ಕಾರ್ಮಿಕರ ಆರೋಗ್ಯ ರಕ್ಷಣೆ ಎಲ್ಲರ ಹೊಣೆ


Team Udayavani, Feb 27, 2022, 11:23 AM IST

6health

ಬೀದರ: ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರವಿರುವ ಕಟ್ಟಡ ಹಾಗೂ ಇತರೆ ಕಾರ್ಮಿಕರ ಆರೋಗ್ಯದ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಹೇಳಿದರು.

ನಗರದ ಪ್ರಯಾಣಿ ಆಸ್ಪತ್ರೆಯಲ್ಲಿ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಮ್ಮಿಕೊಂಡಿದ್ದ ನೋಂದಾಯಿತ ಕಟ್ಟಡ ಕಾರ್ಮಿಕರ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣೆ, ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಹಗಲಿರಳು ಶ್ರಮಿಸುವ ಕಾರ್ಮಿಕರು ತಮ್ಮ ಆರೋಗ್ಯ ಕಡೆ ಗಮನ ಹರಿಸುವುದಿಲ್ಲ. ಅದನ್ನು ಮನಗಂಡ ಸರ್ಕಾರ ವಾಸ ಮಾಡುವ ಮನೆಗೆ ಮತ್ತು ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಕಾರ್ಮಿಕರ ಆರೋಗ್ಯ ತಪಾಸಣೆ ಮತ್ತು ತರಬೇತಿ ನೀಡುವ ಮುಖಾಂತರ ಜೀವ ರಕ್ಷಣೆ ಮಾಡುವಂತ ಮಹತ್ತರವಾದ ಯೊಜನೆಯು ಜಾರಿಗೆ ತಂದಿದೆ ಎಂದರು.

ಕೇಂದ್ರ ಸರ್ಕಾರ ಸಹ ಬಡವರ ಮತ್ತು ಕೂಲಿ ಕಾರ್ಮಿಕರ ಆರೋಗ್ಯವನ್ನು ಕಾಪಾಡಲು ಆಯುಷ್ಮಾನ್‌ ಭಾರತ್‌ ಯೊಜನೆ ಜಾರಿ ತರುವ ಮುಖಾಂತರ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಆರೋಗ್ಯ ವಿಮಾ ಸೌಲಭ್ಯ ಒದಗಿಸಿದ್ದು, ಈ ಕುರಿತು ಯೋಜನೆ ಅನುಷ್ಠಾನಗೊಳಿಸುತ್ತಿರುವ ಆಸ್ಪತ್ರೆಯ ತಂಡದವರು ಯಾರು ಅರ್ಹರಿಗೆ ಆಯುಷ್ಮಾನ್‌ ಭಾರತ್‌ ಕಾರ್ಡ್‌ ಮಾಡಿಸಿ ಸೌಲಭ್ಯ ಒದಗಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಎಂಎಲ್‌ಸಿ ಅರವಿಂದಕುಮಾರ ಅರಳಿ ಮಾತನಾಡಿ, ಕಾರ್ಮಿಕರ ಆರೋಗ್ಯ ತಪಾಸಣೆ ಮತ್ತು ತರಬೇತಿ ಕರಪತ್ರ ಬಿಡಗಡೆ ಮಾಡಿ ಮಾತನಾಡಿ, ಬಡವರು, ಕಾರ್ಮಿಕರ ಏಳ್ಗೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಆದರೆ, ಮಾಹಿತಿ ಕೊರತೆಯಿಂದ ಅರ್ಹರಿಗೆ ಲಾಭ ಸಿಗುವುದಿಲ್ಲ. ಅಂಥವರಿಗೆ ಸೌಲಭ್ಯಗಳ ಮನವರಿಕೆ ಮಾಡುವ ಕೆಲಸ ಆಗಬೇಕೆಂದರು.

ಕಾರ್ಮಿಕ ಇಲಾಖೆ ಉಪ ವಿಭಾಗ ಅಧಿಕಾರಿ ಶ್ರೀಹರಿ ದೇಶಪಾಂಡೆ ಮಾತನಾಡಿ, ಆರೋಗ್ಯ ಯೊಜನೆಯಡಿ ಸೇರ್ಪಡೆಯಾದ ಆಸ್ಪತ್ರೆಯ ತಂಡದಿಂದ ಕಾರ್ಮಿಕರ ವಸತಿ ಹಾಗೂ ಅವರು ಕೆಲಸ ಮಾಡುವ ಸ್ಥಳಕ್ಕೆ ಆಂಬ್ಯುಲೆನ್ಸ್‌ನಲ್ಲಿ ತೆರಳಿ ಆರೋಗ್ಯ ತಪಾಸಣೆ ಜತೆಗೆ ರೋಗಗಳ ಮುನ್ನೆಚ್ಚರಿಕೆ ಕ್ರಮ ಕುರಿತು ತಿಳಿವಳಿಕೆ ನೀಡಲಾಗುತ್ತದೆ. ಹಗಲಿರುಳು ದುಡಿಯುವ ಕಾರ್ಮಿಕರು ಹೆಚ್ಚಿನ ಕಾಯಿಲೆ ಕಂಡುಬಂದಾಗ ಮಾತ್ರ ಚಿಕಿತ್ಸೆಗೆ ಮುಂದಾಗುತ್ತಾರೆ. ಇದನ್ನು ತಪ್ಪಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದರು.

ಆಸ್ಪತ್ರೆ ಅಧ್ಯಕ್ಷ ಡಾ| ಅಮರ ಎರೋಳಕರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಎರಡು ಲಕ್ಷ ಜನರು ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿದ್ದು, ಮೊದಲನೆ ಹಂತದಲ್ಲಿ 28,500 ಕಾರ್ಮಿಕರ ಆರೋಗ್ಯ ತಪಾಸಣೆ ಮತ್ತು ತರಬೇತಿ ನೀಡಲು ನಿಗದಿಪಡಿಸಿರುವ 90 ದಿವಸದೊಳಗೆ ತಲುಪಲು ಶ್ರಮ ವಹಿಸಲಾಗುವುದು. ನಂತರ ಇನ್ನುಳಿದ ಕಾರ್ಮಿಕರಿಗೆ ತಪಾಸಣೆ ನಡೆಸಲಾಗುವುದು ಎಂದರು.

ಶಾಸಕ ರಹೀಮ್‌ ಖಾನ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಮಿಕ ಇಲಾಖೆ ಅಧಿಕಾರಿ ಪ್ರಸನ್ನ ಕುಮಾರ, ವೈದ್ಯರಾದ ವಿನೋದ ಸಾವಳಗಿ, ಡಾ| ವಿನೋದ ಕೊಟೆ, ಡಾ| ವಿಜಯಕುಮಾರ ಕೋಟೆ, ಡಾ| ಮಹೇಶ ಪಾಟೀಲ, ಡಾ| ಮುಡಬಿ, ಡಾ| ಜ್ಯೋತಿ ಖೇಣೆ, ರವೀಂದ್ರ ಎರೊಳಕರ್‌, ಅವಿನಾಶ ಎರೋಳಕರ್‌, ಬಾಲಾಜಿ ಇದ್ದರು. ಅನುಪಮ ಏರೋಳಕರ ಸ್ವಾಗತಿಸಿದರು. ವಿಜಯಲಕ್ಷ್ಮೀ ಗಾದಗಿ ನಿರೂಪಿಸಿದರು. ಅನಿಲ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.