ಸಕ್ಕರೆ ಕಾರ್ಖಾನೆಗಳಿಂದ 96.98 ಕೋಟಿ ಬಾಕಿ


Team Udayavani, Nov 20, 2018, 1:22 PM IST

vij-1.jpg

ವಿಜಯಪುರ: ರಾಜ್ಯದಲ್ಲಿ ಸಕ್ಕರೆ ಉತ್ಪಾದನೆಗೆ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಿ ರೈತರಿಗೆ ಹಿಂಬಾಕಿ ಪಾವತಿ ಹಾಗೂ ಪ್ರಸಕ್ತ ಸಾಲಿನ ಬೆಲೆ ನಿಗದಿಗೆ ರಾಜ್ಯದಲ್ಲಿ ಕಬ್ಬು ಬೆಳೆಗಾರರು ಭಾರಿ ಹೋರಾಟಕ್ಕಿಳಿದಿದ್ದಾರೆ. ಆದರೆ ವಿಜಯಪುರ ಜಿಲ್ಲೆಯ 9ರಲ್ಲಿ 8 ಸಕ್ಕರೆ ಕಾರ್ಖಾನೆಗಳಿಂದ 96.98 ಕೋಟಿ ರೂ. ಹಿಂಬಾಕಿ ಬರಬೇಕಿದ್ದರೂ ನಮ್ಮ ರೈತರು ಮಾತ್ರ ಸಹನೆಯಿಂದಲೇ ಕಾಯುತ್ತಿದ್ದಾರೆ.

ಮತ್ತೂಂದೆಡೆ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರ ಶೋಷಣೆಯಿಂದ ಮುಕ್ತರಾಗಲು ಪ್ರಸಕ್ತ ವರ್ಷ ನೆರೆ ರಾಜ್ಯಕ್ಕೆ ಕಬ್ಬು ಸಾಗಿಸಲು ಮುಂದಾಗಿದ್ದಾರೆ. ಕಳೆದ ವರ್ಷದ ಕಬ್ಬಿನ ಹಿಂಬಾಕಿ ಪಾವತಿಯೇ ಶತ ಕೋಟಿ ರೂ. ಹತ್ತಿರ ಇದೆ. ಈ ಹಂತದಲ್ಲೂ ಕಬ್ಬಿಗೆ ಇನ್ನೂ ಏಕ ರೂಪದ ಬೆಲೆ ನಿಗದಿ ಬೇಡಿಕೆ ಈಡೇರದ ಹಂತದಲ್ಲೇ ಕಳೆದ ಎರಡು ವಾರಗಳ ಹಿಂದೆ ಪ್ರಸಕ್ತ ವರ್ಷದ ಕಬ್ಬು ನುರಿಸುವ ಕಾರ್ಯ ಆರಂಭಗೊಂಡಿದೆ. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ ಶೋಷಣೆ ನಡೆಯುತ್ತಿರುವುದನ್ನು ವಿರೋಧಿಸಿ ಪ್ರಸಕ್ತ ವರ್ಷ ಜಿಲ್ಲೆಯ ಕಬ್ಬು ಬೆಳೆಗಾರರು ರಾಜ್ಯದ ಕಲಬುರಗಿ ಜಿಲ್ಲೆ ಮಾತ್ರವಲ್ಲ ಮಹಾರಾಷ್ಟ್ರದ ನಾಲ್ಕಾರು ಸಕ್ಕರೆಕಾರ್ಖಾನೆಗಳಿಗೆ ಕಬ್ಬು ಸಾಗಿಸತೊಡಗಿದ್ದಾರೆ.

ಭೀಕರ ಬರದ ಮಧ್ಯೆಯೂ ಕಳೆದ ವರ್ಷ 61,339 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಬೆಳೆಯುತ್ತಿದ್ದ ಕಬ್ಬಿನ ಪ್ರದೇಶ ಈ ಬಾರಿ ಮತ್ತೆ 4,370 ಹೆಕ್ಟೇರ್‌ ಪ್ರದೇಶದಲ್ಲಿ ಹೆಚ್ಚುವರಿ ಬೆಳೆ ನಾಟಿ ಆಗಿದೆ. ಇದು ವಿಜಯಪುರ ಜಿಲ್ಲೆಯಲ್ಲಿ ಏನೆಲ್ಲ ಸಂಕಷ್ಟಗಳ ಮಧ್ಯೆ ಕಬ್ಬು ಪ್ರದೇಶ ಹಾಗೂ ಸಕ್ಕರೆ ಕಾರ್ಖಾನೆಗಳ ಆರಂಭ ಮಾತ್ರ ಹೆಚ್ಚುತ್ತಲೇ ಇದೆ.

ಜಿಲ್ಲೆಯಲ್ಲಿ ಹಿಂಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು ಪಾವತಿ ಮಾಡುವಂತೆ ಹಲವು ಬಾರಿ ಮಾಡಿಕೊಂಡಿರುವ ಮನವಿಗೆ 9 ಕಾರ್ಖಾನೆಗಳಲ್ಲಿ ಒಂದು ಕಾರ್ಖಾನೆ ಮಾತ್ರ ಸ್ಪಂದಿಸಿದೆ. ಬಸವೇಶ್ವರ ಶುಗರ್ ಮಾಲೀಕರು ಕಳೆದ ಎರಡು ವಾರಗಳ ಹಿಂದೆ ಬಾಕಿ ಇದ್ದ ಎಲ್ಲ 5 ಕೋಟಿ ರೂ. ಹಿಂಬಾಕಿ ಪಾವತಿಸಿದ್ದಾರೆ. ಆದರೆ ಇತರೆ ಕಾರ್ಖಾನೆಗಳು ತಮ್ಮ ಬಳಿ ಯಾವುದೇ ಹಿಂಬಾಕಿ ಉಳಿಸಿಕೊಂಡಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಉತ್ತರ ನೀಡುವ ಮೂಲಕ ಕಬ್ಬು ಬೆಳೆಗಾರರ ಹೋರಾಟವನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ದುದ್ದಗಿ ದೂರುತ್ತಾರೆ.
 
ಜಿಲ್ಲೆಯಲ್ಲಿ ಸಹಕಾರಿ ವ್ಯವಸ್ಥೆಯಲ್ಲಿರುವ ಎರಡು ಸಕ್ಕರೆ ಕಾರ್ಖಾನೆಗಳಲ್ಲಿ ನಂದಿ ಸಹಕಾರಿ ಸಕ್ಕರೆ ಕಾಖಾನೆ 33.72 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದರೆ, ಕಳೆದ ವರ್ಷವಷ್ಟೇ ಸಕ್ಕರೆ ಉತ್ಪಾದನೆ ಆರಂಭಿಸಿರುವ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ 5.72 ಕೋಟಿ ರೂ. ಬಾಕಿ ಹಣ ಪಾವತಿಸಿಲ್ಲ.

ಇತ್ತ ಖಾಸಗಿ ಒಡೆತನದಲ್ಲಿರುವ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾಂಗ್ರೆಸ್‌ ನೂತನ ಶಾಸಕ ಆನಂದ ನ್ಯಾಮಗೌಡ ಮಾಲೀಕತ್ವದ ಜಮಖಂಡಿ ಶುಗರ್ನ 21.63 ಕೋಟಿ ರೂ., ತಮಿಳುನಾಡು ಉದ್ಯಮಿ ರಾಮಸ್ವಾಮಿ ನೇತೃತ್ವದ ಕೆಪಿಆರ್‌ ಮಾಲೀಕತ್ವದ ಶುಗರ್ನಿಂದ 12.68 ಕೋಟಿ ರೂ. ಬಾಲಾಜಿ ಸಕ್ಕರೆ ಕಾರ್ಖಾನೆ 9.95 ಕೋಟಿ ರೂ., ಬಿಜೆಪಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮಾಲೀಕತ್ವದ ಜ್ಞಾನಯೋಗಿ ಶಿವಕುಮಾರ ಶುಗರ್ 6.16 ಕೋಟಿ ರೂ., ಬಾಗಲಕೋಟೆ ಜಿಲ್ಲೆಯ ಬೀಳಗಿ ಕಾಂಗ್ರೆಸ್‌ ಮಾಜಿ ಶಾಸಕ ಜೆ.ಟಿ. ಪಾಟೀಲ ಹಾಗೂ ಸಹೋದರ ಎಸ್‌.ಟಿ. ಪಾಟೀಲ ಮಾಲೀಕತ್ವದ ಮನಾಲಿ ಕಾರ್ಖಾನೆ 5.12 ಕೋಟಿ ರೂ., ಮಹಾರಾಷ್ಟ್ರದ ಕಾಂಗ್ರೆಸ್‌ ಮಾಜಿ ಶಾಸಕ ಭಗವಂತ ಸಿಂಧೆ ಮಾಲೀಕತ್ವದ ಇಂಡಿಯನ್‌ ಶುಗರ್ನ 2 ಕೋಟಿ ರೂ., ಇನ್ನೊಂದು ಖಾಸಗಿ ಕಾರ್ಖಾನೆಯಾಗಿರುವ ಬಾಲಾಜಿ ಸಕ್ಕರೆ ಕಾರ್ಖಾನೆ 9.95 ಕೋಟಿ ರೂ. ಬಾಕಿ ಉಳಿಸಿಕೊಂಡಿವೆ.  ಆದರೆ ರಾಜ್ಯದಾದ್ಯಂತ ಕಬ್ಬಿನ ಹಿಂಬಾಕಿ ಪಡೆಯುವುದಕ್ಕೆ ಕಬ್ಬು ಬೆಳೆಗಾರರು ಉಗ್ರ ಸ್ವರೂಪದಲ್ಲಿ ಹೋರಾಟದ ಹಾದಿ ತುಳಿದಿದ್ದಾರೆ. ಆದರೆ ವಿಜಯಪುರ ಜಿಲ್ಲೆಯ ಕಬ್ಬು ಬೆಳೆಗಾರ ಮಾತ್ರ ಸೌಜನ್ಯದಿಂದಲೇ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿ ತನ್ನ ಸಭ್ಯತೆ ಮೆರೆಯುತ್ತಿದ್ದರೂ ಸರ್ಕಾರ ಮಾತ್ರ ಸ್ಪಂದಿಸಿಲ್ಲ ಎಂಬುದು ಗಮನೀಯವಾಗಿದೆ.

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.