ವಿಜಯಪುರದಲ್ಲಿ ಒಂದೇ ದಿನ 20 ಮಿ.ಮೀ. ಮಳೆ: ಸಿಡಿಲಿಗೆ ಹಸು, ಆರು ಮೇಕೆ ಬಲಿ
ಬಿಸಿಲಿನ ಧಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದ ಮಳೆ
Team Udayavani, May 13, 2022, 6:41 PM IST
ವಿಜಯಪುರ: ದ್ರಾಕ್ಷಿಯ ಕಣಜ, ಲಿಂಬೆ ನಾಡು ಎಂದೆಲ್ಲ ಕರೆಸಿಕೊಳ್ಳುವ ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಸಂಜೆಯಿಂದ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಸರಾಸರಿ 20.23 ಮಿ.ಮೀ. ಮಳೆ ದಾಖಲಾಗಿದೆ. ಇದರೊಂದಿಗೆ ಟ್ಯಾಂಕರ್ ಮೂಲಕ ತೋಟಗಾರಿಕೆ ಬೆಳೆ ಉಳಿಸಿಕೊಳ್ಳುವ ದುಸ್ಥಿತಿ ಎದುರಿಸುತ್ತಿದ್ದ ರೈತರು ಸಂತಸಗೊಂಡಿದ್ದಾರೆ. ಮತ್ತೊಂದೆಡೆ 40 ಡಿ.ಸೆ. ಗಡಿ ದಾಟಿದ್ದ ಬಿಸಿಲಿನ ಧಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದ ಮಳೆ ನೆಮ್ಮದಿ ಕರುಣಿಸಿದೆ.
ಮುದ್ದೇಬಿಹಾಳ ತಾಲೂಕಿನಲ್ಲಿ ಅತೀ ಹೆಚ್ಚು ಅಂದರೆ 34.2 ಮಿ.ಮೀ. ಮಳೆ ಸುರಿದರೆ, ತಿಕೋಟಾ ತಾಲೂಕಿನಲ್ಲಿ 3.6 ಮಿ.ಮೀ. ಮಳೆ ಸುರಿದಿದೆ. ಇದೇ ತಾಲೂಕಿನ ನಾಲತವಾಡ ಭಾಗದಲ್ಲಿ 40.4 ಮಿ.ಮೀ. ಮಳೆಯಾಗಿದ್ದು, ವಿಜಯಪುರ ನಗರದಲ್ಲಿ 19.2ಮಿ.ಮೀ. ಮಳೆ ದಾಖಲಾಗಿದೆ.
ವಿಜಯಪುರ ತಾಲೂಕಿನಲ್ಲಿ ಸರಾಸರಿ 21.02 ಮಿ.ಮೀ., ಬಬಲೇಶ್ವರ ತಾಲೂಕಿನಲ್ಲಿ ಸರಾಸರಿ 20.8 ಮಿ.ಮೀ., ತಿಕೋಟಾ ತಾಲೂಕಿನಲ್ಲಿ 3.6 ಮಿ.ಮೀ., ಬಸವನಬಾಗೇವಾಡಿ ತಾಲೂಕಿನಲ್ಲಿ 27.3 ಮಿ.ಮೀ., ನಿಡಗುಂದಿ ತಾಲೂಕಿನಲ್ಲಿ 34 ಮಿ.ಮೀ., ಕೊಲ್ಹಾರ ತಾಲೂಕಿನಲ್ಲಿ 28 ಮಿ.ಮೀ., ತಾಳಿಕೋಟೆ ತಾಲೂಕಿನಲ್ಲಿ 13.60 ಮಿ.ಮೀ., ಇಂಡಿ ತಾಲೂಕಿನಲ್ಲಿ 21.80 ಮಿ.ಮೀ., ಚಡಚಣ ತಾಲೂಕಿನಲ್ಲಿ 15.65 ಮಿ.ಮೀ., ಸಿಂದಗಿ ತಾಲೂಕಿನಲ್ಲಿ 12.50 ಮಿ.ಮೀ., ದೇವರಹಿಪ್ಪರಗಿ ತಾಲೂಕಿನಲ್ಲಿ 10.63 ಮೀ.ಮೀ., ಮಳೆ ಸುರಿದಿದೆ.
ಪ್ರಾಣಿ ಹಾನಿ
ಗುರುವಾರ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಸಿಡಿಲಿಗೆ ಮಹಾದೇವ ಯಮನಪ್ಪ ಜೇರಟಗಿ ಎಂಬ ರೈತರಿಗೆ ಸೇರಿದ ಒಂದು ಹಸು, ನಾಲತವಾಡ ಗ್ರಾಮದ ಬಳಿಯ ಚವನಭಾವಿ ಗ್ರಾಮದಲ್ಲಿ ಮಲ್ಲಪ್ಪ ನಂದಪ್ಪ ಗುರಿಕಾರ ಅವರಿಗೆ ಸೇರಿದ ಆರು ಮೇಕೆಗಳು ಬಲಿಯಾಗಿವೆ ಎಂದು ಜಿಲ್ಲಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್