ಕೈಗಾರಿಕೆಗಳ ತ್ಯಾಜ್ಯ ಅವೈಜ್ಷಾನಿಕ ವಿಲೇವಾರಿ


Team Udayavani, Oct 19, 2021, 3:12 PM IST

21

ಹುಮನಾಬಾದ: ಪಟ್ಟಣ ಹೊರವಲಯದ ಅನೇಕ ಕೈಗಾರಿಕೆಗಳು ಕಾನೂನು ಮೀರಿ ವಿಷಯುಕ್ತ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಪರಿಸರ ಹಾನಿ ಉಂಟು ಮಾಡುತ್ತಿದ್ದರೂ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು, ಜಿಲ್ಲಾಡಳಿತ, ತಾಲೂಕಾಡಳಿತ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

ಕೈಗಾರಿಕಾ ಪ್ರದೇಶದಲ್ಲಿ ಅನೇಕ ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಾಗಿ ವಿವಿಧ ರಾಸಾಯನಿಕ, ಬಹು ಔಷಧಿಗಳ ಕಚ್ಚಾ ವಸ್ತು ಉತ್ಪಾದನೆ ಸೇರಿದಂತೆ ಇತರೆ ಅನೇಕ ಪದಾರ್ಥಗಳ ಉತ್ಪನ್ನಗಳನ್ನು ಇಲ್ಲಿನ ತಯಾರಿಸಲಾಗುತ್ತಿದೆ. ಆದರೆ ಪರಿಸರ ಮಾಲಿನ್ಯದ ನಿಯಮಗಳನ್ನು ಯಾರೂ ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ಮಳೆಗಾಲದಲ್ಲಿ ನೀರು ಹರಿಯಬೇಕಿದ್ದ ಹಳ್ಳಗಳಲ್ಲಿ ವಿಷಪೂರಿತ ರಾಸಾಯನಿಕ ಹರಿದಾಡುತ್ತಿದೆ. ಈ ಕುರಿತು ಈ ಹಿಂದೆ ಅನೇಕ ಹೋರಾಟಗಳು ನಡೆದರೂ ಯಾವುದೇ ಪ್ರಯೋಜನವಾಗಿಲ್ಲ. ಸ್ಥಳೀಯ ಶಾಸಕ ರಾಜಶೇಖರ ಪಾಟೀಲ ಕಾರ್ಖಾನೆಗಳ ತ್ಯಾಜ್ಯದ ಸಮಸ್ಯೆ ಕುರಿತು ವಿಧಾನಸಭೆ ಕಲಾಪದಲ್ಲಿ ಧ್ವನಿ ಎತ್ತಿದ್ದರೂ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಇಲ್ಲಿನ ಅನೇಕ ಕೈಗಾರಿಕೆಗಳು ತ್ಯಾಜ್ಯವನ್ನು ಧುಮ್ಮನಸೂರ್‌ ಹೊರ ಪ್ರದೇಶದ ಚೀನಕೇರಾ ಕ್ರಾಸ್‌ ಹತ್ತಿರದ ಆಳದ ಪ್ರದೇಶ, ಆನೆಕೊಳ್ಳ ನೀರು ಹರಿಯುವ ಪ್ರದೇಶ ಹಾಗೂ ಲಾಲಧರಿ ಪ್ರದೇಶವೊಂದರಲ್ಲಿ ಸುರಿಯುತ್ತಿದ್ದು, ಅದರ ಮೇಲೆ ಮಣ್ಣು ಮುಚ್ಚಿರುವುದು ಕಂಡು ಬಂದಿದೆ. ಮಳೆ ಸುರಿದಂತೆ ಮಣ್ಣು ಜಾರಿ ಚೀಲಗಳಲ್ಲಿ ತುಂಬಿದ ತ್ಯಾಜ್ಯ ಎದ್ದು ಕಾಣುತ್ತಿದೆ. ಸಮೀಪದ ತಾಂಡಾ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕೈಗಾರಿಕಾ ಪ್ರದೇಶದ ಸುತ್ತಲಿನ ಗಡವಂತಿ, ಮಾಣಿಕನಗರ ಗ್ರಾಮಗಳಲ್ಲಿನ ಜನರ ಅನಾರೋಗ್ಯ ಉಂಟಾದ ಸಂದರ್ಭದಲ್ಲಿ “ಉದಯವಾಣಿ’ ಸತತ ಸರಣಿ ವರದಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ 2017ರಲ್ಲಿ ಗ್ರಾಮಗಳಲ್ಲಿನ ಬಾವಿಗಳ, ಕೊಳವೆಬಾವಿಗಳ, ಹಳ್ಳಗಳ ನೀರಿನಲ್ಲಿ ಪರೀಕ್ಷೆ ನಡೆದಿತ್ತು. ರಾಸಾಯನಿಕ ಗಣನೀಯ ಪ್ರಮಾಣದಲ್ಲಿರುವುದು ಪತ್ತೆಯಾಗಿತ್ತು. ಬಹುತೇಕ ನೀರಿನ ಮಾದರಿಗಳು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿತ್ತು. ಅಲ್ಲದೆ ಅಂದಿನ ಜಿಲ್ಲಾಧಿಕಾರಿ ಎಚ್‌.ಆರ್‌. ಮಹಾದೇವ ನೇತೃತ್ವದಲ್ಲಿ 8 ಅಧಿಕಾರಿಗಳ ತಂಡ ರಚಿಸಿ ಕಾರ್ಖಾನೆಗಳ ಪರಿಶೀಲನೆ ನಡೆಸಿದ್ದರು. ಕೆಲ ಕಾರ್ಖಾನೆಗಳು ಮುಚ್ಚುವಂತೆ ವರದಿ ಕೂಡ ನೀಡಲಾಗಿತ್ತು. ಆದರೆ ಯಾವ ಆದೇಶಗಳು ಜಾರಿಯಾಗದೆ ಕಾರ್ಖಾನೆಗಳ ವಿರುದ್ಧ ಕ್ರಮವಾಗಿಲ್ಲ ಎಂಬುವುದೇ ವಿಶೇಷ. ಹುಮನಾಬಾದ ಪಟ್ಟಣ ಸೇರಿದಂತೆ ಬಹುತೇಕ ಕಡೆಗಳಲ್ಲಿ ಸಂಜೆ ಸಮಯದಲ್ಲಿ ದುರ್ವಾಸನೆ ಹಬ್ಬುತ್ತಿದೆ. ಬೀದರ- ಕಲಬುರಗಿ ರಸ್ತೆ ಮಧ್ಯದಲ್ಲಿ ಸಂಚರಿಸುವ ಜನರು ಮೂಗು ಮುಚ್ಚಿಕೊಂಡೇ ಸಂಚರಿಸುವ ಸ್ಥಿತಿ ಇದೆ. ಅವ್ಯವಸ್ಥೆ ಕುರಿತು ಜನರು ಜನಪ್ರತಿನಿಧಿಗಳಿಗೆ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಪರಿಸರ ಹಾನಿ ಉಂಟು ಮಾಡಲು ಯಾರಿಗೂ ಅಧಿಕಾರ ಇಲ್ಲ. ಆದರೂ ವಿವಿಧಡೆ ಕೈಗಾರಿಕೆಗಳ ತ್ಯಾಜ್ಯ ಸುರಿಯುತ್ತಿರುವ ಕುರಿತು ಮಾಹಿತಿ ದೊರೆಯುತ್ತಿದ್ದು, ಕಾನೂನು ಗಾಳಿಗೆ ತೂರಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಕಾರ್ಖಾನೆಗಳ ಕುರಿರು ಪರಿಶೀಲನೆ ನಡೆಸಿ ಸೂಕ್ತ ವಿವರಣೆಯೊಂದಿಗೆ ತಪ್ಪಿಸ್ಥ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ವಿವಿಧೆಡೆ ಎಸೆದಿರುವ ತ್ಯಾಜ್ಯ ಯಾವ ಕಾರ್ಖಾನೆಗೆ ಸಂಬಂಧಿಸಿರುವುದು ಎಂದು ಸಂಬಂಧಿಸಿದ ಇಲಾಖೆಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು. -ನಾಗಯ್ನಾ ಹಿರೇಮಠ, ತಹಶೀಲ್ದಾರ್‌

-ದುರ್ಯೋಧನ ಹೂಗಾರ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.