ಮುಖ್ಯ ರಸ್ತೆ ಮೇಲ್ದರ್ಜೆಗೆ 21 ಕೋಟಿ ರೂ. ಅನುದಾನ

ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಪ್ರಯತ್ನಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Team Udayavani, Sep 29, 2020, 4:26 PM IST

vp-tdy-1

ಮುದ್ದೇಬಿಹಾಳ: ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾಗಿದ್ದ ಮುದ್ದೇಬಿಹಾಳ ಪಟ್ಟಣದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ವಿಜಯಪುರ ರಸ್ತೆಯ ಬಿದರಕುಂದಿ ಕಿರು ಸೇತುವೆವರೆಗಿನ ಒಂದೂವರೆ ಕಿ.ಮೀ. ಹೆದ್ದಾರಿ ಮಾದರಿಯ 14 ಮೀ. ಅಗಲದ ಡಾಂಬರೀಕರಣ ಹಾಗೂ ಅಲ್ಲಿಂದ ಅಗಸಬಾಳ ಕ್ರಾಸ್‌ ವರೆಗಿನ 13.5 ಕಿ.ಮೀ.ವರೆಗಿನ 7 ಮೀ. ಅಗಲದ ಡಾಂಬರೀಕರಣ ರಸ್ತೆ ದುರಸ್ತಿ ಕಾಮಗಾರಿಗೆ ಸರ್ಕಾರ ಸೋಮವಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಸಾರ್ವಜನಿಕ ವಲಯದಲ್ಲಿ ಹರ್ಷಕ್ಕೆ ಕಾರಣವಾಗಿದೆ.

ಈ ರಸ್ತೆ ದುರಸ್ತಿಗಾಗಿ ಸ್ಥಳೀಯ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಅವರು ಕಳೆದ ಮೂರು ತಿಂಗಳಿಂದ ಸರ್ಕಾರದ ಮಟ್ಟದಲ್ಲಿ ನಡೆಸುತ್ತಿದ್ದ ಪ್ರಯತ್ನಕ್ಕೆ ಯಶ ದೊರಕಿದಂತಾಗಿದ್ದು ಶಾಸಕರ ಜನಪರ ಕಾಳಜಿಯನ್ನು ಸಾರ್ವಜನಿಕರು ಕೊಂಡಾಡಿದ್ದಾರೆ. ಈಗಾಗಲೇ ಕರ್ನಾಟಕದ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಶಿರಾಡೋಣದಿಂದ ರಾಯಚೂರು ಜಿಲ್ಲೆ ಲಿಂಗಸಗೂರವರೆಗೆ ರಾಜ್ಯ ಹೆದ್ದಾರಿ 41ರ ಕಾಮಗಾರಿ ಹಂತ ಹಂತವಾಗಿ ಪ್ರಗತಿಯಲ್ಲಿದೆ. ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಈ ರಸ್ತೆಯು ವಿಜಯಪುರ ಮುಖ್ಯ ರಸ್ತೆಯ ಅಗಸಬಾಳ ಕ್ರಾಸ್‌ನಿಂದ ಮುದ್ದೇಬಿಹಾಳ, ನಾಲತವಾಡ ಪಟ್ಟಣಗಳ ಮೂಲಕ ನಾರಾಯಣಪುರ ಚೆಕ್‌ಪೋಸ್ಟ್‌ವರೆಗೂ, ನಂತರಬಸವಸಾಗರ ಜಲಾಶಯ ಮುಂಭಾಗ ಮಾರ್ಗವಾಗಿ ಲಿಂಗಸಗೂರು ತಾಲೂಕಿಗೆ ಪ್ರವೇಶಿಸುತ್ತದೆ. ಕಳೆದ ವರ್ಷ ಹಾಗೂ ಈ ವರ್ಷದ ಮಳೆಗೆ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಅಡಿ ಬರುವ ವಿಜಯಪುರ ರಸ್ತೆ ಸಂಪೂರ್ಣ ಹಾಳಾಗಿ ಸಂಚಾರ ದುಸ್ತರವಾಗಿದ್ದನ್ನು ಶಾಸಕರು ಗಂಭೀರವಾಗಿ ಪರಿಗಣಿಸಿದ್ದರು.

ಹೇಗಿರಲಿದೆ ರಸ್ತೆ?: ಈಗಾಗಲೇ ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರಗತಿಯಲ್ಲಿರುವ ಹುನಗುಂದ- ತಾಳಿಕೋಟೆ ರಾಜ್ಯ ಹೆದ್ದಾರಿಮಾದರಿಯಲ್ಲೇ ಅಂಬೇಡ್ಕರ್‌ ಸರ್ಕಲ್‌ನಿಂದ ಬಿದರಕುಂದಿ ಬಳಿಯ ಕಿರು ಸೇತುವೆವರೆಗೂ 14 ಮೀ. ಅಗಲ ಡಾಂಬರೀಕೃತ ಡಬಲ್‌ ರಸ್ತೆ ನಿರ್ಮಾಣಗೊಳ್ಳಲಿದೆ. ಎರಡೂ ಬದಿಚರಂಡಿ, ರಸ್ತೆ ಮಧ್ಯೆ ಒಂದೂವರೆ ಮೀಟರ್‌ನ ರಸ್ತೆ ವಿಭಜಕ ಇರಲಿದ್ದು ಪಿಲೇಕೆಮ್ಮ ನಗರದ ಹೆಸ್ಕಾಂ ಕಚೇರಿಬಳಿ ನಿಂತು ಬಸವೇಶ್ವರ, ಅಂಬೇಡ್ಕರ್‌ ವೃತ್ತದ ಮೂಲಕ ನೋಡಿದರೆ ಒಂದೇ ಮಾದರಿ ರಸ್ತೆಯಂತೆ ಕಾಣುವ ಹಾಗೆ ಯೋಜನೆ ರೂಪಿಸಲಾಗಿದೆ.

ಮೇಲ್ಭಾಗದಿಂದ ಹರಿದು ಬರುವ ನೀರು ಬಿದರಕುಂದಿ ಹಳ್ಳ ಸೇರಿಸಲು ವ್ಯವಸ್ಥೆ ಕಲ್ಪಿಸಿದ್ದು ಚರಂಡಿ ನೀರಿನ ಸಮಸ್ಯೆಗೆ ಮುಕ್ತಿ ಹೇಳುವಂತಿದೆ. ಇನ್ನು ಕಿರು ಸೇತುವೆಯಿಂದ ಅಗಸಬಾಳ ಕ್ರಾಸ್‌ವರೆಗೆ ಸದ್ಯ ಇರುವ 5.5 ಮೀ. ಅಗಲದ ಡಾಂಬರೀಕೃತ ವಿಜಯಪುರ ಮುಖ್ಯರಸ್ತೆಯ 13.5 ಕಿ.ಮೀ. ಅಂತರದ ರಸ್ತೆಯನ್ನು 7 ಮೀ. ಡಾಂಬರೀಕೃತ ರಸ್ತೆಯನ್ನಾಗಿ ಅಗಲೀಕರಣಗೊಳಿಸುವುದು ಯೋಜನೆಯಲ್ಲಿ ಸೇರಿದೆ.

2019-20ನೇ ಸಾಲಿನ ಅತಿವೃಷ್ಟಿಯಿಂದ ಸಂಪೂರ್ಣ ಹಾಳಾಗಿದ್ದ ಈ ರಸ್ತೆ ಅಭಿವೃದ್ಧಿಗೆ ಉಪ ಮುಖ್ಯಮಂತ್ರಿಗಳು, ಪಿಡಬ್ಲೂಡಿ ಸಚಿವರು ಸಹಕರಿಸಿದ್ದಾರೆ. ಜನರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಶೀಘ್ರ ಟೆಂಡರ್‌ ಪ್ರಕ್ರಿಯೆ ಪ್ರಾರಂಭಗೊಂಡು ಕನಸು ನನಸಾಗಲಿದೆ.– ಎ.ಎಸ್‌. ಪಾಟೀಲ ನಡಹಳ್ಳಿ, ಶಾಸಕ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.