ಪಕ್ಷದ ಅಭ್ಯರ್ಥಿಗಳಿಗೆ ಇರಲಿ ಒಮ್ಮತದ ಬಲ: ಬಸನಗೌಡ
Team Udayavani, Dec 6, 2021, 2:28 PM IST
ಸಿಂಧನೂರು: ಸ್ಥಳೀಯ ಸಂಸ್ಥೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿಸುವ ಅಭ್ಯರ್ಥಿಗೆ ಪ್ರತಿಯೊಬ್ಬರೂ ಒಮ್ಮತದಿಂದ ಬೆಂಬಲಿಸುವ ಕೆಲಸ ಮಾಡಬೇಕು ಎಂದು ಶಾಸಕ ಆರ್.ಬಸನಗೌಡ ತುರುವಿಹಾಳ ಹೇಳಿದರು.
ತಾಲೂಕಿನ ತುರುವಿಹಾಳದಲ್ಲಿ ಕಾಂಗ್ರೆಸ್ನಿಂದ ಹಮ್ಮಿಕೊಂಡಿದ್ದ ಪಪಂ ಚುನಾವಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಒಂದು ಪುರಸಭೆ, ಎರಡು ಪಟ್ಟಣ ಪಂಚಾಯತ್ ಗಳಿಗೆ ಇದೀಗ ಚುನಾವಣೆ ನಡೆಯುತ್ತಿದೆ. ಎಲ್ಲ ಕಡೆಯೂ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಶ್ರಮಿಸಲಾಗುವುದು. ಯಾರೇ ಅಭ್ಯರ್ಥಿಯಾದರೂ ಅಸಮಾಧಾನ ಬದಿಗೊತ್ತಿ, ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಬೇಕು. ಕೆಲವು ಜನರಿಗೆ ಈ ಬಾರಿ ಅವಕಾಶ ಸಿಕ್ಕರೆ, ಮುಂದಿನ ದಿನಗಳಲ್ಲಿ ಬಾಕಿ ಇರುವ ಎಲ್ಲರಿಗೂ ಕಾಂಗ್ರೆಸ್ ಪಕ್ಷದಲ್ಲಿ ಅವಕಾಶ ದೊರೆಯುತ್ತದೆ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟು, ಪ್ರದರ್ಶಿಸಿ ಕಾಂಗ್ರೆಸ್ ಬಹುಮತ ಗಳಿಸಲು ದುಡಿಯಬೇಕು ಎಂದರು.
ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಕಾಂಗ್ರೆಸ್ ಮುಖಂಡರಾದ ಮಲ್ಲನಗೌಡ ದೇವರಮನಿ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಂ.ಡಿ.ಫಾರೂಕ್ಸಾಬ್, ಮಂಟೆಪ್ಪ ಎಲೆಕೂಡ್ಲಿಗಿ, ಅಮರೇಶಪ್ಪ ಕಲ್ಲೂರು, ಗೂಳಪ್ಪ ಕುಂಟೋಜಿ, ಉಮರ್ಸಾಬ್, ಶರಣಬಸವ ಸಾಹುಕಾರ್, ಶೇಖ್ಮಹೆಬೂಬ್, ಶ್ಯಾಮಿದ್ಸಾಬ್, ಅಮರೇಶ ಕಾಸರೆಡ್ಡಿ, ಬಾಪುಗೌಡ ದೇವರಮನಿ, ಅಬುತರಾಬ್, ವಿಜಯಕುಮಾರ, ವೀರಭದ್ರಗೌಡ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ