ರಾಜ್ಯದ ಮನವಿಗೆ 2.5 ಟಿಎಂಸಿ ನೀರು ಹರಿಸಿದ ಮಹಾರಾಷ್ಟ್ರ
Team Udayavani, Apr 12, 2017, 2:23 PM IST
ವಿಜಯಪುರ: ಕರ್ನಾಟಕದ ಮನವಿ ಮೇರೆಗೆ ಮಹಾರಾಷ್ಟ್ರ ಸರ್ಕಾರ ಕೊಯ್ನಾಗೆ 2.5 ಟಿಎಂಸಿ ನೀರು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ತಲೆದೋರಿರುವ ಕುಡಿಯುವ ನೀರಿನ ಭೀಕರ ಪರಿಸ್ಥಿತಿ ನಿವಾರಣೆಗಾಗಿ ಸಿಎಂ ಸಿದ್ದರಾಮಯ್ಯ ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡಿದ್ದರು.
ತಮ್ಮ ನೇತೃತ್ವದ ನಿಯೋಗ ಶೀಘ್ರವೇ ಮಹಾರಾ ಷ್ಟ್ರಕ್ಕೆ ತೆರಳಿ ಅಲ್ಲಿನ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ ಮನವಿ ಮಾಡುವುದಾಗಿ ಜಲಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಕೊಯ್ನಾದಿಂದ ಕೃಷ್ಣಾ ನದಿಗೆ 2.5 ಟಿಎಂಸಿ ನೀರು ಹರಿಸಿಕೊಂಡಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ, ಚಿಕ್ಕೋಡಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಚಿಕ್ಕಪಡಸಲಗಿ ಮುಂತಾದ ಕೃಷ್ಣಾ ನದಿ ಆಧಾರಿತ ನೀರಿನ ಪ್ರದೇಶಗ ಳಲ್ಲಿ ಸಮಸ್ಯೆ ನೀಗಲಿದೆ. ಮಹಾರಾಷ್ಟ್ರದಿಂದ ಈ ಹಿಂದೆ ಹಣ ಕೊಟ್ಟು ನೀರು ಪಡೆಯಲಾಗುತ್ತಿತ್ತು ಎಂದಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ