8.4 ಲಕ್ಷ ಮೌಲ್ಯದ ಅಕ್ಕಿ ಜಪ್ತಿ
Team Udayavani, Oct 13, 2021, 5:31 PM IST
ನಿಡಗುಂದಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ತಾಲೂಕಾಡಳಿತ ಹಾಗೂ ಪೊಲೀಸರು ಜಂಟಿಯಾಗಿ ವಶಪಡಿಸಿಕೊಂಡ ಘಟನೆ ತಾಲೂಕಿನ ಯಲಗೂರ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ಲಾರಿಯಾಗಿದ್ದು, ಲಿಂಗಸೂರದ ಅಂಜನಾದ್ರಿ ಟ್ರೇಡರ್ನಿಂದ ಪಡಿತರ ಅಕ್ಕಿಯುಳ್ಳ ಚೀಲ ತೆಗೆದುಕೊಂಡು ಗುಜರಾತ್ ರಾಜ್ಯದ ಜೆತಲಪುರಕ್ಕೆ ಲಾರಿ ಹೊರಟಿತ್ತು. ಲಾರಿ ಚಾಲಕ ನಾಮಕಲ್ ಜಿಲ್ಲೆಯ ಪರಮತಿ-ವೆಲ್ಲೂರ ತಾಲೂಕಿನ ಕೊಡಚ್ಚೇರ ಗ್ರಾಮದ ಸರವಣ ಎಸ್ ಸಂಗೋಡನನನ್ನು ಬಂಧಿಸಲಾಗಿದ್ದು ಲಾರಿಯನ್ನು ನಿಡಗುಂದಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಾರಿಯಲ್ಲಿ 575 ಚೀಲಗಳಲ್ಲಿ ಇದ್ದ 28,750 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು ಮೌಲ್ಯ 8,45,250 ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಅಕ್ಕಿ ಸರಕಾರ ನಾನಾ ಯೋಜನೆಗೆ ಹಂಚಿಕೆಯಾದ ಪಡಿತರ ಅಕ್ಕಿಯಾಗಿದೆ ಎಂದು ತಿಳಿಸಿದ್ದಾರೆ.
ತಹಶೀಲ್ದಾರ್ ಸತೀಶ ಕೂಡಲಗಿ ಮಾರ್ಗದರ್ಶನದಲ್ಲಿ ಆಹಾರ ನಿರೀಕ್ಷಕ ಸಂಜಯ ಪಾಟೀಲ, ಲೋಕೇಶ ಕುಪ್ಪಸ್ತ, ಅಪ್ಪಾಸಾಹೇಬ ಘಂಟಿ, ಪೊಲೀಸ್ ಪೇದೆಗಳು ಪಾಲ್ಗೊಂಡಿದ್ದರು. ಆಹಾರ ನಿರೀಕ್ಷಕ ಸಂಜಯ ಪಾಟೀಲ ಈ ಕುರಿತು ಪಟ್ಟಣದ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ