ಮಾನಭಂಗಕ್ಕೆ ಯತ್ನ : ಆರೋಪಿಗೆ ಶಿಕ್ಷೆ
Team Udayavani, Apr 13, 2022, 5:55 PM IST
ಹೊಸಪೇಟೆ: ಮಹಿಳೆಯನ್ನು ಮಾನಭಂಗ ಮಾಡಲು ಯತ್ನಿಸಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ.(ಕಿ.ವಿ) ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕಿಶನ್ ಬಿ.ಮಾಡಲಗಿ ಅವರು 8 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 7 ಸಾವಿರ ರೂ ದಂಡ ವಿಧಿಸಿ ಮಂಗಳವಾರ ತೀರ್ಪು ಪ್ರಕಟಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಿಡಗುಂದಿ ಗ್ರಾಮದ ಮೌಲಾಸಾಬ್ ಬಣಕಾರ ಜೈಲು ಶಿಕ್ಷೆಗೆ ಗುರಿಯಾದ ಆರೋಪಿ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಿಡಗುಂದಿ ಗ್ರಾಮದ ಮೌಲಾಸಾಬ್ ಬಣಕಾರ 2015ರಲ್ಲಿ ತಾಲೂಕಿನ ಹಂಪಿಯ ಪ್ರಕಾಶ ನಗರ ನಿವಾಸಿ ಪುಷ್ಪಾ ಮನೆಯಲ್ಲಿ ಒಬ್ಬರೆ ಇರುವಾಗ ಏಕಾಏಕಿ ಅಕ್ರಮ ಪ್ರವೇಶ ಮಾಡಿ ಮಾನಭಂಗ ಮಾಡಲು ಪ್ರಯತ್ನಿಸಿ ಪರಾರಿಯಾಗಿದ್ದನು.
ಈ ಘಟನೆ ಕುರಿತು ಹಂಪಿ ಪ್ರವಾಸಿ ಪೋಲಿಸ್ ಠಾಣೆ ಆರಕ್ಷಕ ನಿರೀಕ್ಷಕ ಸಾಯಿನಾಥ ಅವರು ಆರೋಪಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಅಭಿಯೋಜನಾ ಪರವಾಗಿ ಸಾಕ್ಷಿದಾರರ ವಿಚಾರಣೆಯನ್ನು ಕೈಗೆತ್ತಿಕೊಂಡ ಹೊಸಪೇಟೆಯ ಪ್ರಧಾನ ಸಿ.ಜೆ.(ಕಿ.ವಿ) ಮತ್ತು ಜೆ.ಎಂ. ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಕಿಶನ್ ಬಿ. ಮಾಡಲಗಿ ಅವರು ವಿಚಾರಣೆ ನಡೆಸಿ ಆರೋಪಿಗೆ 8 ತಿಂಗಳು ಕಾರಾಗೃಹ ಶಿಕ್ಷೆ ಮತ್ತು 7ಸಾವಿರ ರೂ ದಂಡ ಕಟ್ಟತಕ್ಕದ್ದು, ಆರೋಪಿ ದಂಡ ಕಟ್ಟಲು ವಿಫಲವಾದರೆ 15 ದಿನಗಳ ಸಾದಾ ಶಿಕ್ಷೆಯನ್ನು ಅನುಭವಿಸತಕ್ಕದ್ದು ಎಂದು ತೀರ್ಪಿನಲ್ಲಿ ಆದೇಶ ಮಾಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಗೀತಾ ಎಸ್. ಮಿರಜಕರ ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?