ಪಡಿತರ ಅಕ್ಕಿ ಮಾರುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ
Team Udayavani, Feb 9, 2022, 5:50 PM IST
ವಿಜಯಪುರ: ಪಡಿತರ ಕಾರ್ಡ್ದಾರರಿಗೆ ಹಂಚಿಕೆ ಮಾಡಲು ವಿತರಿಸಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಮುಂದಾದ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು ಆರೋಪಿ ಪರಾರಿಯಾಗಿದ್ದಾನೆ.
ನಗರದ ಸ್ಪೇಷನ್ ಹಿಂದಿನ ರಸ್ತೆಯ ಇಜೇರಿ ಅಗ್ರೋ ಇಂಡಸ್ಟ್ರೀಯಲ್ ಗೋದಾಮಿಗೆ ಒಬ್ಬ ಪಡಿತರ ಚೀಟಿದಾರ ದ್ವಿಚಕ್ರ ವಾಹನದಲ್ಲಿ ಬಂದಾಗ ಆಹಾರ ನಿರೀಕ್ಷಕರು ದಾಳಿ ಮಾಡಿದ್ದಾರೆ. ಕೂಡಲೇ ಆರೋಪಿ ಪರಾರಿಯಾಗಿದ್ದಾನೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ ಸುನೀಲಕುಮಾರ, ಆರೋಪಿ ಪಡಿತರ ಚೀಟಿದಾರರ ವಿರುದ್ಧ ಗೋಲಗುಂಬಜ್ ಪೋಲಿಸ ಠಾಣೆಯಲ್ಲಿ ಅಕ್ರಮವಾಗಿ ಪಡಿತರ ಮಾರಾಟ ಮಾಡಿದ ಹಾಗೂ ಅದನ್ನು ಖರೀದಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸರ್ಕಾರ ಅನ್ನಭಾಗ್ಯ, ಅಂತ್ಯೋದಯ ಅನ್ನ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸುತ್ತಿದೆ. ಆದರೆ ಕೆಲವು ಪಡಿತರ ಚೀಟಿದಾರರು ಅಕ್ಕಿಯನ್ನು ಸ್ವಂತಕ್ಕೆ ಬಳಸದೇ ಕಾಳಸಂತೆಯಲ್ಲಿ ಹಣಕ್ಕೆ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ ಎಂದು ವಿವರಿಸಿದ್ದಾರೆ. ಪಡಿತರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಅಪರಾಧ. ಪಡಿತರ ಚೀಟಿದಾರರು ತಮಗೆ ನೀಡಿದ ಆಹಾರ ಧಾನ್ಯಗಳನ್ನು ಸ್ವಂತಕ್ಕೆ ಮಾತ್ರವೇ ಬಳಸಬೇಕು. ಒಂದೊಮ್ಮೆ ಕಾಳಸಂತೆಯಲ್ಲಿ ಪಡಿತರ ಮಾರಾಟ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವ ಜೊತೆಗೆ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ಎಚ್ಚರಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ