ಜಾತ್ರಾ ಸಮಿತಿಯಿಂದ ಗ್ರಾಮದೇವತೆಗೆ ಸರಳ ಪೂಜೆ


Team Udayavani, May 30, 2020, 7:06 AM IST

ಜಾತ್ರಾ ಸಮಿತಿಯಿಂದ ಗ್ರಾಮದೇವತೆಗೆ ಸರಳ ಪೂಜೆ

ಮುದ್ದೇಬಿಹಾಳ: ಕೋವಿಡ್ ಲಾಕ್‌ಡೌನ್‌ ಹಿನ್ನೆಲೆ ಜಾತ್ರೆ ರದ್ದಾಗಿದ್ದರೂ ಊರ ದೈವದರು, ಜಾತ್ರಾ ಸಮಿತಿ ಪ್ರಮುಖರು ಶುಕ್ರವಾರ ಶ್ರೀದೇವಿಗೆ ಉಡಿ ತುಂಬಿ ಸರಳ ಪೂಜೆ ಸಲ್ಲಿಸಿ ಜಾತ್ರೆಯ ಧಾರ್ಮಿಕ ಸಂಪ್ರದಾಯ ಪಾಲಿಸಿದರು.

ಪ್ರತಿ ಮೂರು ವರ್ಷಕ್ಕೊಮ್ಮೆ ಮೇ ತಿಂಗಳಲ್ಲಿ 5 ದಿನ ವರೆಗೆ ಅತ್ಯಂತ ಅದ್ದೂರಿಯಿಂದ ಜಾತ್ರೆ ನಡೆಯುತ್ತಿತ್ತು. ಜಾತ್ರಾ ಕಮಿಟಿಯವರು ಈ ಬಾರಿಯೂ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಕೋವಿಡ್ ಹಿನ್ನೆಲೆ ಲಾಕ್‌ಡೌನ್‌ ಘೋಷಣೆ ಆಗಿದ್ದರಿಂದ ಸರ್ಕಾರದ ನಿಯಮ ಪಾಲಿಸಲು ಜಾತ್ರೆ ರದ್ದುಗೊಳಿಸಲಾಗಿತ್ತು. ಆದರೆ, ಊರ ದೈವದ ತೀರ್ಮಾನದಂತೆ ಭಕ್ತರು ದೇವಿಯ ಹೆಸರಲ್ಲಿ 5 ವಾರ ಆಚರಿಸಿದ್ದರು. ಶುಕ್ರವಾರ ಕೊನೆಯ ವಾರ ಆಗಿದ್ದರಿಂದ ಶ್ರೀದೇವಿಗೆ ಉಡಿ ತುಂಬಿ ಜಾತ್ರಾ ಸಂಪ್ರದಾಯ ಸಮಾರೋಪಗೊಳಿಸಲಾಯಿತು.

ಬಸರಕೋಡ ನಾಡಗೌಡರ ಮನೆತನದ ಮಲ್ಲಿಕಾರ್ಜುನ ನಾಡಗೌಡ, ಅಶೋಕ ನಾಡಗೌಡ ಅವರು ತಮ್ಮ ಮನೆತನದ ಸಂಪ್ರದಾಯದಂತೆ ಶ್ರೀದೇವಿಗೆ ಮಂಗಳ ಸೂತ್ರ, ಸೀರೆ, ಕಾಲುಂಗುರ ಸಮೇತ ಉಡಿ ತುಂಬುವ ಸಾಮಗ್ರಿಗಳನ್ನು ತಂದಿದ್ದರೆ ಜಾತ್ರಾ ಕಮಿಟಿ ಪ್ರಮುಖರು ಮಂಗಲದ್ರವ್ಯಗಳನ್ನು ತಂದು ದೇವಿಯ ಉಡಿ ತುಂಬುವ ಕಾರ್ಯ ಸಾಂಗವಾಗಿ ನೆರವೇರುವಂತೆ ನೋಡಿಕೊಂಡರು.

ಜಾತ್ರಾ ಕಮಿಟಿ ಅಧ್ಯಕ್ಷ ಶೃಂಗಾರಗೌಡ ಪಾಟೀಲ್‌, ಪುರಸಭೆ ಸದಸ್ಯ ಚನ್ನಪ್ಪ ಕಂಠಿ, ಪ್ರಮುಖರಾದ ಎಂ.ಎಸ್‌.ಬಿರಾದಾರ, ಜಗದೀಶ ಲಕ್ಷಟ್ಟಿ, ಮುದಕಪ್ಪ ಅಮರಣ್ಣವರ, ವಿಶ್ವನಾಥ ಪಾಟೀಲ್‌, ಬಸಯ್ಯ ನಂದಿಕೇಶ್ವರಮಠ, ಅನಿಲ್‌ ಹಡಪದ, ಮುತ್ತು ನಾಯ್ಯೋಡಿ, ಊರ ಗೌಡರಾದ ಬಸನಗೌಡ ಪಾಟೀಲ್‌, ಸಂತೋಷ ಪಾಟೀಲ್‌, ಗ್ರಾಮದೇವತೆ ಅರ್ಚಕರಾದ ಗುಂಡಪ್ಪ ಬಡಿಗೇರ, ಈರಣ್ಣ ಬಡಿಗೇರ ಮತ್ತಿತರರು ಪಾಲ್ಗೊಂಡಿದ್ದರು. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡೇ ಶ್ರೀದೇವಿಯ ದರ್ಶನ ಪಡೆದರು.

ಜನ, ಜಾನುವಾರುಗಳನ್ನು ಸಾಂಕ್ರಾಮಿಕ ರೋಗಗಳಿಂದ ರಕ್ಷಿಸುವುದಕ್ಕಾಗಿ ಗ್ರಾಮ ದೇವತೆಯರು ಇದ್ದಾರೆ. ಎನ್ನುವ ನಂಬಿಕೆ ಅನಾದಿಕಾಲದ್ದು. ಈ ಬಾರಿ ಕೊರೊನಾ ಮಹಾಮಾರಿಯಿಂದಾಗಿ ಜಾತ್ರೆ ಮಾಡಲು ಆಗಿಲ್ಲ. ಸರಳವಾಗಿ ಪೂಜೆ ಸಲ್ಲಿಸಿದ ಸಂಪ್ರದಾಯ ಪಾಲಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಬಂದಲ್ಲಿ ಮುಂದಿನ ವರ್ಷ ಎಲ್ಲರೂ ಸೇರಿ ಜಾತ್ರೆಯನ್ನು ಅದ್ಧೂರಿಯಿಂದ ನಡೆಸಲು ತೀರ್ಮಾನಿಸಿದ್ದೇವೆ.  –ಎಸ್‌.ಜಿ.ಪಾಟೀಲ, ಅಧ್ಯಕ್ಷರು, ಗ್ರಾಮದೇವತೆ ಜಾತ್ರಾ ಸಮಿತಿ, ಮುದ್ದೇಬಿಹಾಳ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.