ವಿಜಯಪುರ: 156 ಜನರಿಗೆ ಹೊಸದಾಗಿ ಕೋವಿಡ್ 19 ಸೋಂಕು : ಮೂವರ ಸಾವು
Team Udayavani, Aug 17, 2020, 1:09 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ ಬಿಡುಗಡೆಯಾದ ಕೋವಿಡ್ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಮಹಾಸ್ಫೋಟವಾಗಿದೆ.
ಒಂದೇ ದಿನ 156 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4868 ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ಸೋಂಕಿತರಲ್ಲಿ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ.
ಭಾನುವಾರ ಮಾಧ್ಯಮಗಳಿಗೆ ಬಿಡುಗಡೆಯಾದ ವರದಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 156 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4868ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 185 ಜನರು ರೋಗಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದರೊಂದಿಒಗೆ ಮನೆಗೆ ಮರಳಿದವರ ಸಂಖ್ಯೆ 3780 ಕ್ಕೆ ಏರಿದೆ. ಸದ್ಯ ಜಿಲ್ಲೆಯ ಆಸ್ಪತ್ರೆಗಳಲ್ಲಿ 1034 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಇನ್ನು ಸೋಂಕಿತರಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ ಕುಮಾರ್ ತಿಳಿಸಿದ್ದಾರೆ.
ಕೊವಿಡ್ 19 ಸೋಂಕಿನಿಂದ ಮೃತರನ್ನು 62 ವರ್ಷದ ವೃದ್ಧ ಪಿ209836 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಜ್ವರ, ಸಕ್ಕರೆ ಕಾಯಿಲೆ, ಎಚ್ಐವಿ ಸೋಂಕಿನಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗಾಗಿ ಆ.5 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆ.15 ರಂದು ಮೃತಪಟ್ಟಿದ್ದಾರೆ.
68 ವರ್ಷ ವೃದ್ಧೆ ಪಿ128462 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಕೆಮ್ಮು, ಜ್ವರ, ಅಸ್ತಮಾ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಜು.22 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆ.10 ರಂದು ಮೃತಪಟ್ಟಿದ್ದಾರೆ.
65 ವರ್ಷದ ವೃದ್ದೆ ಪಿ190480 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಕೆಮ್ಮು ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಆ.8 ರಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಆ.9 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ