ಮೈ ನವಿರೇಳಿಸಿದ ರಾಜ್ಯಮಟ್ಟದ ಟಗರಿನ ಕಾಳಗ
Team Udayavani, Aug 19, 2022, 6:10 PM IST
ಬಸವನಬಾಗೇವಾಡಿ: ಬಸವೇಶ್ವರ (ಮೂಲ ನಂದೀಶ್ವರ) ಜಾತ್ರಾ ಮಹೋತ್ಸವ 4ನೇ ದಿನವಾರದ ಗುರುವಾರ ಪಟ್ಟಣದ ಬಸವೇಶ್ವರ ದೇವಾಲಯದ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಟಗರಿನ ಕಾಳಗ ನೋಡುಗರ ಮೈ ನವಿರೇಳುವಂತೆ ಮಾಡಿತು. ‘
ಕಾಳಗ ವೀಕ್ಷಿಸಲು ವಿಜಯಪುರ, ಬಾಗಲಕೋಟೆ ಸೇರಿ ರಾಜ್ಯದ ವಿವಿಧ ಜಿಲ್ಲೆಯಿಂದ ಸಾವಿರಾರು ಜನರು ಆಗಮಿಸಿ ಕೇಕೆ, ಶಿಳ್ಳೆ, ಚಪ್ಪಾಳೆ ಹೊಡೆಯುವ ಮೂಲಕ ಟಗರಿನ ಕಾಳಗ ಹುರಿದುಂಬಿಸಿದರು. ಅಪಾರ ಸಂಖ್ಯೆಯ ಭಕ್ತರು ಬೆಳಗ್ಗೆಯಿಂದಲೇ ದೇವರ ದರ್ಶನ ಪಡೆದರು. 4 ಹಲ್ಲಿನ ಟಗರಿನ ಕಾಳಗದಲ್ಲಿ ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿಯ ಕನಕ ಶ್ರೀ ಗೆಳೆಯರ ಬಳಗ ಪ್ರಥಮ, ಮನಗೂಳಿಯ ಎಂ.ಜಿ. ಗ್ರೂಪ್ ದ್ವಿತೀಯ, ಬನ್ಮದಬುನ್ನಿಯ ಕರೆಮ್ಮದೇವಿ ಪ್ರಸನ್ನ ಟಗರು ತೃತೀಯ ಬಹುಮಾನ ಪಡೆದವು. 8 ಹಲ್ಲಿನ ಟಗರಿನ ಕಾಳಗದಲ್ಲಿ ಬಸವನಬಾಗೇವಾಡಿ ಲವ್ಲಿಬಾಯ್ ಬಿ ಪ್ರಥಮ, ಕೇಸಾಪೂರಗಿಡ್ಡಿ. ಬಿ (ದ್ವಿತೀಯ), ಬಸವನಬಾಗೇವಾಡಿ ಲವ್ಲಿಬಾಯ್ ಎ. ತೃತೀಯ ಬಹುಮಾನ ಪಡೆದವು.
ಟಗರಿನ ಕಾಳಗಕ್ಕೆ ಪಟ್ಟಣದ ವಿರಕ್ತಮಠದ ಸಿದ್ದಲಿಂಗ ಶ್ರೀಗಳು, ಶಿವಾನಂದ ಈರಕಾರ ಮುತ್ಯಾ ಚಾಲನೆ ನೀಡಿದರು. ಈ ವೇಳೆ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಬಸವರಾಜ ಹಾರಿವಾಳ, ಬಸವರಾಜ ಗೊಳಸಂಗಿ, ಸಂಗಮೇಶ ಓಲೇಕಾರ, ವಿಕಾಸ ಜೋಗಿ, ಎಂ.ಜಿ. ಆದಿಗೊಂಡ, ಶಂಕರಗೌಡ ಬಿರಾದಾರ, ರವಿ ಚಿಕ್ಕೊಂಡ, ಬಸವರಾಜ ಕೋಟಿ, ಸುಭಾಷ ಚಿಕ್ಕೊಂಡ , ಪರಶುರಾಮ ಜಮಖಂಡಿ, ಬಸವರಾಜ ಅಳ್ಳಗಿ ಇತರರಿದ್ದರು. ರಸಮಂಜರಿ ಇಂದು: ಆ.19ರಂದು ಸಂಜೆ 7ಕ್ಕೆ ಕಂಬದ ರಂಗಯ್ಯ ಅವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!