ಅಬಕಾರಿ ಅಕ್ರಮ ತಡೆಗೆ ಆಗ್ರಹಿಸಿ ಸಿಎಂಗೆ ರಕ್ತದಲ್ಲಿ ಪತ್ರ
Team Udayavani, Aug 13, 2022, 5:56 PM IST
ಮುದ್ದೇಬಿಹಾಳ: ಅಬಕಾರಿ ಇಲಾಖೆ ನಿಯಮಗಳನ್ನು ಮದ್ಯದ ಅಂಗಡಿಗಳು ಉಲ್ಲಂಘಿಸುತ್ತಿದ್ದರೂ ಮೌನವಾಗಿರುವ ಅಬಕಾರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾಮಾಜಿಕ ಹೋರಾಟಗಾರ ಮಂಜುನಾಥಸ್ವಾಮಿ ಕುಂದರಗಿ ಸಿಎಂಗೆ, ವಿಜಯಪುರ ಜಿಲ್ಲಾಧಿಕಾರಿಗೆ ತಮ್ಮ ರಕ್ತದಲ್ಲಿ ಬರೆದ ಪತ್ರವನ್ನು ಶುಕ್ರವಾರ ತಹಶೀಲ್ದಾರ್ ಬಿ.ಎಸ್. ಕಡಕಭಾವಿ ಅವರಿಗೆ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಬಳಿ ತಮ್ಮ ಕೈಯಿಂದ ತೆಗೆದ ರಕ್ತದಲ್ಲಿ ಗಂಟೆಗೂ ಹೆಚ್ಚು ಕಾಲ ಪತ್ರ ಬರೆದ ಅವರು, ಅಬಕಾರಿ ಇಲಾಖೆ ನಿಯಮಗಳಡಿ ಮದ್ಯದಂಗಡಿಗಳು ನಡೆಯುತ್ತಿಲ್ಲ. ದಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ಯಥೇತ್ಛವಾಗಿ ನಡೆಯುತ್ತಿದೆ. ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆ ಧರಣಿ ಹೋರಾಟದ ಸಮಯದಲ್ಲಿ ಕೊಟ್ಟಿದ್ದ ಉತ್ತರಗಳಿಗೆ ಕಾಟಾಚಾರಕ್ಕೆ ಎರಡು ದಿನ ಕೆಲವು ನಿಯಮಗಳನ್ನು ಪಾಲನೆ ಮಾಡಿದಂತೆ ಮಾಡಿ ಮತ್ತೆ ತಮ್ಮ ಮೊದಲಿನ ಚಾಳಿ ಶುರು ಮಾಡಿದ್ದಾರೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ