ಬೀದರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ


Team Udayavani, Jul 5, 2022, 5:43 PM IST

19BJP-‘

ಬೀದರ: ಕಾರ್ಯಕರ್ತರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಗೆ ಕಿವಿಗೊಡದೆ ಒಗ್ಗಟ್ಟಾಗಿ ಬೀದರ ನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಕರೆ ನೀಡಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ನಗರ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿ ಕಾರದ ಗದ್ದುಗೆ ಹಿಡಿದಿದೆ. ಆದರೆ, ಕಳೆದ 20 ವರ್ಷಗಳಿಂದ ಬೀದರ ಕ್ಷೇತ್ರದಲ್ಲಿ ಕಮಲ ಅರಳಿಲ್ಲ. ಜನಸಂಘದ ಅವ ಧಿಯಲ್ಲಿ ಬೀದರ ಕ್ಷೇತ್ರ ಜತೆಗೆ ನಗರಸಭೆಯೂ ಬಿಜೆಪಿ ಅ ಧಿನದಲ್ಲಿತ್ತು. ಮುಂಬರುವ ಚುನಾವಣೆಯಲ್ಲಿ ಗೆಲ್ಲುವ ಸಂಕಲ್ಪ ಮಾಡಬೇಕಿದೆ ಎಂದರು.

ಬಿಜೆಪಿ ಅಭಿವೃದ್ಧಿ ಧ್ಯೇಯದೊಂದಿಗೆ ರಾಜಕೀಯ ಮಾಡುತ್ತದೆ. ಬೇರೆ ಪಕ್ಷದಂತೆ ಕುಟುಂಬ ರಾಜಕೀಯಕ್ಕೆ ಆಸ್ಪದ ಕೊಡದೇ ಭ್ರಷ್ಟಾಚಾರ ರಹಿತ, ಆಂತರಿಕ ಭದ್ರತೆಗೆ ಆದ್ಯತೆ ನೀಡುವುದರೊಂದಿಗೆ ಇಡೀ ವಿಶ್ವದಲ್ಲಿಯೇ ಬಿಜೆಪಿ ನಂಬರ ಒನ್‌ ಪಕ್ಷವಾಗಿ ಬೆಳೆದಿದೆ. ಮನೆ-ಮನೆಗೆ ತೆರಳಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕು. ಮತದಾರರ ಭಾವನೆಗಳನ್ನು ಅರಿಯುವ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕರ್ತರೆ ಪಕ್ಷಕ್ಕೆ ಶಕ್ತಿ: ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಮಾತನಾಡಿ, 4 ರಾಜ್ಯಗಳಲ್ಲಿ ಗೆದ್ದ ಮೇಲೆ ಬಿಜೆಪಿ ಮತ್ತಷ್ಟು ಶಕ್ತಿಯುತವಾಗಿದೆ. ಕಾರ್ಯಕರ್ತರೇ ಪಕ್ಷಕ್ಕೆ ಶಕ್ತಿ. ಇದು ಚುನಾವಣೆಯ ವರ್ಷವಾಗಿದ್ದರಿಂದ ಪಕ್ಷದ ಹಿರಿಯರ ನಿರ್ಣಯದಂತೆ ಕೆಲಸ ಮಾಡಿದರೆ ಬೀದರ ಕ್ಷೇತ್ರದಿಂದ ಕೂಡ ನಮ್ಮ ಗೆಲುವು ಸಾಧ್ಯವಿದೆ. ಬೂತ್‌ಗಳನ್ನು ಶಕ್ತಿಯುತವಾಗಬೇಕು. ನಮ್ಮ ಮತಗಳ ಅಂತರ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ಈಗಿನಿಂದಲೇ ಈ ಕೆಲಸ ಮಾಡಿದರೆ ಗೆಲುವು ಶತಸಿದ್ದ ಎಂದು ತಿಳಿಸಿದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ಕಾರ್ಯಕರ್ತರು ಜನ ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ನಮ್ಮ ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪುವ ನಿಟ್ಟಿನಲ್ಲಿ ಸೇತುವೆಯಾಗಿ ಕೆಲಸ ಮಾಡಿ ಜನರ ವಿಶ್ವಾಸ ಗಳಿಸಬೇಕು ಎಂದು ಹೇಳಿದರು.

ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ ಮಾತನಾಡಿದರು. ಪಕ್ಷದ ಎಲ್ಲ ಹಿರಿಯರ ಸಹಕಾರ ಇದ್ದರೆ ಮುಂಬರುವ ಚುನಾವಣೆಗಾಗಿ ಪ್ರತಿ ಬೂತ್‌ಗೆ 10 ನಿಷ್ಠಾವಂತ ಕಾರ್ಯಕರ್ತರನ್ನು ಕಟ್ಟುವ ಮೂಲಕ ಸುಮಾರು 500ಕ್ಕೂ ಹೆಚ್ಚು ಬೂತ್‌ ಪದಾಧಿಕಾರಿಗಳ ಸಭೆ ಮಾಡುವ ಉದ್ದೇಶ ಹೊಂದಿದ್ದೇನೆ. ಮಹಾಶಕ್ತಿ ಕೇಂದ್ರಗಳನ್ನು ಮಾಡುವ ಮೂಲಕ ಪಕ್ಷಕ್ಕೆ ಇನ್ನಷ್ಟು ಶಕ್ತಿತುಂಬುವ ಕೆಲಸ ಮಾಡುತ್ತೇನೆ ಎಂದರು.

ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್‌, ವಿಭಾಗೀಯ ಪ್ರಮುಖರಾದ ಈಶ್ವರಸಿಂಗ ಠಾಕೂರ, ವಿದ್ಯಾಸಾಗರ ಶಾಬಾದಿ, ಬುಡಾ ಅಧ್ಯಕ್ಷ ಬಾಬು ವಾಲಿ, ರಾಜ್ಯ ಹಜ್‌ ಕಮಿಟಿ ಅಧ್ಯಕ್ಷ ರೌಫೋದ್ದೀನ್‌ ಕಚೇರಿವಾಲೆ, ಪ್ರಮುಖರಾದ ಜಯಕುಮಾರ ಕಾಂಗೆ, ಗುರುನಾಥ ಜ್ಯಾಂತಿಕರ್‌, ಪ್ರಕಾಶ ಟೊಣ್ಣೆ, ಬಾಬುರಾವ ಮದಕಟ್ಟಿ, ಎನ್‌ಆರ್‌ ವರ್ಮಾ, ರೇವಣಸಿದ್ದಪ್ಪ ಜಲಾದೆ, ರಾಜಕುಮಾರ ಚಿದ್ರಿ, ಅರಹಂತ ಸಾವಳೆ, ವಿಜಯಕುಮಾರ ಪಾಟೀಲ ಗಾದಗಿ, ಮಲ್ಲಿಕಾರ್ಜುನ ಕುಂಬಾರ, ಕಿರಣ ಪಾಟೀಲ, ಮಹೇಶ್ವರ ಸ್ವಾಮಿ, ಚಂದ್ರಕಲಾ ವಿಶ್ವಕರ್ಮ, ಪ್ರಸನ್ನಲಕ್ಷ್ಮೀ ದೇಶಪಾಂಡೆ, ಮಹೇಶ ಪಾಲಂ, ಗಣೇಶ ಭೋಸ್ಲೆ ಇದ್ದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.