ಸಾಧನೆಗೆ ಬಡತನವೇ ಪ್ರೇರಣೆ :ಗೋವಾಕ್ಕೆ ಗುಳೆ ಹೋಗಿರುವ ಕಾರ್ಮಿಕನ‌ ಮಗ ಟಾಪರ್

ವಿಜಯಪುರದ ಯಲ್ಲಾಲಿಂಗ ಸುಳಿಭಾವಿಗೆ 625ಕ್ಕೆ 625 ಅಂಕ

Team Udayavani, May 19, 2022, 5:52 PM IST

1-sf-s-d-fsf

ವಿಜಯಪುರ: ಅಸಹನೀಯ ಬಡತನ, ಹಸಿವು ನನ್ನನ್ನು ಅಕ್ಷರದ ಸಾಧನೆಗೆ ಪ್ರೇರಣೆ ನೀಡಿದವು. ದುಡಿಯಲು ತಂದೆ ಗೋವಾಕ್ಕೆ ಗುಳೆ ಹೋಗಿದ್ದು, ಶಿಕ್ಷಣದಲ್ಲಿ ಏನಾದರೂ ಸಾಧಿಸಬೇಕೆಂಬ ಹಂಬಲಕ್ಕೆ ಶಿಕ್ಷಕರು ನೀರೆರೆದು ಪೋಷಿಸಿದ್ದರಿಂದ ರಾಜ್ಯಕ್ಕೆ ಟಾಪರ್ ಸಾಧನೆ ಮಾಡಲು ಸಾಧ್ಯವಾಯ್ತು‌.ಇದು ಎಸ್ ಎಸ್ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದ ವಿಜಯಪುರ ಜಿಲ್ಲೆಯ ಯಲ್ಲಾಲಿಂಗ ಸುಳಿಭಾವಿ ಪ್ರತಿಕ್ರಿಯೆ.

ಮುದ್ದೇಬಿಹಾಳ ತಾಲೂಕಿನ ಲೊಟಗೇರಿ ಗ್ರಾಮದ ಯಲ್ಲಾಲಿಂಗನ ಕುಟುಂಬಕ್ಕೆ ಎರಡು ಎಕರೆ ಜಮೀನಿ ಹೊರತಾಗಿ ಮತ್ತೇನೂ ಇಲ್ಲ. ಹೀಗಾಗಿ ಬದುಕಿನ ಬಂಡಿ ಎಳೆಯಲು ಯಲ್ಲಾಲಿಂಗನ ತಂದೆ ಬಸಪ್ಪ ಪತ್ನಿ ಲಕ್ಷ್ಮೀ ಜತೆ ಮಕ್ಕಳನ್ನು ಕರೆದುಕೊಂಡು ಅದೇ ತಾಲೂಕಿನ ನಾಲತವಾಡಕ್ಕೆ ಬಂದರು. ಬಾಡಿಗೆ ಮನೆಯಲ್ಲಿ ಇರುವಷ್ಟು ಆರ್ಥಿಕ ಶಕ್ತಿ ಇಲ್ಲದ ಕಾರಣ ಅನ್ಯರ ನಿವೇಶನದಲ್ಲಿ ಗುಡಿಸಲು ಹಾಕಿಕೊಂಡು ಕೂಲಿ ಜೀವನ ನಡೆಸುತ್ತಿದ್ದಾರೆ.

ಜೀವನ ನಿರ್ವಹಣೆ ಕಷ್ಟವಾದ ಕಾರಣ ಬಸಪ್ಪ ಹೆಂಡತಿ, ಮಕ್ಕಳನ್ನು ನಾಲತವಾಡ ಪಟ್ಟಣದಲ್ಲೇ ಬಿಟ್ಡು, ದುಡಿಮೆ ಅರಸಿ ಗೋವಾ ರಾಜ್ಯಕ್ಕೆ ಗುಳೆ ಹೋಗಿದ್ದಾರೆ. ಇಂಥ ಕಷ್ಟದ ಮಧ್ಯೆಯೂ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಉದ್ದೇಶದಿಂದ ಮೊದಲ ಮಗ ವಿಜಯಕುಮಾರಗೆ ಪದವಿ ಶಿಕ್ಷಣ ಕೊಡಿಸಿದ್ದಾರೆ.

ಇದನ್ನೂ ಓದಿ : ಎಸ್‌ಎಸ್ಎಲ್‌ಸಿ ಫಲಿತಾಂಶ : ಗ್ರೇಡಿಂಗ್ ವ್ಯವಸ್ಥೆಯಲ್ಲಿ ಜಿಲ್ಲಾವಾರು ಸ್ಥಾನವಿಲ್ಲ

ಇದೀಗ ರಾಜ್ಯಕ್ಕೆ ಟಾಪರ್ ಆಗಿರುವ ಯಲ್ಲಾಲಿಂಗ ನನ್ನು ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದ ಆಕ್ಸ್‌ಫರ್ಡ್ ಇಂಗ್ಲೀಷ್ ಮಾಧ್ಯಮ ಪ್ರೌಢ ಶಾಲೆಗೆ ಸೇರಿಸಿದ್ದರು. ಯಲ್ಲಾಲಿಂಗನ ಪ್ರತಿಭೆ ಹಾಗೂ ಬಡತನದ ಕೌಟುಂಬಿಕ ಹಿನ್ನೆಲೆಯ ಕಾರಣದಿಂದ ಸಂಸ್ಥೆಯ ಮುಖ್ಯಸ್ಥ ಮಲ್ಲಿಕಾರ್ಜುನ ಪಾಟೀಲ್ ಕೂಡ ಕೊಟ್ಟಷ್ಟೇ ಶುಲ್ಕ ಪಡೆದು ಪ್ರವೇಶ ನೀಡಿದರು.

ಯಲ್ಲಾಲಿಂಗನಲ್ಲಿ ಇದ್ದ ಪ್ರತಿಭಾವಂತಿಕೆ ಗುರುತಿಸಿದ ಮುಖ್ಯೋಪಾಧ್ಯಾಯ ಇಸ್ಮಾಯಿಲ್ ನೇತೃತ್ವದ ಶಿಕ್ಷಕರು ಉತ್ತಮ ಮಾರ್ಗದರ್ಶನ ಮಾಡಿದರು. ಪರಿಣಾಮ ಯಲ್ಲಾಲಿಂಗ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯದ ಟಾಪರ್ ಗಳಲ್ಲಿ ಒಬ್ಬನಾಗುವ ಮೂಲಕ ಶಾಲೆಗೆ ಹಾಗೂ ಜಿಲ್ಲೆಗೂ ಕೀರ್ತಿ ತಂದಿದ್ದಾನೆ.

ನಾಗರಬೆಟ್ಟದ ಆಕ್ಸ್‌ಫರ್ಡ್ ಶಾಲೆಯಲ್ಲಿ ಶಿಕ್ಷಕರು ನೀಡುವ ಗುಣಮಟ್ಟದ ಶಿಕ್ಷಣ, ಪ್ರತಿ ಮಗುವಿನ ಬಗ್ಗೆ ತೋರುವ ಶೈಕ್ಷಣಿಕ ವಿಶೇಷ ಕಾಳಜಿ ನನ್ನ ಟಾಪರ್ ಸಾಧನೆ ಸಾಧ್ಯವಾಗಿಸಿದೆ ಎಂದು ಯಲ್ಲಾಲಿಂಗ ಸ್ಮರಿಸುತ್ತಾನೆ.

ಕುಟುಂಬದ ಬಡತನ ನೀಗಲು ಶಿಕ್ಷಣದಲ್ಲಿ ಸಾಧನೆ ಮಾಡಬೇಕೆಂದು ನಿತ್ತವೂ ರಾತ್ರಿ 3 ಗಂಟೆ ವರೆಗೆ ಓದುತ್ತಿದ್ದೆ. ಶಿಕ್ಷಕರು ತಡರಾತ್ರಿ ಸಂದರ್ಭದಲ್ಲೂ ನನ್ನ ಸಮಸ್ಯೆಗೆ ಪರಿಹಾರ ಸೂಚಿಸುತ್ತಿದ್ದರು. ಶಾಲೆಯ ಆಡಳಿತ ಮಂಡಳಿಯವರು ಶುಲ್ಕಕ್ಕೆ ಪೀಡಿಸದೇ ಸಹಕರಿಸಿದರು‌. ಹೀಗಾಗಿ ಸತತ ಪರಿಶ್ರಮದಿಂದ ಓದಿದಕ್ಕೆ ಟಾಪರ್ ಆಗಲು ಸಾಧ್ಯವಾಯ್ತು ಎಂದು ಯಲ್ಲಾಲಿಂಗ ತನಗೆ ಸಹಾಯ ನೀಡಿದವರನ್ನು ನೆನೆಯುತ್ತಾನೆ.
ಎಂಜಿನಿಯರ್ ಆಗುವ ಕನಸು ಕಂಡಿರುವ ಯಲ್ಲಾಲಿಂಗ ಅದೇ ಸಂಸ್ಥೆಯ ವಿಜ್ಞಾನ ಕಾಲೇಜಿನಲ್ಲಿ ಪ್ರವೇಶಕ್ಕೆ ಮುಂದಾಗಿದ್ದಾನೆ.

ಊರ ಜಾತ್ರೆಗಾಗಿ ಗೋವಾದಿಂದ ತವರಿಗೆ ಮರಳಿರುವ ಬಸಪ್ಪ ಸುಳಿಭಾವಿ, ಮಗ ಯಲ್ಲಾಲಿಂಗನ ಸಾಧನೆಯ ಸಂಭ್ರಮದಲ್ಲಿ ಬಡತನದ ನೋವು ಮರೆತಿದ್ದಾರೆ. ದುಡಿಮೆಯ ಬೆವರಿನ‌ ಪರಿಶ್ರಮಕ್ಕೆ ಮಗ ತಕ್ಕ ಪ್ರತಿಫಲ ತಂದುದಕ್ಕೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.