ಹೋಟೆಲ್‌-ಖಾನಾವಳಿಗಳನ್ನೇ ನಂಬಿ ಬಂದಿರುವ ನೂರಾರು ಸಂಖ್ಯೆಯ ಲಾರಿ ಚಾಲಕರು, ಕ್ಲೀನರ್‌ಗಳು ಉಪಹಾರಕ್ಕಾಗಿ ಪಟ್ಟಣದ ಗಲ್ಲಿ-ಗಲ್ಲಿಗಳಲ್ಲಿ ಓಡಾಡಿ ತಿನ್ನಲು ಏನೂ ಸಿಗದೇ ಪರದಾಡುತ್ತಿದ್ದಾರೆ.

ಕೆಲವರು ಬಾಳೆ ಹಣ್ಣು, ದ್ರಾಕ್ಷಿ, ಟೋಮೋಟೊ ಹಣ್ಣುಗಳನ್ನು ತಿಂದು ದಿನ ದೂಡುತ್ತಿದ್ದಾರೆ. ಇನ್ನು ಕೆಲವರು ನರಕದ ಬದುಕು ಸಹಿಸಲಾಗದೆ ಲಾರಿಗಳನ್ನು ಇಲ್ಲೇ ಬಿಟ್ಟು, ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ. ವಿಶ್ವ ಭೂಪಟದಲ್ಲಿ ಹೆಸರು ನಮೂದಾಗಿರುವ ಸ್ಥಳೀಯ ಎಸಿಸಿ ಸಿಮೆಂಟ್‌ ಕಂಪನಿ ತನ್ನ ಉತ್ಪದನೆಯನ್ನು ದೇಶದಾದ್ಯಂತ ಸರಬರಾಜು ಮಾಡುವ ಲಾರಿ ಚಾಲಕರ ಕಷ್ಟ ಕೇಳಲು ಮುಂದಾಗದಿರುವುದು ಬೇಸರದ ಸಂಗತಿಯಾಗಿದೆ.

ವಾಡಿ ನಗರಕ್ಕೆ ಕಾಲಿಟ್ಟ ಗಳಿಗೆಯಿಂದ ಬಂದ್‌ ಬಿಸಿ ಅನುಭವಿಸುತ್ತಿರುವ ಚಾಲಕರು ಕೊರೊನಾ ಭೀತಿಯ ನಿಷೇಧಾಜ್ಞೆಗೆ ಸಿಲುಕಿ ಫಜೀತಿ ಅನುಭವಿಸುತ್ತಿದ್ದಾರೆ. ಊಟ, ವಸತಿ ಸೌಲಭ್ಯದ ಕೊರತೆಯಿಂದ ಕಂಪನಿಯ ಲಾರಿ ಯಾರ್ಡ್ ನಲ್ಲಿ ಕಳೆದ ನಾಲ್ಕು ದಿನಗಳಿಂದ ನೂರಾರು ಲಾರಿಗಳು ಚಾಲಕರಿಲ್ಲದೇ ನಿಂತಿವೆ. ಚಾಲಕರ ಸಮಸ್ಯೆಯಿಂದ ಸಿಮೆಂಟ್‌ ಚೀಲಗಳನ್ನು ಲೋಡ್‌ ಮಾಡಲಾಗುತ್ತಿಲ್ಲ. ಇದು ಸಿಮೆಂಟ್‌ ಉತ್ಪಾದನೆಯ ಆರ್ಥಿಕ ದುಸ್ಥಿತಿಗೂ ಕಾರಣವಾಗಿದೆ. ಲಾರಿ ಮಾಲೀಕರು ವಾಹನ ಬಾಡಿಗೆ ನಷ್ಟ ಅನುಭವಿಸುವಂತಾಗಿದೆ.

ಜಮ್ಮು ಮೂಲದ ಚಾಲಕನಿಗೆ ಮಾಲೀಕನ ಮನೆ ಊಟ: ಸಿಮೆಂಟ್‌ ಸಾಗಾಣಿಕೆಗಾಗಿ ವಾಡಿ ಎಸಿಸಿ ಕಾರ್ಖಾನೆಗೆ ಬಂದಿರುವ ಜಮ್ಮು-ಕಾಶ್ಮೀರ ಮೂಲದ ಲಾರಿ ಚಾಲಕ ಮಹ್ಮದ್‌ ಶಕೀಲ್‌ ಎಂಬಾತ ಕೊರೊನಾ ವೈರಸ್‌ ಭೀತಿಗೆ ಸಿಲುಕಿ ಊಟ, ವಸತಿ ತೊಂದರೆ ಅನುಭವಿಸಿದ ಪ್ರಸಂಗ ಬೆಳಕಿಗೆ ಬಂದಿದೆ. ಖಾನಾವಳಿ, ಹೋಟೆಲ್‌, ಅಂಗಡಿಗಳು ಮುಚ್ಚಿದ್ದರಿಂದ ಲಾರಿ ಮಾಲೀಕ ಅನ್ವರ್‌ ಪಟೇಲ ಕಡಬೂರ ಎನ್ನುವಾತ ತಮ್ಮ ಮನೆಯಿಂದ ಊಟ ಸರಬರಾಜು ಮಾಡುತ್ತಿದ್ದಾರೆ.

ಇನ್ನು ಕೆಲ ಚಾಲಕರು ಕಿರಾಣಿ ಅಂಗಡಿಯಿಂದ ಚುರುಮುರಿ ತಂದು, ಅದಕ್ಕೆ ಖಾರಾ- ಉಪ್ಪು ಬೆರೆಸಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಹೋಟೆಲ್‌, ಖಾನಾವಳಿ, ಟ್ರಾನ್ಸ್‌ಫೋರ್ಟ್‌ ಕಚೇರಿಗಳಲ್ಲಿ ಕೆಲಸ ಮಾಡುವವರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೂಲಿಯೂ ಇಲ್ಲ, ಹೊಟ್ಟೆಗೆ ಅನ್ನವೂ ಇಲ್ಲ ಎಂದು ಕಾರ್ಮಿಕರು ಗೋಳಾಡುತ್ತಿದ್ದಾರೆ.

„ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.