ಮೀಸಲು ಸೌಲಭ್ಯದ ಮೇಲೆ ಶೂನ್ಯ ಸವಾರಿ!


Team Udayavani, Oct 15, 2021, 11:59 AM IST

5

ಸಿಂಧನೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ಲಭಿಸಿರುವ 371 ಜೆ (ವಿ)ಯ ಸೌಲಭ್ಯದಡಿ ನೇಮಕಾತಿಯಲ್ಲಿ ಸಿಗಲಿರುವ ಮೀಸಲಿಗೆ ಕಣ್ಮುಚ್ಚಿದ ಶಾಲೆ-ಕಾಲೇಜುಗಳು ಗಣನೀಯ ಶಾಪವಾಗುವ ಮುನ್ಸೂಚನೆ ಲಭಿಸಿದೆ.

ಶೂನ್ಯ ದಾಖಲಾತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಇಲ್ಲವೇ ಕಾಲೇಜು ಶೂನ್ಯ ದಾಖಲಾತಿ ಕಾರಣಕ್ಕೆ ಮುಚ್ಚುತ್ತಿದ್ದಂತೆ ಅಲ್ಲಿನ ಹುದ್ದೆಗಳು ಕೂಡ ವರ್ಗಾವಣೆ ಆಗುವುದರಿಂದ ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ಸಂಖ್ಯೆಗಳಲ್ಲಿ ಕಡಿತ ದಾಖಲಾಗುತ್ತಿದೆ. ಇದು ಸಹಜವಾಗಿಯೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕವಾಗುವವರಿಗೆ ಸಿಗಬೇಕಾದ ಹುದ್ದೆಗಳನ್ನು ಕಿತ್ತುಕೊಳ್ಳುವ ಭಾಗವಾಗಿ ಮಾರ್ಪಟ್ಟಿದೆ.

ಏನಿದು ಸಮಸ್ಯೆ?

ರಾಜ್ಯದ ಬಹುತೇಕ ಸರ್ಕಾರಿ ಪಿಯು ಕಾಲೇಜುಗಳಲ್ಲಿ 2018-19ನೇ ಸಾಲಿನಲ್ಲಿ ಶೂನ್ಯ ದಾಖಲಾತಿಯಾದ ಕಾಲೇಜು ಮುಚ್ಚುವಂತೆ ಸರ್ಕಾರವೇ ಪರೋಕ್ಷವಾಗಿ ಒತ್ತಡ ಹೇರಿತ್ತು. ಅದರ ಪರಿಣಾಮ ಎಲ್ಲ ಕಡೆಯೂ ತಮಗೆ ಬೇಕಿದ್ದ ಕಡೆಗೆ ಉಪನ್ಯಾಸಕರು ಹುದ್ದೆ ಸಮೇತ ವರ್ಗಾವಣೆ ಮಾಡಿಸಿಕೊಂಡು ಪಾರಾದರು. ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಇದೇ ಕಾರಣಕ್ಕೆ ಬರೋಬ್ಬರಿ 100 ವಿಜ್ಞಾನ ಕಾಲೇಜು ಆಯಾ ವರ್ಷದಲ್ಲಿ ಕಣ್ಮುಚ್ಚಿವೆ. ಇದರ ಫಲವಾಗಿ 300 ಹುದ್ದೆಗಳು ಕೂಡ ಕಾಣೆಯಾಗಿವೆ. ಪ್ರತಿ ಜಿಲ್ಲೆಯಲ್ಲೂ ಈ ರೀತಿ ಬೆಳವಣಿಗೆ ನಡೆದ ಹಿನ್ನೆಲೆಯಲ್ಲಿ ಹೊಸದಾಗಿ ಹುದ್ದೆ ಆಯ್ಕೆ ಮಾಡಲು ಬಯಸಿದವರಿಗೆ ಕಲ್ಯಾಣ ಕರ್ನಾಟಕದಲ್ಲಿ ವಿಜ್ಞಾನ ವಿಭಾಗದ ಹುದ್ದೆಗಳೇ ಸಿಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮೀಸಲು ಆಧರಿಸಿ ನೇಮಕಾತಿ ಸಂದರ್ಭದಲ್ಲಿ ಸಿಗಬೇಕಿದ್ದ 210 ಹುದ್ದೆಗಳು ಹೆಸರಿಲ್ಲದೇ ಹೋಗಿವೆ.

ಇದನ್ನೂ ಓದಿ: ನಾರಿನಾಳದಲ್ಲಿ ಚಿನ್ನದ ನಿಕ್ಷೇಪಕ್ಕೆ ಶೋಧ

ಮರು ಮಂಜೂರಾತಿ ಕಷ್ಟ

ಸರ್ಕಾರಿ ಪಿಯ ಕಾಲೇಜುಗಳಲ್ಲಿ ಮುಚ್ಚಿದ ವಿಜ್ಞಾನ ವಿಭಾಗ ತೆರೆಯುವುದಕ್ಕೆ ಅವಕಾಶವೇ ಇಲ್ಲದಂತಾಗಿ ಹೋಗಿದೆ. ಮರು ಮಂಜೂರಾತಿ ಇಲ್ಲವೇ ಸರ್ಕಾರದ ಅನುಮತಿ ಪಡೆದು ಆರಂಭಿಸಲು ಮತ್ತೂಮ್ಮೆ ರಾಜ್ಯ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಬೇಕಾಗುತ್ತದೆ. ಅಂತಹ ರೀತಿಯಲ್ಲಿ ಹೋರಾಟ ನಡೆಸುವುದಕ್ಕೆ ಕೆಲವು ಕಡೆ ಸೌಲಭ್ಯ ಕೊರತೆ, ಮತ್ತೆ ಕೆಲವೆಡೆ ಇಚ್ಛಾಶಕ್ತಿ ಅಭಾವ ಸಮಸ್ಯೆಯಾಗಿದೆ. ಶೂನ್ಯ ದಾಖಲಾತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚಿದಾಗಲೂ ತೊಂದರೆ ಉಂಟಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸದ್ದಿಲ್ಲದೇ ಶಾಲೆ-ಕಾಲೇಜು ಮುಚ್ಚಿದ ಬೆಳವಣಿಗೆ ಭವಿಷ್ಯದಲ್ಲಿ ಉದ್ಯೋಗ ಅರಸುವ ಪ್ರತಿಭಾನ್ವಿತರಿಗೆ ಸವಾಲು ಒಡ್ಡಿದೆ. ಕಲ್ಯಾಣ ಕರ್ನಾಟಕಕ್ಕೆ ಉದ್ಯೋಗ, ನೇಮಕಾತಿಯಲ್ಲಿ ಮೀಸಲು ನೀಡಿದ ಬಳಿಕ ಇರುವ ಹುದ್ದೆ ಉಳಿಸಿಕೊಂಡು ಆ ಸ್ಥಾನಗಳಿಗೆ ಮತ್ತೂಬ್ಬರನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುವಂತಾಗಲು ಶ್ರಮಿಸಬೇಕಿದೆ. ಇಂತಹ ಸವಾಲಿಗೆ ಎದೆಯೊಡ್ಡಿ ರಾಯಚೂರು ಜಿಲ್ಲೆಯ ಪೈಕಿ ಸಿಂಧನೂರಿನಲ್ಲಿ ಒಂದೇ ಒಂದು ವಿಜ್ಞಾನ ವಿಭಾಗ ಉಳಿಸಿಕೊಳ್ಳಲಾಗಿದ್ದು, ಉಳಿದ ಕಡೆಯೂ ಇಂತಹ ಪ್ರಯತ್ನಗಳು ನಡೆಯಬೇಕಿದೆ.

ಓದುವ ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಭವಿಷ್ಯದಲ್ಲಿ ನೇಮಕಾತಿ ಹೊಂದುವ ಅಭ್ಯರ್ಥಿಗಳಿಗೂ ಅನುಕೂಲವಾಗಲು ಇರುವ ಹುದ್ದೆಗಳು ರದ್ದಾಗುವುದನ್ನು ತಪ್ಪಿಸಬೇಕಿದೆ. ಈಗಾಗಲೇ ಹಲವು ಹುದ್ದೆಗಳನ್ನು ಕಳೆದುಕೊಂಡ ಕಲ್ಯಾಣ ಕರ್ನಾಟಕ ಎಚ್ಚೆತ್ತುಕೊಳ್ಳಬೇಕಿದೆ. -ಹೆಸರು ಹೇಳಲಿಚ್ಛಿಸದ ಸರ್ಕಾರಿ ಕಾಲೇಜಿನ ಉಪನ್ಯಾಸಕ

-ಸಿಂಧನೂರು ­ಯಮನಪ್ಪ ಪವಾರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.