ಮುಖ್ಯ ರಸ್ತೆ ಮೇಲ್ದರ್ಜೆಗೆ 21 ಕೋಟಿ ರೂ. ಅನುದಾನ

ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಪ್ರಯತ್ನಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Team Udayavani, Sep 29, 2020, 4:26 PM IST

vp-tdy-1

ಮುದ್ದೇಬಿಹಾಳ: ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾಗಿದ್ದ ಮುದ್ದೇಬಿಹಾಳ ಪಟ್ಟಣದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ವಿಜಯಪುರ ರಸ್ತೆಯ ಬಿದರಕುಂದಿ ಕಿರು ಸೇತುವೆವರೆಗಿನ ಒಂದೂವರೆ ಕಿ.ಮೀ. ಹೆದ್ದಾರಿ ಮಾದರಿಯ 14 ಮೀ. ಅಗಲದ ಡಾಂಬರೀಕರಣ ಹಾಗೂ ಅಲ್ಲಿಂದ ಅಗಸಬಾಳ ಕ್ರಾಸ್‌ ವರೆಗಿನ 13.5 ಕಿ.ಮೀ.ವರೆಗಿನ 7 ಮೀ. ಅಗಲದ ಡಾಂಬರೀಕರಣ ರಸ್ತೆ ದುರಸ್ತಿ ಕಾಮಗಾರಿಗೆ ಸರ್ಕಾರ ಸೋಮವಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಸಾರ್ವಜನಿಕ ವಲಯದಲ್ಲಿ ಹರ್ಷಕ್ಕೆ ಕಾರಣವಾಗಿದೆ.

ಈ ರಸ್ತೆ ದುರಸ್ತಿಗಾಗಿ ಸ್ಥಳೀಯ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಅವರು ಕಳೆದ ಮೂರು ತಿಂಗಳಿಂದ ಸರ್ಕಾರದ ಮಟ್ಟದಲ್ಲಿ ನಡೆಸುತ್ತಿದ್ದ ಪ್ರಯತ್ನಕ್ಕೆ ಯಶ ದೊರಕಿದಂತಾಗಿದ್ದು ಶಾಸಕರ ಜನಪರ ಕಾಳಜಿಯನ್ನು ಸಾರ್ವಜನಿಕರು ಕೊಂಡಾಡಿದ್ದಾರೆ. ಈಗಾಗಲೇ ಕರ್ನಾಟಕದ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಶಿರಾಡೋಣದಿಂದ ರಾಯಚೂರು ಜಿಲ್ಲೆ ಲಿಂಗಸಗೂರವರೆಗೆ ರಾಜ್ಯ ಹೆದ್ದಾರಿ 41ರ ಕಾಮಗಾರಿ ಹಂತ ಹಂತವಾಗಿ ಪ್ರಗತಿಯಲ್ಲಿದೆ. ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಈ ರಸ್ತೆಯು ವಿಜಯಪುರ ಮುಖ್ಯ ರಸ್ತೆಯ ಅಗಸಬಾಳ ಕ್ರಾಸ್‌ನಿಂದ ಮುದ್ದೇಬಿಹಾಳ, ನಾಲತವಾಡ ಪಟ್ಟಣಗಳ ಮೂಲಕ ನಾರಾಯಣಪುರ ಚೆಕ್‌ಪೋಸ್ಟ್‌ವರೆಗೂ, ನಂತರಬಸವಸಾಗರ ಜಲಾಶಯ ಮುಂಭಾಗ ಮಾರ್ಗವಾಗಿ ಲಿಂಗಸಗೂರು ತಾಲೂಕಿಗೆ ಪ್ರವೇಶಿಸುತ್ತದೆ. ಕಳೆದ ವರ್ಷ ಹಾಗೂ ಈ ವರ್ಷದ ಮಳೆಗೆ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಅಡಿ ಬರುವ ವಿಜಯಪುರ ರಸ್ತೆ ಸಂಪೂರ್ಣ ಹಾಳಾಗಿ ಸಂಚಾರ ದುಸ್ತರವಾಗಿದ್ದನ್ನು ಶಾಸಕರು ಗಂಭೀರವಾಗಿ ಪರಿಗಣಿಸಿದ್ದರು.

ಹೇಗಿರಲಿದೆ ರಸ್ತೆ?: ಈಗಾಗಲೇ ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರಗತಿಯಲ್ಲಿರುವ ಹುನಗುಂದ- ತಾಳಿಕೋಟೆ ರಾಜ್ಯ ಹೆದ್ದಾರಿಮಾದರಿಯಲ್ಲೇ ಅಂಬೇಡ್ಕರ್‌ ಸರ್ಕಲ್‌ನಿಂದ ಬಿದರಕುಂದಿ ಬಳಿಯ ಕಿರು ಸೇತುವೆವರೆಗೂ 14 ಮೀ. ಅಗಲ ಡಾಂಬರೀಕೃತ ಡಬಲ್‌ ರಸ್ತೆ ನಿರ್ಮಾಣಗೊಳ್ಳಲಿದೆ. ಎರಡೂ ಬದಿಚರಂಡಿ, ರಸ್ತೆ ಮಧ್ಯೆ ಒಂದೂವರೆ ಮೀಟರ್‌ನ ರಸ್ತೆ ವಿಭಜಕ ಇರಲಿದ್ದು ಪಿಲೇಕೆಮ್ಮ ನಗರದ ಹೆಸ್ಕಾಂ ಕಚೇರಿಬಳಿ ನಿಂತು ಬಸವೇಶ್ವರ, ಅಂಬೇಡ್ಕರ್‌ ವೃತ್ತದ ಮೂಲಕ ನೋಡಿದರೆ ಒಂದೇ ಮಾದರಿ ರಸ್ತೆಯಂತೆ ಕಾಣುವ ಹಾಗೆ ಯೋಜನೆ ರೂಪಿಸಲಾಗಿದೆ.

ಮೇಲ್ಭಾಗದಿಂದ ಹರಿದು ಬರುವ ನೀರು ಬಿದರಕುಂದಿ ಹಳ್ಳ ಸೇರಿಸಲು ವ್ಯವಸ್ಥೆ ಕಲ್ಪಿಸಿದ್ದು ಚರಂಡಿ ನೀರಿನ ಸಮಸ್ಯೆಗೆ ಮುಕ್ತಿ ಹೇಳುವಂತಿದೆ. ಇನ್ನು ಕಿರು ಸೇತುವೆಯಿಂದ ಅಗಸಬಾಳ ಕ್ರಾಸ್‌ವರೆಗೆ ಸದ್ಯ ಇರುವ 5.5 ಮೀ. ಅಗಲದ ಡಾಂಬರೀಕೃತ ವಿಜಯಪುರ ಮುಖ್ಯರಸ್ತೆಯ 13.5 ಕಿ.ಮೀ. ಅಂತರದ ರಸ್ತೆಯನ್ನು 7 ಮೀ. ಡಾಂಬರೀಕೃತ ರಸ್ತೆಯನ್ನಾಗಿ ಅಗಲೀಕರಣಗೊಳಿಸುವುದು ಯೋಜನೆಯಲ್ಲಿ ಸೇರಿದೆ.

2019-20ನೇ ಸಾಲಿನ ಅತಿವೃಷ್ಟಿಯಿಂದ ಸಂಪೂರ್ಣ ಹಾಳಾಗಿದ್ದ ಈ ರಸ್ತೆ ಅಭಿವೃದ್ಧಿಗೆ ಉಪ ಮುಖ್ಯಮಂತ್ರಿಗಳು, ಪಿಡಬ್ಲೂಡಿ ಸಚಿವರು ಸಹಕರಿಸಿದ್ದಾರೆ. ಜನರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಶೀಘ್ರ ಟೆಂಡರ್‌ ಪ್ರಕ್ರಿಯೆ ಪ್ರಾರಂಭಗೊಂಡು ಕನಸು ನನಸಾಗಲಿದೆ.– ಎ.ಎಸ್‌. ಪಾಟೀಲ ನಡಹಳ್ಳಿ, ಶಾಸಕ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.