ಕಾಮಗಾರಿ ವಿಳಂಬಕ್ಕೆ ಯಾದವ್ ಅಸಮಾಧಾನ
Team Udayavani, Jan 5, 2019, 8:45 AM IST
ಬೀದರ: ಕೆಲಸ ಬೇಗ ಪೂರ್ಣಗೊಳ್ಳಲಿ ಎಂಬ ಉದ್ದೇಶದಿಂದ ಅಲ್ಪಾವಧಿ ಟೆಂಡರ್ ಕರೆಯಲಾಗುತ್ತದೆ. ಆದರೆ, ಕೆಲವು ಅಧಿಕಾರಿಗಳು ಅಲ್ಪಾವಧಿ ಟೆಂಡರ್ ಕರೆದ ನಂತರವೂ ಕೆಲಸ ಆರಂಭಿಸಲು ವಿಳಂಬ ಮಾಡುತ್ತಿರುವುದು ಬೇಸರ ತಂದಿದೆ ಎಂದು ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಚ್ಕೆಆರ್ ಡಿಬಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಚ್ಕೆಆರ್ಡಿಬಿ ಅನುದಾನದಡಿ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಹಳೆಯ ಕಾಮಗಾರಿ ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕು.
ನಿಗಮದಿಂದ ಆಯಾ ವರ್ಷ ನೀಡಿರುವ ಕೆಲಸಗಳನ್ನು ಅದೇ ವರ್ಷ ಪೂರ್ಣಗೊಳಿಸಬೇಕು. ಒಂದು ವರ್ಷದಲ್ಲಿ ಪೂರ್ಣಗೊಳಿಸಲು ಸಾಧ್ಯವಾದಷ್ಟು ಕೆಲಸಗಳನ್ನು ಮಾತ್ರ ಕೈಗೆತ್ತಿಕೊಳ್ಳಬೇಕು. ಕೆಲಸ ಇನ್ನೂ ಉಳಿದಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ ಹಣ ಪಡೆಯಬೇಕು. ಅನುದಾನ ಬಿಡುಗಡೆಯಾದ ಮೇಲೆ ವಿಳಂಬ ಮಾಡುವುದು ಸರಿಯಲ್ಲ ಎಂದ ಅವರು, ಇಂತಹ ನಿರ್ಲಕ್ಷ್ಯತನ ಮುಂದುವರೆಸಬಾರದು ಎಂದು ಎಚ್ಚರಿಸಿದರು.
ಕಟ್ಟಡ ಕಾಮಗಾರಿ ಆರಂಭಿಸಲು ನಿವೇಶನದ ಸಮಸ್ಯೆ ಇದೆ ಎಂದು ಕೆಲವು ಅಧಿಕಾರಿಗಳು ತಿಳಿಸಿದಾಗ, ನಿವೇಶನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಸಣ್ಣ ಪುಟ್ಟ ಸಮಸ್ಯೆ ತಮ್ಮ ಹಂತದಲ್ಲಿಯೇ ಪರಿಹರಿಸಿಕೊಂಡು ಕೆಲಸ ಬೇಗ ಆರಂಭಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಸಲಹೆ ನೀಡಿದರು.
ಅಂತಿಮ ಬಿಲ್ಗಳನ್ನು ಸಲ್ಲಿಸುವ ವೇಳೆ ಕಾಮಗಾರಿ ಪೂರ್ಣಗೊಳಿಸಿರುವುದು, ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಿರುವುದು ಹಾಗೂ ಅಂತಿಮ ಪರಿಶೀಲನೆ ಪ್ರಮಾಣಪತ್ರ ತಪ್ಪದೇ ಸಲ್ಲಿಸಬೇಕು. ಇಲ್ಲವಾದಲ್ಲಿ ಹಣ ಬಿಡುಗಡೆ ಮಾಡಲಾಗುವುದಿಲ್ಲ ಎಂದು ತಿಳಿಸಿದರು.
ಜಂಟಿ ನಿರ್ದೇಶಕ ಬಸವರಾಜ ಮಾತನಾಡಿ, ಆಯಾ ಇಲಾಖೆಗಳ ಅಧಿಕಾರಿಗಳು ಕಾಮಗಾರಿ ಪ್ರಗತಿ ವಿವರಗಳನ್ನು ಕಾಲಕಾಲಕ್ಕೆ ವೆಬ್ಸೈಟ್ನಲ್ಲಿ ದಾಖಲಿಸಬೇಕು. ಒಂದು ಬಾರಿ ಮಾಹಿತಿ ದಾಖಲಿಸಿದ ನಂತರ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಹಾಗಾಗಿ
ಮಾಹಿತಿ ಸೇರಿಸುವ ವೇಳೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಕಾಮಗಾರಿ ಪೂರ್ಣಗೊಂಡರೂ ಸಂಬಂಧಿಸಿದ ಇಲಾಖೆಗೆ ಕಟ್ಟಡ ಒಪ್ಪಿಸದಿರುವುದರಿಂದ ಆ ಕಟ್ಟಡಗಳ ಬಳಕೆಯಾಗುತ್ತಿಲ್ಲ. ಅಧಿಕಾರಿಗಳು ಕಾಮಗಾರಿ ಪೂರ್ಣಗೊಂಡ ತಕ್ಷಣ ಷರತ್ತುಗಳಿಗೆ ಅನುಗುಣವಾಗಿ ಕಟ್ಟಡ ನಿರ್ಮಿಸಲಾಗಿದೆಯೇ ಎನ್ನುವುದನ್ನು ಪರಿಶೀಲಿಸಿ ಬೇಗ ತಮ್ಮ ವಶಕ್ಕೆ ಪಡೆಯಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ನಿರ್ಮಿತಿ ಕೇಂದ್ರ, ಕೆಆರ್ಐಡಿಎಲ್ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ, ಜಿಪಂ ಸಿಇಒ ಮಹಾಂತೇಶ ಬೀಳಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ