ಬಹುರಾಷ್ಟ್ರೀಯ ಕಂಪನಿಯಂತೆ ಆಡಳಿತ ನಡೆಸುತ್ತಿದೆ ಕೇಂದ್ರ


Team Udayavani, Aug 10, 2018, 11:20 AM IST

vij-3.jpg

ವಿಜಯಪುರ: 1991ರಿಂದ ದೇಶದ ಆಡಳಿತವನ್ನು ಬಹುರಾಷ್ಟ್ರೀಯ ಕಂಪನಿಗಳೆ ನಡೆಸುತ್ತಿವೆ. ಜಾಗತೀಕರಣ, ಖಾಸಗೀಕರಣ, ಹಾಗೂ ಉದಾರೀಕರಣ ನೀತಿಗಳ ಅನುಷ್ಠಾನದ ಧಾವಂತದಲ್ಲಿ ಕೇಂದ್ರ ಸರ್ಕಾರ ದೇಶದ ಜನತೆಯ ಆಶಯವನ್ನೇ ಮರೆತಿದೆ ಎಂದು ಕಾರ್ಮಿಕ ಮುಖಂಡ ಸಿದ್ದನಗೌಡ ಪಾಟೀಲ ಕಿಡಿ ಕಾರಿದ್ದಾರೆ.

ನಗರದಲ್ಲಿ ಸರ್ಕಾರಿ ನೌಕರರ ಒಕ್ಕೂಟದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಿಂಚಣಿ ಹಾಗೂ ಹೊರಗುತ್ತಿಗೆ ಪದ್ಧತಿ ಕುರಿತು ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಿರುದ್ಯೋಗ ನಿವಾರಣೆಗೆ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸಮಸ್ಯೆ ಪೋಷಿಸುವ ವ್ಯವಸ್ಥೆಯನ್ನು ಬೆಳೆಸುತ್ತಿದೆ ಎಂದರು.

ದೇಶದಲ್ಲಿ ಶಿಕ್ಷಣ, ಆರೋಗ್ಯ, ಕೈಗಾರಿಕೆ ಕ್ಷೇತ್ರದಲ್ಲಿ ಸರಕಾರದ ಜಾಗತೀಕರಣ ನೀತಿಯಿಂದ ಸಂಘಟಿತ ವಲಯದಲ್ಲಿ ಉದ್ಯೋಗದ ಅಭದ್ರತೆ, ಅಸಂಘಟಿತ ವಲಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆ ಉಂಟಾಗಿದೆ. ಇದರಿಂದಾಗಿ ನಿರಂತರ ಬೆಲೆ ಏರಿಕೆ ಸೃಷ್ಟಿಯಾಗಿ ದೇಶದ ನಾಗರಿಕರು ತತ್ತರಿಸಿದ್ದಾರೆ. ಸರಕಾರಿ ನೌಕರರು ತಮ್ಮ ಹಿತರಕ್ಷಣೆಗಾಗಿ ಹೋರಾಟ ಮಾಡುವುದರ ಜೊತೆಗೆ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದನೆ ನೀಡಿ ಸಮಾಜಮುಖೀ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಮಹಾದೇವಯ್ಯ ಮಠಪತಿ ಮಾತನಾಡಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿರುವ ಮಂಜೂರಾದ 7.75 ಲಕ್ಷ ಹುದ್ದೆಗಳಲ್ಲಿ ಖಾಲಿಯಿರುವ 2.50 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಹೊರ ಗುತ್ತಿಗೆ ಹೆಸರಿನಲ್ಲಿ ಕಡಿಮೆ ವೇತನಕ್ಕೆ ಹೊರ ಗುತ್ತಿಗೆ, ದಿನಗೂಲಿ ಮೂಲಕ ಸರ್ಕಾರವೇ ನೌಕರರನ್ನು ಶೋಷಿಸುತ್ತಿದೆ ಎಂದು ದೂರಿದರು.

ನೆರೆ ರಾಜ್ಯಗಳಿಗೆ ಹೋಲಿಸಿದ್ದಲ್ಲಿ ರಾಜ್ಯದಲ್ಲಿ ತೆರಿಗೆ ಸಂಗ್ರಹ ಉತ್ತಮ ಸ್ಥಿತಿಯಲ್ಲಿದೆ. ಆದರೂ ರಾಜ್ಯ ಸರ್ಕಾರ ಮಾತ್ರ ನೌಕರರ ವೇತನ ನೀಡುತ್ತಿಲ್ಲ. 6ನೇ ವೇತನ ಆಯೋಗ ನ್ಯಾಯೋಚಿತ ರೀತಿ ಶಿಫಾರಸು ಮಾಡಿಲ್ಲ ಎಂದು ಕಿಡಿ ಕಾರಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್‌.ಜೈಕುಮಾರ ಮಾತನಾಡಿ, ಎನ್‌ಪಿಎಸ್‌ ಹೊಸ ಪಿಂಚಣಿ ನೀತಿ ರದ್ದು ಪಡಿಸಿ ಹಳೆ ಪಿಂಚಣಿ ಪದ್ಧತಿ ಮುಂದುವರಿಸಬೇಕು. ಹೊರಗುತ್ತಿಗೆ ಪದ್ಧತಿ ಮುಂದುವರಿಸುವುದರಿಂದ ದೇಶದ ಆಡಳಿತಕ್ಕೂ ಸಮಸ್ಯೆ ಆಗಿರುವ ಕಾರಣ ಸರ್ಕಾರ ಹೊರ ಗುತ್ತಿಗೆ ಪದ್ಧತಿ ಕೈಬಿಡಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಎನ್‌.ಇ. ನಟರಾಜ ನೌಕರರ ಸಂಗಾತಿ ಮಾಸ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆ ಮಾಡಿದರು. ಜಿಲ್ಲಾಧ್ಯಕ್ಷ ಮಲ್ಲನಗೌಡ ಬಿರಾದಾರ, ಬಿ. ಶಿವಶಂಕರ ಮಾತನಾಡಿದರು. ಇದೇ ಸಂದರ್ಭದಲ್ಲಿ ನಿವೃತ್ತರಾದ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಎಚ್‌. ಲೆಂಡಿ, ನೌಕರರಾದ ಜಯರಾಮ, ಈರಪ್ಪ ಕಂಬಳಿ, ಗೊಪಾಲ
ಅಥರ್ಗಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಮಿಕ ಮುಖಂಡರಾದ ಭೀಮಶಿ ಕಲಾದಗಿ, ಶೋಭಾ ಲೋಕನಾಗ, ಎಸ್‌.ಅಭಿಜಿತ, ಎಚ್‌.ಆರ್‌. ಮಾಚಪ್ಪನವರ, ಡಾ| ಮಹಾಂತೇಶ ಬಿರಾದಾರ, ಅರ್ಜುನ ಲಮಾಣಿ, ಎಂ.ಎಂ. ಪಾಟೀಲ, ಚೆನ್ನಾರೆಡ್ಡಿ, ಆರ್‌.ಎಸ್‌. ಮೆಣಸಗಿ, ಸಂತೋಷ ಬಿರಾದಾರ, ಸಂತೋಷ ಯರಗಲ್‌, ಸಿದ್ರಾಮಯ್ಯ ಪೂಜಾರಿ, ಉದಯ ಕುಲಕರ್ಣಿ ಇದ್ದರು.
ರಾಜು ಮಡಿವಾಳರ ಸ್ವಾಗತಿಸಿದರು. ಜಿ.ಬಿ. ಅಂಗಡಿ ವಂದಿಸಿದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.