![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ನೀರಿನ ಅಭಾವ: ಒಣಗಿದ ಕಲ್ಲಂಗಡಿ
•ಬೆಳೆಗಾರರ ಮೇಲೆ ಬೀರಿದೆ ಪರಿಣಾಮ •ಗಾಯದ ಮೇಲೆ ಬರೆ ಎಳೆದಂತಾಗಿದೆ
Team Udayavani, May 14, 2019, 4:55 PM IST
![bidar-tdy-2..](https://www.udayavani.com/wp-content/uploads/2019/05/bidar-tdy-2..-620x295.jpg)
ಬಸವಕಲ್ಯಾಣ: ಕಲ್ಲಂಗಡಿ ಬೆಳೆ ಒಣಗಿರುವುದನ್ನು ತೋಟಗಾರಿಕೆ ವಲಯ ಅಧಿಕಾರಿ ಸಂಗಮನಾಥ ಘಾಳೆ ಪರಿಶೀಲಿಸಿದರು.
ಬಸವಕಲ್ಯಾಣ: ಬೇಸಿಗೆಯಲ್ಲಿ ಕಲ್ಲಂಗಡಿ ಹಾಕಿದರೆ ಕೈ ತುಂಬಾ ಹಣ ಬರುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತನ ಆಸೆ ಮೇಲೆ ಬರಗಾಲ ತಣ್ಣೀರು ಎರಚುವಂತಾಗಿದೆ. ನೀರಿನ ಕೊರತೆಯಿಂದ ಕಲ್ಲಂಗಡಿ ಬೆಳೆ ಒಣಗಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಪ್ರಸಕ್ತ ವರ್ಷದಲ್ಲಿ ಬಹಳ ನಿರೀಕ್ಷೆ ಇಟ್ಟಿಕೊಂಡು ತಾಲೂಕಿನಾದ್ಯಂತ ಒಟ್ಟು 62 ಹೆಕ್ಟೇರ್ನಲ್ಲಿ ರೈತರು ಕಲ್ಲಂಗಡಿ ರೋಪಣಿ ಮಾಡಿದ್ದರು. ಇದರಲ್ಲಿ ಕೆಲವರು ಮೊದಲನೇ ಇಳುವರಿ ಪಡೆದುಕೊಂಡಿದ್ದರೆ, ಮತ್ತೆ ಕೆಲವರಿಗೆ ಅಂತರ್ಜಲ ಕುಸಿತದಿಂದ ಶೇ. 20ರಿಂದ 25ರಷ್ಟು ಇಳುವರಿ ಕಡಿಮೆ ಆಗುವುದರ ಜತೆಗೆ ಬೆಳೆ ಮೇಲೆ ಪರಿಣಾಮ ಬೀರಿರುವುದು ರೈತರ ನಿರೀಕ್ಷೆ ಹುಸಿ ಮಾಡಿದೆ.
ಇದರಿಂದ 3ರಿಂದ 4 ಕೆಜಿ ಆಗಬೇಕಾದ ಕಲ್ಲಂಗಡಿ 2 ಅಥವಾ 3 ಕೆಜಿ ಆಗುವಷ್ಟು ಗಾತ್ರದಲ್ಲಿ ಕಲ್ಲಂಗಡಿಗಳು ಹತ್ತಿಕೊಂಡಿವೆ. ಹೀಗಾಗಿ ರೈತರು ಪ್ರತಿ ಹೆಕ್ಟೇರ್ಗೆ ಮಾಡಿದ ಖರ್ಚು ತಿರುಗಿ ಬರುತ್ತದೆಯೋ ಅಥವಾ ಇಲ್ಲವೋ ಎಂಬ ಆತಂಕದಲ್ಲಿ ರೈತರಿದ್ದಾರೆ.
ತೋಟದಲ್ಲಿರುವ ಕೊಳವೆ ಬಾವಿ ಮತ್ತು ಬಾವಿಗಳಲ್ಲಿ ನೀರಿನ ಮಟ್ಟ ಕುಸಿತವಾಗಿದ್ದು, ದಿನದಲ್ಲಿ ಒಂದು ಅಥವಾ ಎರಡು ಗಂಟೆ ಮಾತ್ರ ನೀರು ಉಣಿಸಲಾಗುತ್ತಿದೆ. ಇದರಿಂದ ಅಲ್ಲಲ್ಲಿ ಒಂದೊಂದು ಕಲ್ಲಂಗಡಿಗಳು ಕಾಣುತ್ತಿದ್ದು, ನಿರೀಕ್ಷೆಗೆ ತಕ್ಕಂತೆ ಇಳುವರಿ ಬಾರದೆ ಇರುವುದು ರೈತರಿಗೆ ಮುಂದಿನ ದಾರಿ ಕಾಣದಂತಾಗಿದೆ. ನೀರಿನ ಅಭಾವದಿಂದ ಈಗಾಗಲೇ ಕಲ್ಲಂಗಡಿ ಬಳ್ಳಿ ಒಣಗಿ ಹೋಗುತ್ತಿದೆ. ಹೇಗಾದರೂ ಮಾಡಿ ಇನ್ನೂ ಸ್ವಲ್ಪ ದಿನ ಉಳಿಸಿಕೊಂಡರೆ ಇನ್ನೊಂದು ಬೆಳೆ ಪಡೆದುಕೊಳ್ಳಬೇಕು ಎಂದರೆ ನೀರು ಇಲ್ಲದಿರುವುದು ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ನೀರಿನ ಅಭಾವದಿಂದ ಕಲ್ಲಂಗಡಿ ಬೆಳೆಗಾರರ ಮೇಲೆ ಪರಿಣಾಮ ಬೀರಿರುವುದು ಮಾತ್ರ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.