ಲಾರಿಯಲ್ಲಿ 5 ಲಕ್ಷ ಮೌಲ್ಯದ ಅಫೀಮು ಸಾಗಾಟ: ಚಾಲಕನನ್ನು ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು
Team Udayavani, Oct 9, 2020, 8:07 PM IST
ವಿಜಯಪುರ: ಜಿಲ್ಲೆಯ ಅಬಕಾರಿ ಅಧಿಕಾರಿಗಳು ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಅಫೀಮು ಸಾಗಿಸುತ್ತಿದ್ದ ಲಾರಿಯನ್ನು ತಡೆದು ವಶಕ್ಕೆ ಪಡೆದು, ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದ್ವಿಚಕ್ರ ವಾಹನಗಳ ಬಿಡಿಭಾಗಗಳನ್ನು ಹೊತ್ತು ರಾಜಸ್ಥಾನದಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿಯನ್ನು ಚಡಚಣ ತಾಲೂಕಿನ ಶಿರಾಡೂಣ ಬಳಿ ತಡೆದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪರಿಶೀಲಿಸಿದಾಗ ಲಾರಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ 12.05 ಕೆ.ಜಿ ತೂಕದ ಅಫೀಮು ಹಾಗೂ 30 ಲಕ್ಷ ರೂ. ಮೌಲ್ಯದ ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ಚಾಲಕನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವಿಜಯಪುರ ಅಬಕಾರಿ ಆಯುಕ್ತ ಅರುಣ ಕಮ್ಮಾರ ಅವರ ನೇತೃತ್ವದಲ್ಲಿ ಚಡಚಣ ಶಾಖೆಯ ಅಬಕಾರಿ ಪಿ.ಎಸ್.ಐ ಸದಾಶಿವ ಕೊರ್ತಿ, ಅಬಕಾರಿ ಅಧಿಕಾರಿ ಪಡಲಸಗಿ, ಗಾರ್ಡಗಳಾದ ಅಶೋಕ ಬಿರಾದಾರ, ಎ.ಎಸ್.ಗೊಣಸಗಿ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು ಎಂದು ಅಬಕಾರಿ ಜಂಟಿ ಆಯುಕ್ತರಾದ ಡಾ.ವೈ.ಮಂಜುನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ