ಕಲ್ಯಾಣದ ಹಿಂದುಳಿದ ಹಣೆಪಟ್ಟಿ ಅಳಿಸುತ್ತೇವೆ: ಲಕ್ಷ್ಮಣ ಸವದಿ

ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸಿ 50 ಕೋಟಿ ರೂ. ಮೀಸಲಿಟ್ಟಿದ್ದಾರೆ.

Team Udayavani, Apr 13, 2021, 6:25 PM IST

Laxman

ಬೀದರ: ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣಕ್ಕೆ ಅಂಟಿಕೊಂಡಿರುವ ಹಿಂದುಳಿದ ಹಣೆಪಟ್ಟಿ ಅಳಿಸಿ, ಅಭಿವೃದ್ಧಿಯಲ್ಲಿ ಮುಂಚೂಣಿ ಕ್ಷೇತ್ರವನ್ನಾಗಿಸಲು ಸರ್ಕಾರ ಶ್ರಮಿಸಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು. ಬಸವಕಲ್ಯಾಣ ತಾಲೂಕಿನ ಲಾಡವಂತಿ ಗ್ರಾಮದಲ್ಲಿ ಸೋಮವಾರ ನಡೆದ ಬಿಜೆಪಿ ಅಭ್ಯರ್ಥಿ ಪರ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು.

ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಕ್ಷೇತ್ರದ ಹಲವು ಹಳ್ಳಿಗಳಿಗೆ ಭೇಟಿ ನೀಡಿದ್ದೇನೆ. ಈವರೆಗೆ ರೈತರ ಪಂಪ್‌ಸೆಟ್ ಗಳಿಗೆ ವಿದ್ಯುತ್‌ ಸಂಪರ್ಕ ಇಲ್ಲದಿರುವುದು ತಲೆ ತಗ್ಗಿಸುವ ವಿಚಾರ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಜತೆಗೆ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ, ಸಮಸ್ಯೆಗಳ ಪಟ್ಟಿ ಮಾಡಲಾಗುವುದು. ಚುನಾವಣೆ ಬಳಿಕ ಐದು ಜನ ಸಚಿವರು ಆಗಬೇಕಿರುವ ಅಭಿವೃದ್ಧಿ ಕೆಲಸ ಮಾಡಿಕೊಡುವ ಸಂಕಲ್ಪ ತೊಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮರಾಠಾ ಸಮಾಜದವರ ಅಭಿವೃದ್ಧಿ ಕುರಿತು ಯಾವುದೇ ಸರ್ಕಾರ ಸಹ ಚಿಂತನೆ ಮಾಡಿರಲಿಲ್ಲ. ಆದರೆ, ಯಡಿಯೂರಪ್ಪ ನೇತೃತ್ವದ ಸರ್ಕಾರ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸಿ 50 ಕೋಟಿ ರೂ. ಮೀಸಲಿಟ್ಟಿದ್ದಾರೆ. ಈ ಅನುದಾನವನ್ನು 100 ಕೋಟಿ ರೂ.ಗಳಿಗೆ ಹೆಚ್ಚಿಸಿ ಸಮಾಜದ ಮತ್ತಷ್ಟು ಪ್ರಗತಿಗೆ ಸಹಕಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಸವದಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ವಿ. ಸೋಮಣ್ಣ, ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ, ಶಾಸಕರಾದ ಪಿ. ರಾಜೀವ್‌, ಬಸವರಾಜ ಮತ್ತಿಮಾಡ, ಮಾಜಿ ಸಚಿವರಾದ ಸುನೀಲ ವಲ್ಲಾಪುರ, ಬಾಬುರಾವ್‌ ಚಿಂಚನಸೂರ್‌, ಮಾಜಿ ಶಾಸಕ ಎಂ.ಜಿ. ಮುಳೆ, ಜಿಪಂ ಅಧ್ಯಕ್ಷೆ ನಿರ್ಮಲಾ ಮಾನಗೋಪಾಳ್‌, ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್‌, ವಿಭಾಗೀಯ ಪ್ರಮುಖ ಈಶ್ವರಸಿಂಗ್ ಠಾಕೂರ್‌ ಸೇರಿದಂತೆ ಇತರರು ಇದ್ದರು.

ಮರಾಠಾ ಸಮಾಜ 2ಎಗೆ ಸೇರ್ಪಡೆ ಸೇರಿದಂತೆ ಸಮಾಜದ ಬೇಡಿಕೆ ಈಡೇರಿಸುವ ಬಗ್ಗೆ ಸಿಎಂ ಭರವಸೆ ನೀಡಿದ ಕಾರಣಕ್ಕೆ ಸಮಾಜದ ಅಭಿವೃದ್ಧಿ ಹಿತದೃಷ್ಟಿಯಿಂದ ನಾನು ಚುನಾವಣೆ ಕಣದಿಂದ ಹಿಂದೆ ಸರಿದಿದ್ದೇನೆ. ಎರಡೂ ಕಡೆ ಬಿಜೆಪಿ ಸರ್ಕಾರ ಇದೆ. ಹಾಗಾಗಿ ಸರ್ಕಾರ ಈ ಹಿಂದೆ ನೀಡಿದ್ದ ಆಶ್ವಾಸನೆ ಈಡೇರಿಸುತ್ತದೆ ಎಂಬ ವಿಶ್ವಾಸ ನನಗಿದೆ. ನಾನು ನಾಮಪತ್ರ ಹಿಂಪಡೆಯಲು ಡೀಲ್‌ ಮಾಡಿಕೊಂಡಿದ್ದೇನೆ, ಅದು ಸಮಾಜದ ವಿಕಾಸಕ್ಕಾಗಿ ಡೀಲ್‌ ಆಗಿದೆ.
ಎಂ.ಜಿ. ಮುಳೆ, ಮಾಜಿ ಶಾಸಕ

12ನೇ ಶತಮಾನದಲ್ಲಿ ಬಸವಣ್ಣ ಸ್ಥಾಪಿಸಿದ್ದ ಅನುಭವ ಮಂಟಪಕ್ಕೆ ಶಿವಮೊಗ್ಗದಿಂದ ಅಲ್ಲಮಪ್ರಭು ದೇವರು, ಅಕ್ಕ ಮಹಾದೇವಿ ಬಂದಿದ್ದರು. ಈಗ ಅದೇ ಶಿವಮೊಗ್ಗದಿಂದ ಸಿಎಂ ಯಡಿಯೂರಪ್ಪ ಅವರು ಬಸವಣ್ಣನ ಕರ್ಮಭೂಮಿಗೆ ಬಂದು ಅಭಿವೃದ್ಧಿ ಕಾರ್ಯ ಮಾಡುತ್ತಿರುವುದು ಕಾಕತಾಳೀಯ.
ಲಕ್ಷ್ಮಣ ಸವದಿ, ಡಿಸಿಎಂ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.