ವಿಜಯಪುರ: ಅಪರಿಚಿತ ವಾಹನ ಢಿಕ್ಕಿಯಾಗಿ ಸ್ಥಳದಲ್ಲೇ 29 ಕುರಿಗಳ ಸಾವು!
Team Udayavani, Sep 21, 2020, 12:08 PM IST
ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಜಿನ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ತಿಹಾಳ ಕ್ರಾಸ್ ಬಳಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಕಾರಣಕ್ಕೆ 29 ಕುರಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.
ಭಾನುವಾರ ತಡರಾತ್ರಿ ಫತ್ತೇಪೂರ ಗ್ರಾಮದ ಹಳ್ಯಪ್ಪ ಎಂಬ ಕುರಿಗಾಯಿ ಇಬ್ಬರು ಮಕ್ಕಳೊಂದಿಗೆ ಕುರಿಗಳನ್ನು ಹೊಡೆದುಕೊಂಡು ಯರಗಲ್ಲ ಗ್ರಾಮದಿಂದ ಫತ್ತೇಪೂರ ಗ್ರಾಮಕ್ಕೆ ತೆರಳುತ್ತಿದ್ದರು. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಬಸ್ತಿಹಾಳ ಕ್ರಾಸ್ ಹತ್ತಿರ ವೇಗವಾಗಿ ಬರುತ್ತಿದ್ದ ಕೋಳಿಸಾಗಿಸುತ್ತಿದ್ದ ಅಪರಿಚಿತ ವಾಹನವೊಂದು ಕುರಿಗಳಿಗೆ ಢಿಕ್ಕಿ ಹೊಡೆದಿದೆ.
ವೇಗವಾಗಿ ಬರುತ್ತಿದ್ದ ಆ ವಾಹನ ತಮ್ಮ ಜೀವಕ್ಕೂ ಅಪಾಯ ತಂದೊಡ್ಡುವ ಸೂಚನೆ ಅರಿತ ಕುರಿಗಾರರು ತಮ್ಮ ಕುರಿಗಳನ್ನು ರಸ್ತೆ ಬದಿಗೆ ಸರಿಸಲು ಮುಂದಾಗುವ ಹಂತಲ್ಲೇ ವಾಹನ ಕುರಿಗಳ ಮೇಲೆ ಹಾಯ್ದಿತ್ತು. ಘಟನೆ ಬಳಿಕ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಹಳ್ಳದಲ್ಲಿ ಸಿಲುಕಿದ ಕೂಲಿಕಾರ್ಮಿಕರಿದ್ದ ಟ್ರಾಕ್ಟರ್: ಸ್ಥಳೀಯರ ಸಾಹಸದಿಂದ ರಕ್ಷಣೆ
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಕಲಕೇರಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ