ಒಣದ್ರಾಕ್ಷಿ ಬೆಳೆಗಾರರಿಗೆ 2 ಕೋಟಿ ರೂ ವಂಚನೆ: ಮಾಲು ಸಮೇತ ಗುಜರಾತ್ ವ್ಯಾಪಾರಿ ಬಂಧನ


Team Udayavani, Jul 4, 2022, 2:14 PM IST

ಒಣದ್ರಾಕ್ಷಿ ಬೆಳೆಗಾರರಿಗೆ 2 ಕೋಟಿ ರೂ ವಂಚನೆ: ಮಾಲು ಸಮೇತ ಗುಜರಾತ್ ವ್ಯಾಪಾರಿ ಬಂಧನ

ವಿಜಯಪುರ: ಜಿಲ್ಲೆಯ ರೈತರಿಂದ ಒಣದ್ರಾಕ್ಷಿ ಖರೀದಿಸಿ ಆನ್ ಲೈನ್ ಮೂಲಕ ಹಣ ಪಾವತಿಸುವ ಭರವಸೆ ಈಡೇರಿಸದೆ ಪರಾರಿಯಾಗಿದ್ದ ಗುಜರಾತ್ ಮೂಲದ ವ್ಯಾಪಾರಿಯನ್ನು ಬಂಧಿಸಿರುವ ಪೊಲೀಸರು, 2.2 ಕೋಟಿ ರೂ. ಮೌಲ್ಯದ 117 ಟನ್ ಒಣದ್ರಾಕ್ಷಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯಪುರ ನಗರದ ಕೈಗಾರಿಕಾ ಪ್ರದೇಶದಲ್ಲಿ ಶ್ರೀಮಹಾಲಕ್ಷ್ಮೀ ಟ್ರೇಡರ್ಸ್ ಹೆಸರಿನಲ್ಲಿ ದಾಸ್ತಾನು ಮಳಿಗೆ ತೆರೆದಿದ್ದ ಗುಜರಾತಿ ವ್ಯಾಪಾರಿಗಳಾದ ಅಹಮದಾಬಾದ್ ಮೂಲದ ಕಮಲಕುಮಾರ, ಕೃನಾಲಕುಮಾರ, ಸುನೀಲ, ಜಯೇಶ, ಭರತ ಪಟೇಲ, ರೋಹಿಣಿಕುಮಾರ ಪಟೇಲ, ನೀಲ್ ಪಟೇಲ, ಪಿಂಕೇಶ ಪಟೇಲ ಎಂಬ ವ್ಯಾಪಾರಿಗಳು ವಿಜಯಪುರ ದ್ರಾಕ್ಷಿ ಬೆಳೆಗಾರ ರೈತರು, ವ್ಯಾಪಾರಿಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ಆನ್ ಲೈನ್ ಮೂಲಕ ಹಣ ಪಾವತಿಸುವುದಾಗಿ ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯ ರೈತರಿಂದ ಒಣದ್ರಾಕ್ಷಿ ಖರೀದಿಸಿದ್ದರು. ಅಬ್ದುಲ್ ಖಾದರ ತಹಶೀಲ್ದಾರ ಎಂಬವರಿಂದ 9.440 ಟನ್ ತೂಕದ 18.19 ಲಕ್ಷ ರೂ. ಮೌಲ್ಯ, ಸಂತೋಷಕುಮಾರ ಸಿದ್ರಾಮಪ್ಪ ಗುಂಜಟಗಿ ಎಂಬವರಿಂದ 10.423 ಟನ್ ತೂಕದ 20.69 ಲಕ್ಷ ರೂ. ಮೌಲ್ಯದ ಒಣದ್ರಾಕ್ಷಿ, ತೌಫೀಕ್ ಸಲೀಂ ಅಂಗಡಿ ಎಂಬರಿಂದ 12.775 ಟನ್ ತೂಕದ 24.29 ಲಕ್ಷ ರೂ. ಮೌಲ್ಯದ ಒಣದ್ರಾಕ್ಷಿ, ಜಾಕೀರ ಹಾಜಿಲಾಲ್ ಭಾಗವಾನ್ ಇವರಿಂದ 11.54 ಟನ್ ತೂಕದ 21.59 ಲಕ್ಷ ರೂ. ಮೌಲ್ಯದ ಒಣದ್ರಾಕ್ಷಿ ಸೇರಿದಂತೆ ಸುಮಾರು 2.2 ಕೋಟಿ ರೂ. ಮೌಲ್ಯದ 117 ಟನ್ ಒಣದ್ರಾಕ್ಷಿ ಖರೀದಿಸಿ, ಒಂದು ತಿಂಗಳಲ್ಲಿ ಹಣ ಪಾವತಿಸುವ ಭರವಸೆ ನೀಡಿ, ಹಣ ನೀಡದೆ ಗುಜರಾತಿಗೆ ಪರಾರಿಯಾಗಿದ್ದರು.

ಅಬ್ದುಲ್ ತಹಶಿಲ್ದಾರ, ಸಂತೋಷಕುಮಾರ ಗುಂಜಟಗಿ, ತೌಫೀಕ್ ಅಂಗಡಿ, ಜಾಕೀರ ಬಾಗವಾನ ಇವರು ತಮಗೆ ಗುಜರಾತಿ ವ್ಯಾಪಾರಿಗಳು ವಂಚಿಸಿದ ಬಗ್ಗೆ ನಗರದ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ:“ಕಾಳಿ” ಸಾಕ್ಷ್ಯಚಿತ್ರದ ಪೋಸ್ಟರ್ ವಿರುದ್ಧ ಆಕ್ರೋಶ: ಲೀನಾ ಬಂಧನಕ್ಕೆ ಆಗ್ರಹ…ಏನಿದು ವಿವಾದ

ದೂರು ದಾಖಲಿಸಿಕೊಂಡ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆನಂದಕುಮಾರ, ಡಿಎಸ್ಪಿ ಲಕ್ಷ್ಮೀನಾರಾಯಣ, ಸಿಪಿಐ ರಮೇಶ ಅವಜಿ, ಎಸೈ ಉಮೇಶ ಗೆಜ್ಜೆ ಹಾಗೂ ಇತರರಿದ್ದ ತನಿಖಾ ತಂಡ ರಚಿಸಿದ್ದರು.

ತಿಡಗುಂದಿ ಬಳಿ ಕೃನಾಲಕುಮಾರ ಪಟೇಲ್ ಎಂಬವನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಗುಜರಾತಿನ ಅಹಮದಾಬಾದ್ ನಲ್ಲಿ ಒಣದ್ರಾಕ್ಷಿಯನ್ನು ದಾಸ್ತಾನು ಮಾಡಿದ್ದಾಗಿ ಒಪ್ಪಿಕೊಂಡಿದ್ದ. ಇದನ್ನು ಆಧರಿಸಿ ಗುಜರಾತಿನ ಅಹಮದಾಬಾದ್ ಗೆ ತೆರಳಿ ಅಲ್ಲಿ ದಾಸ್ತಾನು ಮಾಡಿದ್ದ 117 ಟನ್ ಒಣದ್ರಾಕ್ಷಿಯನ್ನು 8 ಲಾರಿಗಳಲ್ಲಿ ವಿಜಯಪುರ ನಗರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ಕೃನಾಲ ಕುಮಾರ್ ಮಾತ್ರ ಬಂಧನವಾಗಿದ್ದು, ಇತರೆ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇತರೆ ಏಳು ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾಗಿ ಎಸ್ಪಿ ಆನಂದಕುಮಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಪ್ರಕರಣವನ್ನು ಯಶಸ್ವಿಯಾಗಿರುವ ತನಿಖಾ ತಂಡಕ್ಕೆ ಎಸ್ಪಿ ಆನಂದಕುಮಾರ ನಗದು ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.