ಎಳ್ಳಮಾವಾಸ್ಯೆಗೆ ಖರೀದಿ ಭರಾಟೆ ಜೋರು..


Team Udayavani, Jan 5, 2019, 9:01 AM IST

bid-1.jpg

ಭಾಲ್ಕಿ: ಕಲ್ಯಾಣ ಕರ್ನಾಟಕದ ರೈತರ ಲಕ್ಷ್ಮೀ ಹಬ್ಬವೆಂದೇ ಹೆಸರಾದ ಎಳ್ಳಮಾವಾಸ್ಯೆ ಹಬ್ಬಕ್ಕೆ ತಾಲೂಕಿನಾದ್ಯಂತ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ.

ಎಳ್ಳಮಾವಾಸ್ಯೆ ಹಬ್ಬದಾಚರಣೆಗೆ ರೈತರು ಹೊಲದಲ್ಲಿ ಕೊಂಪೆ ಮಾಡಿ ಲಕ್ಷ್ಮೀ ಮತ್ತು ಪಾಂಡವರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಹಬ್ಬದೂಟ ಸವಿಯುವ ಪರಿಪಾಠವುಂಟು. ಎರಡು ದಿನ ಮುಂಚಿತವಾಗಿ ಹಬ್ಬದ ಸಿದ್ಧತೆ ನಡೆಯುತ್ತದೆ. ತರಕಾರಿ ಸೋಸುವ (ಕಾಯಿಪಲ್ಯ) ದಿನದಂದು ಎಲ್ಲ ತರಕಾರಿ ಸ್ವತ್ಛಗೊಳಿಸಿ ಸಿದ್ಧ ಮಾಡಲಾಗುತ್ತದೆ.

ಗೆಳೆಯರು, ಸಂಬಂಧಿಕರಿಗೆ ಆಮಂತ್ರಣ: ಹೊಲದಲ್ಲಿ ಬೆಳೆ, ತರಕಾರಿ ಹಾಗೂ ಮಾರುಕಟ್ಟೆಯಲ್ಲಿ ಲಭ್ಯವಿರುವ ಅವರೆಕಾಯಿ, ಗಜ್ಜರಿ, ಹಸಿ ಮೆಣಸಿನಕಾಯಿ, ಮೆಂತೆ ಪಲ್ಯ, ಟೊಮ್ಯಾಟೊ, ಪಾಲಕ್‌, ಈರುಳ್ಳಿ ತಪ್ಪಲು, ಹಸಿ ಹುಣಸೆಕಾಯಿ ಸೇರಿದಂತೆ ವಿವಿಧ ಬಗೆಯ ಕಾಯಿ, ತರಕಾರಿ, ಕಾಳುಗಳನ್ನು ಸಂಗ್ರಹಿಸಿ ಎಲ್ಲವೂ ಸೇರಿಸಿ ಭಜ್ಜಿ- ಪಲೆ ಮಾಡಿ, ಸ್ನೇಹಿತರು ಹಾಗೂ ಸಂಬಂಧಿಕರನ್ನು ಊಟಕ್ಕೆ ಆಮಂತ್ರಿಸಿ ಎಲ್ಲರೊಂದಿಗೆ ಬೆರೆಯುವುದು ಹಬ್ಬದ ವಿಶೇಷ.
 
ಚರಗ ಚೆಲ್ಲಿ ಪ್ರಾರ್ಥನೆ: ಪಾಂಡವರು, ಲಕ್ಷ್ಮೀಗೆ ನೈವೇದ್ಯ ಅರ್ಪಿಸಿ, ಹಿಂಗಾರು ಬೆಳೆಗಳಿಗೆ ಯಾವುದೇ ರೋಗಬಾಧೆ ಬಾರದಿರಲಿ ಹಾಗೂ ಉತ್ತಮ ಫಸಲು ಬರಲೆಂದು ರೈತರು “ವಲಗೈ ವಲಗೈ ಚಾಲೋನ ಪಲಗೈ’ (ಯಾವ ತಾಯಿ ಕೊಟ್ಟಳು.. ಭೂಮಿ ತಾಯಿ ಕೊಟ್ಟಳು..) ಎನ್ನುವ ಘೋಷದೊಂದಿಗೆ ಹೊಲದ ತುಂಬ ಚರಗ ಚೆಲ್ಲಿ ಉತ್ತಮ ಫಸಲಿಗಾಗಿ ಭೂತಾಯಿಯನ್ನು ಪ್ರಾರ್ಥಿಸುತ್ತಾರೆ.

ಹೆಚ್ಚಾದ ಬೆಲೆ: ಪ್ರಸಕ್ತ ವರ್ಷ ಮುಂಗಾರು-ಹಿಂಗಾರು ಮಳೆ ಅಭಾವದಿಂದಾಗಿ ಈ ಬಾರಿ ತಾಲೂಕನ್ನು ಬರ ಪ್ರದೇಶ ಎಂದು ಘೋಷಿಸಲಾಗಿದೆ. ಮುಂಗಾರು-ಹಿಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಫಸಲು ಕಾಣದಿರುವುದರಿಂದ ತರಕಾರಿ, ಕಾಯಿಪಲ್ಯೆಗಳ ಬೆಲೆ ಗಗನಕ್ಕೇರಿದೆ. ಗಜ್ಜರಿ ಕೆ.ಜಿ- 40 ರೂ., ಮೆಂತೆಸೊಪ್ಪು -30 ರೂ. ಅವರೆಕಾಯಿ ಬೀಜ-80 ರೂ., ಹಸಿ ಮೆಣಸಿನಕಾಯಿ-40 ರೂ., ಹಸಿ ಹುಣಸೆಕಾಯಿ-40 ರೂ. ಮಾರಾಟವಾಗುತ್ತಿದ್ದರೂ ಹಬ್ಬದ ಉತ್ಸುಕತೆ, ಸಂಭ್ರಮಕ್ಕೆ ಕೊರತೆಯಾಗಿಲ್ಲ. ಒಟ್ಟಿನಲ್ಲಿ ತರಕಾರಿ ಬೆಲೆ ಎಷ್ಟೇ ಗಗನಕ್ಕೇರುತ್ತಿದ್ದರೂ ರೈತರು ಮಾತ್ರ ಎಲ್ಲ ರೀತಿಯ ತರಕಾರಿ ಖರೀದಿಸಿ ಹಬ್ಬದಾಚರಣೆಗೆ ಸಿದ್ಧರಾಗಿದ್ದಾರೆ.

„ಜಯರಾಜ ದಾಬಶೆಟ್ಟಿ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.