ಕಾಲುವೆ ಕುಸಿತಕ್ಕೆ ಶಾಶ್ವತ ಪರಿಹಾರ ಎಂದು?


Team Udayavani, Mar 10, 2022, 2:38 PM IST

20canel

ಹುಣಸಗಿ: ರೈತರ ಜೀವನಾಡಿಯಾದ ಬಸವಸಾಗರ ಜಲಾಶಯದ ಎಡದಂಡೆ ಮುಖ್ಯಕಾಲುವೆ ಸತತ ನಾಲ್ಕು ಬಾರಿ ಕುಸಿತಗೊಂಡರೂ ಇವರೆಗೆ ಕುಸಿತ ತಡೆಗಟ್ಟಲು ಸಾಧ್ಯವಾಗಿಲ್ಲ. ಇತ್ತ ರೈತರ ಆತಂಕವೂ ತಪ್ಪಿಲ್ಲ! ಪದೇ ಪದೆ ಕಾಲುವೆ ಕುಸಿಯುತ್ತಿದೆ. ಇದಕ್ಕೆ ಇನ್ನೂ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ.

ರೈತರ ಹಿತದೃಷ್ಟಿಯಿಂದ ಈಗಾಗಲೇ ಮರಳು ತುಂಬಿದ ಚೀಲ ಹಚ್ಚಿ ತಾತ್ಕಾಲಿಕ ಕಾಮಗಾರಿಯೂ ನಡೆಸಲಾಗಿದೆ. ನಾಲ್ಕು ದಿನಗಳಲ್ಲಿಯೇ ಪೂರ್ಣಗೊಳಿಸಲಾಗುತ್ತಿದೆ ಎಂದು ಇಂಜಿನಿಯರ್‌ ಗಳು ಹೇಳುತ್ತಿದ್ದಾರೆ. ಗುಣಮಟ್ಟದ ಮಣ್ಣು ಇಲ್ಲದೆ ಕುಸಿತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಹಿಂದೆ ಐಸಿಸಿ ಕಮಿಟಿಯಿಂದ ಪರಿಶೀಲಿಸಿದಾಗ ಮಣ್ಣು ಸರಿ ಇಲ್ಲ ಎಂದು ಮಾಹಿತಿ ನೀಡಿದ್ದರು. ಹಾಗಾಗಿ ಶಾಶ್ವತ ಕೆಲಸ ಆದಾಗಲೇ ಸಮಸ್ಯೆ ತಡೆಗಟ್ಟಬಹುದಾಗಿದೆ ಎನ್ನುತ್ತಿದ್ದಾರೆ ಇಂಜಿನಿಯರ್‌ ರವಿಕುಮಾರ.

ಎಡದಂಡೆ ಮುಖ್ಯಕಾಲುವೆ ಸುಮಾರು 77.52 ಕಿ.ಮೀ ಉದ್ದವಿದೆ. 10 ಸಾವಿರ ಕ್ಯೂಸೆಕ್‌ ನೀರನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಹುಣಸಗಿ ಶಾಖಾ ಕಾಲುವೆ, ಶಹಾಪುರ ಶಾಖಾ ಕಾಲುವೆ, ಮುಡಬಾಳ ಶಾಖಾ ಕಾಲುವೆ ಹಾಗೂ ಜೇವರ್ಗಿ ಶಾಖಾ ಮತ್ತು ಇಂಡಿ ಶಾಖಾ ಕಾಲುವೆಗಳು ಸೇರಿ ಒಟ್ಟು 4.50 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಹೊಂದಿದೆ.

ಕೈಗೊಂಡ ಕಾಮಗಾರಿ

ಕಾಲುವೆ ಲೈನಿಂಗ್‌ ಮತ್ತು ಬ್ಯಾಂಕಿಂಗ್‌ ಕುಸಿತದಿಂದಾಗಿಯೇ 2012ರಲ್ಲಿ ಕ್ಲೋಸರ್‌ ಅವಧಿಯಲ್ಲಿ 11,437 ಲಕ್ಷ ರೂ. ಅನುದಾನ ತಾಂತ್ರಿಕ ಮಂಜೂರಾತಿ ಪಡೆದು ಮುಖ್ಯಕಾಲುವೆ ಕಿಮೀ 41ರಿಂದ 77 ಕಿಮೀ ವರೆಗೂ(ಪ್ಯಾಕೇಜ್‌-1) ಅಲ್ಲಲ್ಲಿ ತುರ್ತು 25 ಕಿಮೀ ಕಾಮಗಾರಿ ಮೂರು ಪ್ಯಾಕೇಜ್‌ಗಳಲ್ಲಿ ನಡೆಸಲಾಗಿತ್ತು. ಪ್ಯಾಕೇಜ್‌ ಎರಡರಲ್ಲಿ ಎಡದಂಡೆ ಕಾಲುವೆ ಕಿ.ಮೀ 62ರಿಂದ 68ರವರೆಗೂ 5463.91 ಲಕ್ಷ ರೂ. ಅನುದಾನದಲ್ಲಿ ಆಧುನೀಕರಣಗೊಳಿಸಲಾಗಿತ್ತು. ಪ್ಯಾಕೇಜ್‌ ಮೂರರಲ್ಲಿ ಕಿ.ಮೀ. 70ರಿಂದ 73ರವರೆಗೆ 3180.57 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಕೈಗೊಂಡು ಜೂನ್‌-2012ರಲ್ಲಿ ಪೂರ್ಣಗೊಳಿಸಲಾಗಿದೆ.

ಮುಖ್ಯವಾಗಿ ಕಾಲುವೆಯ 62ರಿಂದ 68 ಕಿಮೀ ನಡುವೆ ಅಗ್ನಿ ಬಳಿಯೇ ಪದೇ ಪದೆ ಕಾಲುವೆ ಕುಸಿತಗೊಳ್ಳುತ್ತಿದೆ. 2014ರಲ್ಲಿ ಮತ್ತು 2015ರಲ್ಲಿ ಕುಸಿತಗೊಂಡ ನಂತರ 2017ರಲ್ಲಿ ಕುಸಿದಿತ್ತು. ಮತ್ತೆ 2020ರಲ್ಲಿ ಅದೇ ಸ್ಥಳದಲ್ಲಿಯೇ ಕುಸಿದು ಅಧಿಕಾರಿಗಳ ನಿದ್ದೆ ಕೆಡಿಸಿತ್ತು. ಸದ್ಯ ಪ್ರಸಕ್ತ 2022ರಲ್ಲಿ ಅದೇ ಸ್ಥಳದಲ್ಲಿಯೇ ಕುಸಿತಗೊಂಡಿದೆ. ಮೂರು ಬಾರಿ ಸಂಬಂಧಿಸಿದ ಗುತ್ತಿಗೆದಾರರೇ ಕಾಲುವೆ ರಿಪೇರಿ ಮಾಡಿಸಿದ್ದಾರೆ. ಆದರೆ ನಾಲ್ಕನೆ ಬಾರಿ ಕೆಬಿಜೆಎನ್‌ಎಲ್‌ ನಿಗಮದ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಈಗಾ ಕುಸಿತ ಕಾಲುವೆ ತಾತ್ಕಾಲಿಕ ಕಾಮಗಾರಿ ಕೈಗೊಂಡಿದೆ ಎಂದು ಇಂಜಿನಿಯರ್‌ ತಿಳಿಸಿದ್ದಾರೆ. ಒಟ್ಟಾರೆ ಶಾಶ್ವತ ಪರಿಹಾರ ಹುಡಕಬೇಕು. ಪಕ್ಕದ ಸ್ಥಳದಲ್ಲಿ ಪರ್ಯಾಯ ಕಾಲುವೆ ಕಟ್ಟಿಂಗ್‌ ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಎರಡು ಮೂರು ದಿನಗಳಲ್ಲಿ ತಾಂತ್ರಿಕ ತಜ್ಞರು ಭೇಟಿ ನೀಡಲಿದ್ದಾರೆ. ನಂತರ ಪರಿಶೀಲಿಸಿ ಅವರ ನಿರ್ಣಯದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. -ರವಿಕುಮಾರ, ಸಹಾಯಕ ಇಂಜಿನಿಯರ್‌, ಕೆಬಿಜೆಎನ್‌ಎಲ್‌ ವಿಭಾಗ-7, ಹುಣಸಗಿ

-ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.