ಕರ್ನಾಟಕ -ಮಹಾರಾಷ್ಟ್ರ ಗಡಿಯಲ್ಲಿ ಕೇಂದ್ರಿತವಾಗಿದ್ದ ಭೂಕಂಪ ಕೇಂದ್ರಬಿಂದು


Team Udayavani, Jul 9, 2022, 11:28 AM IST

ಕರ್ನಾಟಕ -ಮಹಾರಾಷ್ಟ್ರ ಗಡಿಯಲ್ಲಿ ಕೇಂದ್ರಿತವಾಗಿದ್ದ ಭೂಕಂಪ ಕೇಂದ್ರಬಿಂದು

ವಿಜಯಪುರ: ಶನಿವಾರ ಬೆಳಿಗ್ಗೆ 6.22ಕ್ಕೆ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ 4.4 ಪ್ರಮಾಣದಲ್ಲಿ ಕಂಪನವಾಗಿದೆ. ಈ ಭೂಕಂಪ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿ ಕೇಂದ್ರೀಕೃತವಾಗಿತ್ತು. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದ ಪರಿಸರದಲ್ಲಿ ಭೂಮಿಯ 10 ಕಿ.ಮೀ. ಆಳದಲ್ಲಿ ತನ್ನ ಪ್ರಭಾವ ಬೀರಿದ್ದು, ಜಿಲ್ಲೆಯ ಜನರು ಆತಂಕದಲ್ಲಿ ಬದುಕುವಂತೆ ಮಾಡಿದೆ.

ಭೂಕಂಪ ಸಂಭವಿಸುತ್ತಲೇ ಜಿಲ್ಲಾಡಳಿತ ತಹಶಿಲ್ದಾರರಿಂದ ಸ್ಥಾನಿಕ ವರದಿಗೆ ಸೂಚಿಸಿದ್ದು, ವಿಜಯಪುರ, ತಿಕೋಟಾ, ಬಬಲೇಶ್ವರ, ಚಡಚಣ ಸೇರಿದಂತೆ ತಹಶಿಲ್ದಾರ ನೇತೃತ್ವದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ವಿವಿಧ ಬಡಾವಣೆಗೆ ಭೇಟಿ ನೀಡಿ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುವ ಜೊತೆಗೆ, ಜನರಲ್ಲಿ ಆತ್ಮಸ್ಥೈರ್ಯ ತುಂಬಲು ಮುಂದಾಗಿದ್ದಾರೆ.

ಈ ಹಿಂದೆ ವಿಜಯಪುರ ಜಿಲ್ಲೆಯ ಮನಗೂಳಿ, ಬಸವನಬಾಗೇವಾಡಿ ಪರಿಸರದಲ್ಲಿ ಕೇಂದ್ರಿತವಾಗಿದ್ದ ಭೂಕಂಪನದ ಬಿಂದು, ಇದೀಗ ವಿಜಯಪುರ ನಗರ ಹಾಗೂ ಸುತ್ತಲೂ ಕೇಂದ್ರೀಕೃತವಾಗುತ್ತಿದೆ ಎನ್ನಲಾಗಿದೆ. ವಿಜಯಪುರ ನಗರ ಹಾಗೂ ಸುತ್ತಲಿನ ಗ್ರಾಮೀಣ ಪರಿಸರದಲ್ಲಿ ಪದೇ ಪದೆ ಭೂಕಂಪನ ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ:ತಿಂಗಳ ಹಿಂದೆ ಕಾಣೆಯಾಗಿದ್ದ ಕಮಾಂಡೋ ವಿಂಗ್ ಸೇನಾಧಿಕಾರಿ ರೈಲ್ವೆ ನಿಲ್ದಾಣದಲ್ಲಿ ಪತ್ತೆ

ಶನಿವಾರ ಸಂಭವಿಸಿದ ಭೂಕಂಪನ ಶಿರನಾಳ, ಮಖಣಾಪುರ, ತಿಡಗುಂದಿ, ಡೊಮನಾಳ ಮಧ್ಯದಲ್ಲಿ ಕನ್ನೂರ ಗ್ರಾಮದ ಪರಿಸರದಲ್ಲಿ ಕೇಂದ್ರಿತ ಆಗಿರುವುದನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಅಧಿಕೃತ ಮಾಹಿತಿ ನೀಡಿದೆ.

ವಿಜಯಪುರ ನಗರದಲ್ಲಿ ಸೇರಿದಂತೆ ಜಿಲ್ಲೆಯಲ್ಲಿ ಭೂಕಂಪನ ಪ್ರಮಾಣ ಹೆಚ್ಚುತ್ತಲೇ ಸಾಗಿದ್ದು, ಜನರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಜಿಲ್ಲೆಯಲ್ಲಿ ಮಣ್ಣಿನ ಹಾಗೂ ಹಳೆಯ ಮನೆಗಳೇ ಹೆಚ್ಚಿರುವ ಕಾರಣ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಪ್ರಮಾಣ ಇನ್ನೂ ಹೆಚ್ಚಿದರೆ ದೊಡ್ಡ ಪ್ರಮಾಣದ ಹಾನಿಯಾಗುವ ಅಪಾಯವಿದೆ ಎಂದು ಜಿಲ್ಲೆಯ ಜನರು ಆತಂಕಕ್ಕೊಳಗಾಗಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ ಭೂಕಂಪ ಸಂಭವಿಸಿರುವುದನ್ನು ಜಿಲ್ಲಾಡಳಿತ ಖಚಿತಪಡಿಸಿದ್ದು, ಯಾವುದೇ ಆಸ್ತಿ, ಜೀವಹಾನಿ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಶನಿವಾರದ ಭೂಕಂಪನ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿ ತನ್ನ ಪ್ರಭಾವ ಬೀರಿದೆ. ವಿಜಯಪುರ ಜಿಲ್ಲೆಯ ತಿಕೋಟಾ, ವಿಜಯಪುರ, ಬಬಲೇಶ್ವರ, ಮುದ್ದೇಬಿಹಾಳ, ಇಂಡಿ‌, ಚಡಚಣ, ಮಾತ್ರವಲ್ಲದೇ ಬೆಳಗಾವಿ ಜಿಲ್ಲೆಯ ಅಥಣಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ, ಸೊಲ್ಲಾಪುರ ಜಿಲ್ಲೆಯ ಪಂಢರಪುರ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಭೂಕಂಪದ ಅನುಭವ ಆಗಿದೆ.

ಟಾಪ್ ನ್ಯೂಸ್

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

Bidar: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

15

Manipal: ಸಿಟಿ ಬಸ್‌ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

HDFC Bank: ಸಣ್ಣ ಪ್ರಮಾಣದ ಯುಪಿಐ ವಹಿವಾಟಿನ ಎಸ್‌ ಎಂಎಸ್‌ ಅಲರ್ಟ್ಸ್‌ ಬಂದ್…

14

IMDb ಟಾಪ್​ 100 ಇಂಡಿಯನ್ ಸೆಲೆಬ್ರಿಟಿ ಲಿಸ್ಟ್: ದೀಪಿಕಾ ನಂ.1, ಸ್ಥಾನ ಪಡೆದ ಕನ್ನಡದ ಈ ನಟ

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Petrol ಸುರಿದು ಬೆಂಕಿ ಹಚ್ಚಿದ ಘಟನೆ: ಪ್ರಿಯತಮೆಯ ತಂದೆಯ ಬಂಧನ

doctor 2

Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

ramesh-jigajinagi

Vijayapura;’ಮಂಗಳವಾರದ ಮಹಿಮೆ’ ಎನ್ನುತ್ತಿರುವ ಸಂಸದ ಜಿಗಜಿಣಗಿ

Vijayapura ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ

Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

Bidar: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

ಪ್ರೇರಣೆ ನೀಡಿದ ಪ್ರವಚನ-ಆನ್‌ಲೈನ್‌ನಿಂದ ಗಡಿ ದಾಟಿದ ರಾಯಚೂರು ಮಾವು!

ಪ್ರೇರಣೆ ನೀಡಿದ ಪ್ರವಚನ-ಆನ್‌ಲೈನ್‌ನಿಂದ ಗಡಿ ದಾಟಿದ ರಾಯಚೂರು ಮಾವು!

15

Manipal: ಸಿಟಿ ಬಸ್‌ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.