ಕೃಷಿ ಹೊಂಡದಿಂದ ವರ್ಷವಿಡೀ ಬೆಳೆಗೆ ನೀರು!

ಪ್ರಾಯೋಗಿಕವಾಗಿ ಬೆಳೆಗಳನ್ನು ಬೆಳೆದು ಯಶಸ್ವಿಯಾದ ವೈದ್ಯ ಬಾಲಕೃಷ್ಣ ರಾಠೋಡ

Team Udayavani, Dec 6, 2020, 2:43 PM IST

ಕೃಷಿ ಹೊಂಡದಿಂದ ವರ್ಷವಿಡೀ ಬೆಳೆಗೆ ನೀರು!

ಬಸವಕಲ್ಯಾಣ: ಬಸವಕಲ್ಯಾಣ ತಾಲೂಕಿನ ಪರತಾಪೂರ ಗ್ರಾಪಂ ವ್ಯಾಪ್ತಿಗೆ ಬರುವ ಖಾನಾಪುರ ಗ್ರಾಮದ ಡಾ| ಬಾಲಕೃಷ್ಣ ರಾಠೊಡ ಅವರು, ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಿಸಿಕೊಂಡು ಪ್ರಾಯೋಗಿಕವಾಗಿ ವಿವಿಧ ಬೆಳೆ ಹಾಗೂ ತರಕಾರಿ ಬೆಳೆಯುತ್ತಿದ್ದಾರೆ. ಈ ಮೂಲಕ ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ವೃತ್ತಿಯಲ್ಲಿ ವೈದ್ಯ ಸೇವೆ ಸಲ್ಲಿಸುತ್ತಿರುವ ಬಾಲಕೃಷ್ಣ ಅವರು ಪರವೃತ್ತಿಯಲ್ಲಿ ಕೃಷಿ ಕೈಗೊಂಡಿದ್ದಾರೆ. ಅದರಲ್ಲೂ ಸರ್ಕಾರಿ ಯೋಜನೆಯನ್ನುಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ತಮ್ಮಹೊಲದಲ್ಲಿ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ.ಕೃಷಿ ಹೊಂಡದಿಂದ ಮಳೆಗಾಲದಲ್ಲಿ ಮಳೆಯ ಆಧಾರಿತ ನೀರು ಬಳಸುತ್ತಾರೆ. ಬೇಸಿಗೆ ಮತ್ತು ಚಳಿಗಾಲದಲ್ಲಿ ದೂರದ ಬಾವಿ ಹಾಗೂಕೊಳವೆಬಾವಿ ನೀರನ್ನು ಕೃಷಿ ಹೊಂಡದಲ್ಲಿ ಸಂಗ್ರಹಿಸಲಾಗುತ್ತಿದೆ. ನಂತರ ಹನಿ ನೀರಾವರಿಪದ್ಧತಿ ಮೂಲಕ ವರ್ಷಪೂರ್ತಿ ಬೆಳೆಗಳಿಗೆ ನೀರು ಒದಗಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇನ್ನೆರಡುವರ್ಷದಲ್ಲಿ ವಾರ್ಷಿಕ ಲಕ್ಷಾಂತರ ರೂ. ಆದಾಯ ಪಡೆಯುವಂತೆ ಯೋಜನೆ ಹಾಕಿಕೊಂಡಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಎರಡು ಎಕರೆ ಭೂಮಿಯಲ್ಲಿ ಕೃಷಿ ಹೊಂಡ ನಿರ್ಮಿಸಲಾಗಿದ್ದು, ನುಗ್ಗೆ ಕಾಯಿ-500, ಆ್ಯಪಲ್‌ ಬಾರೆ ಮರ-500, ಟೊಮಾಟೊ, ಕರಿಬೇವು, ಲಿಂಬು, ಹೆಬ್ಬೆವು, ಶುಂಠಿ ಸೇರಿದಂತೆ ವಿವಿಧ ತರಕಾರಿ ಬೆಳೆಗಳನ್ನು ಬೆಳೆಸಲಾಗಿದೆ. ಇದಕ್ಕೆ ಕೃಷಿ ಹೊಂಡ ತುಂಬಾಸಹಾಯಕವಾಗಿದೆ ಎಂದು ವೈದ್ಯ ಡಾ| ಬಾಲಕೃಷ್ಣ ರಾಠೊಡ ಹೇಳಿದರು.

ಕೃಷಿ ಹೊಂಡ ಉದ್ದೇಶ: ಕೃಷಿಕರು ಮಳೆ ನೀರನ್ನು ವ್ಯರ್ಥವಾಗಲು ಬಿಡದೆ ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ನೀರನ್ನು ಸಂಗ್ರಹಿಸಿ ಅದನ್ನು ತಮ್ಮ ಬೆಳೆಗಳಿಗೆ ನೀರು ಒದಗಿಸುವುದು ಈ ಯೋಜನೆ ಉದ್ದೇಶವಾಗಿದೆ. ಕೃಷಿ ಹೊಂಡ ರಚನೆ ನಂತರ ನೀರು ಇಂಗದಂತೆ ತಡೆಯಲು ಪಾಲಿಥಿನ್‌ ಹೊದಿಕೆ, ಅಳವಡಿಕೆ, ಹೊಂಡದಿಂದ ನೀರು ಎತ್ತಲು ಡಿಸೇಲ್‌ ಪಂಪ್‌ ಸೆಟ್‌ ತುಂತುರು ನೀರಾವರಿ ಅಳವಡಿಕೆಗೆ ಈ ಯೋಜನೆಯಡಿ ಅವಕಾಶವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿದ ರೈತರಿಗೆ ಅಳತೆಯ ಅನುಗುಣವಾಗಿ ಸಾಮಾನ್ಯ ವರ್ಗದವರಿಗೆ ಶೇ.80ರಷ್ಟು, ಎಸ್‌ಸಿ, ಎಸ್‌ಟಿ ಪಂಗಡದವರಿಗೆ ರಿಯಾಯತಿಯಲ್ಲಿ ಈ ಯೋಜನೆ ನೀಡಲಾಗುತ್ತದೆ.

 ಕೃಷಿ ಹೊಂಡ ನಿರ್ಮಿಸಲು ಮಾನದಂಡವೇನು? : ಕನಿಷ್ಠ ಒಂದು ಎಕರೆ ಭೂಮಿ ಹೊಂದಿರುವ ರೈತರು, ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್‌ ದಾಖಲೆ, ಆಧಾರ ಕಾರ್ಡ್‌ ಪ್ರತಿಗಳನ್ನು ನೀಡಬೇಕು. ಸರ್ಕಾರ ಸೂಚಿಸಿದ ಅನುದಾನವನ್ನು ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತದೆ. ನಂತರ ಕೃಷಿ ಅಧಿ ಕಾರಿಗಳು ಖುದ್ದು ಜಮೀನಿಗೆ ಭೇಟಿ ನೀಡಿ ಕೃಷಿ ಹೊಂಡ ನಿರ್ಮಿಸಲು ಸ್ಥಳ ಗುರುತಿಸಿ, ಪರಿಶೀಲನೆ ನಡೆಸುತ್ತಾರೆ.

ಕೃಷಿ ಹೊಂಡದಿಂದ ರೈತರು ಹೆಚ್ಚಿನ ಇಳುವರಿ ಪಡೆಯಲು ಮತ್ತು ಮಣ್ಣಿನ ಸವಕಳಿ ತಡೆಯಲು ಸಹಾಯವಾಗುತ್ತದೆ. ಹೀಗಾಗಿ ರೈತರು ಆಯಾ ಗ್ರಾಪಂ ಅಧಿಕಾರಿಗಳನ್ನು ಸಂಪರ್ಕಿಸಿ ಈ ಯೋಜನೆ ಲಾಭ ಪಡೆದುಕೊಳ್ಳಬೇಕು.- ಸಂತೋಷ ಚವ್ಹಾಣ, ಸಹಾಯಕ ನಿರ್ದೇಶಕರು, ಬಸವಕಲ್ಯಾಣ

 

-ಆರ್‌.ಎಸ್‌.ವೀರುರೆಡ್ಡಿ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.