ರಸ್ತೆ ಕಾಮಗಾರಿ ಪೂರ್ಣವಾಗುವುದೆಂದು?


Team Udayavani, Aug 24, 2018, 12:54 PM IST

bid-1.jpg

ಬಸವಕಲ್ಯಾಣ: ಸಿಸಿರಸ್ತೆ ಮಾಡುವ ಉದ್ದೇಶದಿಂದ ಹಳೆ ಸಿಸಿ ರಸ್ತೆ ಅಗೆದು, ಎರಡು ತಿಂಗಳುಗಳಿಂದ ಹಾಗೇ ಬಿಟ್ಟಿರುವುದರಿಂದ ನಗರದ 2ನೇ ವಾರ್ಡ್‌ ವ್ಯಾಪ್ತಿಗೆ ಒಳಪಡುವ ಮಲ್ಲಿಕಾರ್ಜುನ ಕಾಲೋನಿ ನಿವಾಸಿಗಳು ನಿತ್ಯ ಯಾತನೆ ಅನುಭವಿಸುವಂತಾಗಿದೆ.

ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನ ವಾಸಿಸುವ ಈ ಕಾಲೋನಿಯಲ್ಲಿ ಹೊಸದಾಗಿ ಸಿಸಿರಸ್ತೆ ನಿರ್ಮಿಸುವ ಕಾಮಗಾರಿ ಮಾಡುತ್ತಿದ್ದು, ಹಳೆ ರಸ್ತೆ ಅಗೆಯಲಾಗಿದೆ. ಎರಡು ತಿಂಗಳಿನಿಂದ ಕಾಮಗಾರಿ ಪೂರ್ಣವಾಗದೇ ನಿಂತಿದೆ.
 
ಆದರೆ ಈವರೆಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ರಸ್ತೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಗೋಜಿಗೆ ಹೋಗಿಲ್ಲ. ಹಾಗಾಗಿ ಕಾಲೋನಿಯ ನಿವಾಸಿಗಳು ಮತ್ತು ಮಕ್ಕಳು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ ಎಂದು ನಿವಾಸಿಗಳು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಸಿಸಿರಸ್ತೆ ಅಗೆದು ಹಾಗೇ ಬಿಟ್ಟಿದ್ದರಿಂದ ರಸ್ತೆ ತುಂಬಾ ಬಂಡೆ ಕಲ್ಲುಗಳಂತೆ ಸಿಮೆಂಟ್‌ ಮತ್ತು ಜಲ್ಲಿ ಕಲ್ಲುಗಳು ಎದ್ದು ನಿಂತಿವೆ. ಇದರಿಂದ ನಿವಾಸಿಗಳು ರಸ್ತೆಯಲ್ಲಿ ಸಂಚರಿಸಲು ಬಾರದಂತಾಗಿದೆ. 

ರಾತ್ರಿ ಸಮಯದಲ್ಲಿ ವೃದ್ಧರು ಹಾಗೂ ಮಕ್ಕಳು ಒಬ್ಬರೇ ಹೊರಗೆ ಹೋಗದೆ, ಇನ್ನೊಬ್ಬರ ಸಹಾಯ ಪಡೆದು ಹೋಗಬೇಕಾಗಿದೆ. ಈ ರಸ್ತೆ ಸಮಸ್ಯೆಯಿಂದ ಬೈಕ್‌ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಕೂಡ ನಡೆದಿವೆ. ಅಲ್ಲದೇ ಚರಂಡಿ ಮತ್ತು ಮಳೆ ನೀರು ಸರಾಗವಾಗಿ ಹರಿದು ಹೋಗದೆ ಮನೆ ಒಳಗೆ ನುಗ್ಗುತ್ತಿವೆ. ಇದರಿಂದ ಸೊಳ್ಳೆಕಾಟ ಜಾಸ್ತಿಯಾಗಿ ನಿವಾಸಿಗಳು ರಾತ್ರಿ ನಿದ್ದೆ ಮಾಡದಂತ ಸ್ಥಿತಿ ಇದೆ.

ಮಳೆಗಾದಲ್ಲಿ ಸಾಂಕ್ರಾಮಿಕ ರೋಗಗಳು ಹರಡು ಆತಂಕದಲ್ಲಿದ್ದಾರೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಮನಸ್ಸು ಮಾಡುತ್ತಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಸಂಬಂಧಪಟ್ಟ ನಗರಸಭೆ ಅಧಿಕಾರಿಗಳು ಇತ್ತ ಗಮನ
ಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಕಾಲೋನಿಯಲ್ಲಿ ಇದ್ದ ಸಿಸಿರಸ್ತೆಯನ್ನು ಮೂರು ತಿಂಗಳ ಹಿಂದೆ ಅಗೆದು ಹಾಗೇ ಬಿಡಲಾಗಿದೆ. ಆದರೆ ಈವರೆಗೂ ರಸ್ತೆ ಕಾಮಗಾರಿ ಆರಂಭ ಮಾಡಿಲ್ಲ. ಇದರಿಂದ ಇಲ್ಲಿನ ನಿವಾಸಿಗಳು ಸಂಚಾರಕ್ಕೆ ಯಾತನೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಶೀಘ್ರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಸಮಸ್ಯೆಯಿಂದ ಮುಕ್ತಗೊಳಿಸಬೇಕು.
 ಸಾಗರ ಕಿರುನಗೆ, ಬಡಾವಣೆ ನಿವಾಸಿ 

„ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.