ಆಸ್ತಿಗಾಗಿ ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಮಲತಾಯಿ!


Team Udayavani, Dec 11, 2021, 2:58 PM IST

ಆಸ್ತಿಗಾಗಿ ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಮಲತಾಯಿ!

ವಿಜಯಪುರ: ತನ್ನ ಸಂಸಾರಕ್ಕೆ ತೊಡಕಾಗುತ್ತಾರೆ ಎಂಬ ಕಾರಣಕ್ಕೆ ಪತಿಯ ಮೊದಲ ಹೆಂಡತಿಯ ಮಗನನ್ನು ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯ ಮಿಂಚನಾಳ ತಾಂಡಾದ 22 ಸವಿತಾ ವಿನೋದ ಚವ್ಹಾಣ ಬಂಧಿತ ಆರೋಪಿ. ಸವಿತಾಳ ಪತಿ ವಿನೋದ್ ಗೆ ಶಾರುಬಾಯಿ ಎಂಬ ಮೊದಲ ಪತ್ನಿಗೆ ಸಮಿತ್ (5 ವ) ಹಾಗೂ ಸಂಪತ್ (3 ವ) ಎಂಬ ಇಬ್ಬರು ಮಕ್ಕಳಿದ್ದರು. ಮೊದಲ ಪತ್ನಿ ತೀರಿದ ಬಳಿಕ ಎರಡೂ ಮಕ್ಕಳು ಮಲತಾಯಿ ಸವಿತಾಳ ಆಶ್ರಯದಲ್ಲೇ ಇದ್ದರು.

ಆದರೆ ಎರಡೂ ಮಕ್ಕಳು ತನ್ನ ಸಂಸಾರಕ್ಕೆ ಅದರಲ್ಲೂ ಆಸ್ತಿಯಲ್ಲಿ ಭಾಗ ಪಡೆಯಲು ವಾರಸುದಾರರಾಗುತ್ತಾರೆ ಎಂಬ ದುರಾಲೋಚನೆಯಿಂದ ಮಕ್ಕಳನ್ನು ಹತ್ಯೆ ಮಾಡಲು ಮುಂದಾಗಿದ್ದಾಳೆ. ಪರಿಣಾಮ ಸಮಿತ್ ಕೊರಳಿಗೆ ಕಟ್ಟಿದ್ದ ಕಾಶಿದಾರವನ್ನು ಬಿಗಿಯಾಗಿ ಹಿಡಿದು ಉಸಿರು ಕಟ್ಟಿಸಿ ಕೊಲೆ ಮಾಡಿದ್ದು, ಇನ್ನೊಂದು ಮಗು ಸಂಪತ್ ನನ್ನೂ ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್ ಮಗು ಪ್ರಾಣಾಪಯದಿಂದ ಪಾರಾಗಿದೆ.

ಇದನ್ನೂ ಓದಿ:ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಜೈಲಿನ ಮಹಡಿಯಿಂದ ಬಿದ್ದು ಸಾವು!

ಮಗುವಿನ ಹತ್ಯೆ ಬಳಿಕ ಆರೋಪಿ ಸವಿತಾ ಪರಾರಿಯಾಗಿದ್ದಳು. ಎಸ್ಪಿ ಆನಂದ ಕುಮಾರ ಅವರು ಡಿಎಸ್ಪಿ ಲಕ್ಷ್ಮೀನಾರಾಯಣ ಹಾಗೂ ಗ್ರಾಮೀಣ ವೃತ್ತದ ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ರಚಿಸಿದ್ದ ತನಿಖಾ ತಂಡ ಆರೋಪಿ ಸವಿತಾಳನ್ನು ತಿಡಗುಂದಿ ಬಳಿ ಕನ್ನೂರು ಕ್ರಾಸ್ ಬಳಿ ಬಂಧಿಸಿ, ತನಿಖೆ ನಡೆಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.