ಹೆಜ್ಜೆನುದಾಳಿ: 10 ಮಂದಿಗೆ ಗಾಯ
Team Udayavani, Feb 2, 2021, 6:21 PM IST
ವಿಜಯಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಎದುರು ಇರುವ ಮರಗಳಲ್ಲಿರುವ ಹೆಜ್ಜೆನುಗಳು ಅಂಕತಟ್ಟಿ ನಂಜುಂಡಪ್ಪ ಸರ್ಕಲ್ನಲ್ಲಿ ಅನೇಕರಿಗೆ ಕಚ್ಚಿದ ಪರಿಣಾಮ 10ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಪಟ್ಟಣದ ದೇವನಹಳ್ಳಿ ಮುಖ್ಯರಸ್ತೆಯ ಉದ್ದಕ್ಕೂ ಹಾಗೂ ಆಟದ ಮೈದಾನ, ಜನಸಂದಣಿಯಿರುವ ಪ್ರಮುಖ ಸರ್ಕಲ್ ಕಡೆ ಹೆಜ್ಜೆàನುಗಳು ಹರಡಿಕೊಂಡು ಕಚ್ಚಲು ಆರಂಭಿಸುತ್ತಿದ್ದಂತೆಯೇ ಜನರು ದಿಕ್ಕಾಪಾಲಗಿ ಓಡಲು ಆರಂಭಿಸಿದರು. ಅಂಗಡಿಗಳ ಬಾಗಿಲುಗಳನ್ನು ತಕ್ಷಣ ಎಳೆದುಕೊಂಡು ಕೆಲವರು ಒಳ ಸೇರಿಕೊಂಡರು.
ವಾಕಿಂಗ್ ಹೋಗಿ ಬರುತ್ತಿದ್ದ ಇಬ್ಬರು ವೃದ್ಧ ದಂಪತಿ ಮೇಲೆ ಜೇನುಗಳು ದಾಳಿ ಮಾಡಿದ ಪರಿಣಾಮ ಅವರು ಗಾಯಗೊಂಡಿದ್ದಾರೆ. ಬೀದಿ ವ್ಯಾಪಾರಿಗಳು ತಳ್ಳವ ಗಾಡಿಗಳನ್ನು ಸ್ಥಳದಲ್ಲಿಯೇ ಬಿಟ್ಟು ಓಡುವಂತಾಯಿತು. ಗಾಯಗೊಂಡವರು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಜೇನುಹುಳುಗಳ ಕಾಟ ದಿಂದಾಗಿ ಓರ್ವ ಯುವಕ ಸಾವನ್ನಪ್ಪಿದ್ದಲ್ಲದೇ ಏಳೆಂಟು ಜನರು ಗಾಯಗೊಂಡಿದ್ದರು.
ಇದನ್ನೂ ಓದಿ:ಮೆಟ್ರೋಲೈಟ್- ಮೆಟ್ರೋನಿಯೋ ಸೇವೆ
ಆ ಘಟನೆ ಮರೆಯುವಷ್ಟರಲ್ಲಿಯೇ ಮತ್ತೂಮ್ಮೆ ಇಂತಹ ಘಟನೆ ನಡೆದಿರುವುದು ಪಟ್ಟಣದ ಜನತೆಯನ್ನು ಭಯಬೀಳಿಸಿದೆ.ಹೆಜ್ಜೆನುಗಳು ಹೆಚ್ಚು ವಿಷಕಾರಿಯಾಗಿರು ವುದರಿಂದ ಜೀವಕ್ಕೆ ಅಪಾಯಕಾರಿಯಾಗಿವೆ. ಕೂಡಲೇ ಈ ಪ್ರದೇಶದಲ್ಲಿನ ಮರಳಗಳಿÉರುವ ಜೇನುಹುಳುಗಳ ಗೂಡುಗಳನ್ನು ತೆರವು ಗೊಳಿಸಬೇಕು ಎಂದು ಪಟ್ಟಣ ನಿವಾಸಿ ಹಾರ್ಡಿಪುರ ಜಯರಾಂ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ