ಜೋಳಕ್ಕೆ ನೀರು ಪೂರೈಸಲು ಆಗ್ರಹಿಸಿ ಧರಣಿ


Team Udayavani, Oct 21, 2021, 12:51 PM IST

15

ಸಿಂಧನೂರು: ಒಣಗುತ್ತಿರುವ ಜೋಳದ ಬೆಳೆಗೆ ತಕ್ಷಣವೇ ನೀರು ಪೂರೈಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಮುಖಂಡರು ತಹಶೀಲ್‌ ಕಚೇರಿ ಎದುರು ರೈತರ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಬಾದರ್ಲಿ ಜಿಪಂ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ ಮಾತನಾಡಿ, ಕಳೆದ ಹದಿನೈದು ದಿನಗಳಿಂದ ಜೋಳಕ್ಕೆ ನೀರು ಪೂರೈಸುವಂತೆ, ವಿದ್ಯುತ್‌ ಸಮಸ್ಯೆ ಪರಿಹರಿಸುವಂತೆ ಕೇಳಲಾಗುತ್ತಿದೆ. ಆದರೂ, ಯಾರೊಬ್ಬರೂ ಸ್ಪಂದಿಸಿಲ್ಲ. ಕಡಿಮೆ ವೋಲ್ಟೇಜ್‌ ವಿದ್ಯುತ್‌ ನೀಡುತ್ತಿರುವುದರಿಂದ ಪಂಪ್‌ಸೆಟ್‌ಗಳು ಕೆಲಸ ಮಾಡುತ್ತಿಲ್ಲ. ಹೀಗೆ ನಿರ್ಲಕ್ಷ್ಯ ತೋರಿದರೆ, ನಾಲ್ಕೈದು ದಿನಗಳಲ್ಲಿ ಬೆಳೆ ಒಣಗುತ್ತವೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಪಂ ಮಾಜಿ ಸದಸ್ಯ ಬಸವರಾಜ ಹಿರೇಗೌಡರ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಜನಪ್ರತಿನಿಧಿಗಳು ನಂತರದಲ್ಲಿ ಮರೆತ್ತಿದ್ದಾರೆ. ಒಂದು ವಾರ ನೀರು ಕೊಟ್ಟರೆ, ಜೋಳದ ಬೆಳೆ ಬದುಕುತ್ತವೆ. ಈ ಬಗ್ಗೆ ಗಮನ ಹರಿಸಬೇಕು ಎಂದರು.

ಕಾಂಗ್ರೆಸ್‌ ಮುಖಂಡ ಲಿಂಗಪ್ಪ ದಢೇಸುಗೂರು ಮಾತನಾಡಿ, ನೀರಿನ ರಾಜಕೀಯದಲ್ಲಿ ಅಧಿಕಾರಕ್ಕೆ ಬಂದಿರುವ ಶಾಸಕ ವೆಂಕಟರಾವ್‌ ನಾಡಗೌಡ ಅವರು ರೈತರತ್ತ ತಿರುಗಿ ನೋಡಬೇಕು. ಬೆಳೆ ಒಣಗಿದರೆ, ರೈತರು ಏನು ಮಾಡಬೇಕು. ಅವರನ್ನು ಮೊದಲು ಸಂಕಷ್ಟದಿಂದ ಪಾರು ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಈ ವೇಳೆ ಎಇಇ ದಾವಲಸಾಬ್‌, ಸ್ಥಳಕ್ಕೆ ಭೇಟಿ ವಿದ್ಯುತ್‌ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ಹುಸಿ ಭರವಸೆ ನೀಡದಂತೆ ಈ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್‌ ಮಂಜುನಾಥ ಭೋಗಾವತಿ ಮನವಿ ಸ್ವೀಕರಿಸಿ, ಜಮೀನುಗಳಿಗೆ ನೀರು ಒದಗಿಸುವಂತೆ ಎಇಇ ಈರಣ್ಣ ಅವರಿಗೆ ಸೂಚನೆ ನೀಡಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಕಾಂಗ್ರೆಸ್‌ ಮುಖಂಡರಾದ ಬಸನಗೌಡ ಗೋಮರ್ಸಿ, ಶರಣಪ್ಪ ಮಳ್ಳಿ, ನಾಗಪ್ಪ ಗೋಮರ್ಸಿ, ಬಾಬಾ ಖಾದ್ರಿ, ಮರೇಗೌಡ, ಪಂಪನಗೌಡ, ಬೂದಿಹಾಳ ವಿಎಸ್‌ಎಸ್‌ಎನ್‌ ಅಧ್ಯಕ್ಷ ಮಲ್ಲಯ್ಯ ಮಾಡಸಿರವಾರ ಸೇರಿದಂತೆ ಗೋಮರ್ಸಿ, ಮಾಡಸಿರವಾರ ಸೇರಿದಂತೆ ಇತರೆ ಹಳ್ಳಿಯ ರೈತರು ಇದ್ದರು.

ರೈತ ಮಹಿಳೆಯರಿಂದಲೂ ಆಕ್ರೋಶ

ಜೋಳಕ್ಕೆ ನೀರು ಪೂರೈಸುವಂತೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ರೈತ ಮಹಿಳೆಯರು ಪಾಲ್ಗೊಂಡಿದ್ದರು. ಅಧಿಕಾರಿಗಳು ಉತ್ತರ ನೀಡಿದಾಗ ತೃಪ್ತರಾಗದ ಮಹಿಳೆಯರು, ನಾಳೆಯಿಂದಲೇ 54ನೇ ಉಪಾಕಾಲುವೆಯ ಕೊನೆಭಾಗಕ್ಕೆ ನೀರು ಕೊಡಬೇಕೆಂದು ಒತ್ತಾಯಿಸಿದರು. ತಹಶೀಲ್ದಾರ್‌ ಮನವಿ ಸ್ವೀಕರಿಸಿದ ಬಳಿಕ ಮಹಿಳಾ ಪಿಎಸ್‌ಐರನ್ನು ನೋಡಿದ ರೈತ ಮಹಿಳೆಯರು, ತಮ್ಮ ಸಂಕಷ್ಟ ಹೇಳಿಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.