ಅಲ್ಪಸಂಖ್ಯಾತರು ‘ಕೈ’ ಜಾರದಂತೆ ಜಮೀರ್‌ ‘ಅಸ್ತ್ರ’ |

ಮಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ ದಳ |ಜೆಡಿಎಸ್‌ ವಿರುದ್ಧ "ಕೈ' ಪ್ರತಿತಂತ್ರ |ಜಮೀರ್‌ ಹೆಗಲಿಗೆ ಪ್ರಚಾರ ಹೊಣೆ

Team Udayavani, Mar 27, 2021, 8:27 PM IST

zmeer

ಬೀದರ: ಬಸವಕಲ್ಯಾಣ ಉಪ ಕದನಕ್ಕೆ ಯಸ್ರಬ್‌ ಅಲಿ ಖಾದ್ರಿ ಅವರನ್ನು ಕಣಕ್ಕಿಳಿಸುವ ಮೂಲಕ ಮುಸ್ಲಿಂ ಸಮುದಾಯದ ಮತ ಸೆಳೆಯುವ ಜೆಡಿಎಸ್‌ನ ತಂತ್ರಗಾರಿಕೆ ವಿಫಲಗೊಳಿಸಲು ಕಾಂಗ್ರೆಸ್‌ ಕೂಡ ಮೆಗಾ ಪ್ಲಾನ್‌ ಮಾಡಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯ, ಮಾಜಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಕ್ಷೇತ್ರದ ಹೊಣೆ ಹೊರಿಸಿ ಸಾಂಪ್ರದಾಯಿಕ ಮತಗಳು ಚದುರದಂತೆ ಕಾರ್ಯತಂತ್ರ ರೂಪಿಸುತ್ತಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಮುಸ್ಲಿಮರದ್ದು ಎರಡನೇ ಅತಿ ದೊಡ್ಡ ಸಮುದಾಯ. ಇಲ್ಲಿ ಬಹುಸಂಖ್ಯಾತರಾಗಿ ಗುರುತಿಸಿಕೊಂಡಿರುವ ಮುಸ್ಲಿಂ ಮತಗಳು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಹಾಗಾಗಿ ಎಲ್ಲರ ಕಣ್ಣು ಆ ಮತಗಳ ಮೇಲೆಯೇ ಇವೆ.

ಕಲ್ಯಾಣ ಉಪ ಕದನ ಪ್ರತಿಷ್ಠೆಯಾಗಿ ಪಡೆದಿರುವ ಜನತಾ ದಳ ಕಾಂಗ್ರೆಸ್‌ ನಲ್ಲಿದ್ದ ಮುಸ್ಲಿಂ ಸಮುದಾಯದ ಮುಖಂಡ ಖಾದ್ರಿ ಅವರಿಗೆ ಗಾಳ ಹಾಕಿ, ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕೈ ಪಡೆಯಲ್ಲಿ ತಳಮಳಕ್ಕೆ ಕಾರಣವಾಗಿವೆ. ಈಗ ಚುನಾವಣಾ ಕಣ ರಂಗೇರುತ್ತಿದ್ದಂತೆ ಎಚ್ಚೆತ್ತಿರುವ ಕೈ ನಾಯಕರು, ಮುಸ್ಲಿಂ ಸಮುದಾಯದ ಪ್ರಬಲ ನಾಯಕ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಕಲ್ಯಾಣದಲ್ಲೇ ಠಿಕಾಣಿ ಹೂಡಿಸಿ ಮತ ಕ್ರೋಡೀಕರಣದ ಜವಾಬ್ದಾರಿ ವಹಿಸಲಿದೆ.

ಅಲ್ಪಸಂಖ್ಯಾತರ ಮತಗಳೇ ಕಾಂಗ್ರೆಸ್‌ ಪಕ್ಷಕ್ಕೆ ಹಿಂದಿನಿಂದಲೂ ಸಾಂಪ್ರದಾಯಿಕ ವೋಟ್‌ ಬ್ಯಾಂಕ್‌. ಈ ಮತಗಳನ್ನು ಒಡೆದು ಚುನಾವಣೆ ಎದುರಿಸುವುದು ದಳದ ಉದ್ದೇಶ. ಇದರಿಂದ ಹಾನಿಯಾಗುವುದು ಕಾಂಗ್ರೆಸ್‌ ಪಡೆಗೆ. ಇದನ್ನರಿತಿರುವ ಕೈ ನಾಯಕರು, ನಿರ್ಣಾಯಕ ಪಾತ್ರ ವಹಿಸಲಿರುವ ಮತಗಳನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಲು ಸಿದ್ಧವಿಲ್ಲ. ಹಾಗಾಗಿ ಜಮೀರ್‌ ಅವರನ್ನು ಅಖಾಡಕ್ಕೆ ಇಳಿಸಿ, ಅಲ್ಪಸಂಖ್ಯಾತರ ಮತ ಸೆಳೆಯುವ ಪ್ರತಿತಂತ್ರ ಹೆಣೆಯುತ್ತಿದೆ.

ಕಾಂಗ್ರೆಸ್‌ನಲ್ಲಿದ್ದ ಯಸ್ರಬ್‌ ಅವರನ್ನು ಜೆಡಿಎಸ್‌ ಸೆಳೆದು ಚುನಾವಣೆ ಕಣಕ್ಕಿಳಿಸಿದೆ. ಈಗ ಕಾಂಗ್ರೆಸ್‌ ಸಹ ಹಿಂದೆ ಜೆಡಿಎಸ್‌ನಲ್ಲಿದ್ದ ಜಮೀರ್‌ ಖಾನ್‌ ಅವರನ್ನು ಅಸ್ತ್ರವಾಗಿ ಪ್ರಯೋಗಿಸಿ ಸಾಧ್ಯವಾದಷ್ಟು ಮುಸ್ಲಿಂ ಮತಗಳು “ಕೈ’ ಜಾರದಂತೆ ಪ್ಲಾನ್‌ ರೂಪಿಸಿದೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಸವಕಲ್ಯಾಣ ಕ್ಷೇತ್ರದ ಜವಾಬ್ದಾರಿ ವಹಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಅಖಾಡಕ್ಕೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಜಮೀರ್‌ ಆರ್ಥಿಕವಾಗಿ ಸದೃಢರಾಗಿ ರುವುದರಿಂದ ಕ್ಷೇತ್ರದಲ್ಲಿ ಸಂಪನ್ಮೂಲ ವಿನಿಯೋಗದ ಜತೆಗೆ ಚುನಾವಣೆ ಕಾರ್ಯತಂತ್ರ ರೂಪಿಸಲು ಮತ್ತು ರಾಜಕೀಯ ಒಳ ಸುಳಿಗಳನ್ನು ಅನುಷ್ಠಾನಕ್ಕೆ ತರಲು ಕಾಂಗ್ರೆಸ್‌ಗೆ ಸುಲಭವಾಗಬಹುದು. ಆದರೆ, ಕೈ ಪಡೆಯ ಕಾರ್ಯತಂತ್ರ ಎಷ್ಟರ ಮಟ್ಟಿಗೆ ಫಲ ಕೊಡಬಹುದು ಎಂಬುದನ್ನು ಕಾದು ನೊಡಬೇಕಷ್ಟೇ.

ಶಶಿಕಾಂತ ಬಂಬುಳಗೆ 

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.