Muddebihal: ಮಹಿಳೆಯಿಂದ ಮೊಬೈಲ್‌ ಕಸಿಯಲು ಯತ್ನಿಸಿದ ಯುವಕನಿಗೆ ಸಾರ್ವಜನಿಕರಿಂದ ಧರ್ಮದೇಟು


Team Udayavani, Mar 26, 2024, 8:19 PM IST

10-muddebihala

ಮುದ್ದೇಬಿಹಾಳ: ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬಳ ಕೈಯಲ್ಲಿದ್ದ ಮೊಬೈಲ್‌ ಕಸಿಯಲು ಯತ್ನಸಿ ವಿಫಲನಾಗಿ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಯುವಕ ಧರ್ಮದೇಟು ತಿಂದು ಪೊಲೀಸರ ಅತಿಥಿಯಾದ ಘಟನೆ ಪಟ್ಟಣದಲ್ಲಿ ಮಾ. 26ರ ಮಂಗಳವಾರ ಸಂಜೆ ನಡೆದಿದೆ.

ತಾಲೂಕಿನ ದೇವರ ಹುಲಗಬಾಳದ ಈ ಮಹಿಳೆ ನಿತ್ಯ ತನ್ನೂರಿನಿಂದ ಪಟ್ಟಣಕ್ಕೆ ಕೆಲಸಕ್ಕೆ ಬರುತ್ತಾರೆ. ಮಂಗಳವಾರ ಕೆಲಸ ಬೇಗ ಮುಗಿದ ಕಾರಣ ಸಂಜೆ ಬಸ್ಸಿಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆಗ ಏಕಾಏಕಿ ಯುವಕನೊಬ್ಬ ಆಕೆಯತ್ತ ಧಾವಿಸಿ ಕೈಯಲ್ಲಿದ್ದ ಅಂದಾಜು 10 ಸಾವಿರ ರೂ. ಮೌಲ್ಯದ ಮೊಬೈಲ್‌ ಫೋನ್ ಕಸಿಯಲು ಯತ್ನಿಸಿದ್ದಾನೆ. ಆದರೆ ಮಹಿಳೆ‌ ಮೊಬೈಲ್‌ ಗಟ್ಟಿಯಾಗಿ ಹಿಡಿದುಕೊಂಡಿದ್ದರಿಂದ ಮೊಬೈಲ್‌ ಕಸಿಯುವ ಯತ್ನದಲ್ಲಿ ವಿಫಲನಾಗಿ ಸ್ಥಳದಿಂದ ಓಡಿ ಹೋಗಿದ್ದಾನೆ.

ಕ್ಷಣಮಾತ್ರದಲ್ಲಿ ನಡೆದ ಈ ಘಟನೆ ಬಸ್ ನಿಲ್ದಾಣದಲ್ಲಿದ್ದ ಬೆರಳೆಣಿಕೆಯಷ್ಟು ಜನರ ಗಮನಕ್ಕೆ ಬಂದಿರಲಿಲ್ಲ. ಮೊಬೈಲ್‌ ಕಸಿಯುವ ಯತ್ನದಲ್ಲಿ ಯುವಕ ಓಡುವ ರಭಸಕ್ಕೆ ಆ ಮಹಿಳೆ ಬಳಿ ಚಪ್ಪಲಿ ಬಿಟ್ಟು ಹೋಗಿದ್ದರಿಂದ ಯುವಕ ಚಪ್ಪಲಿ ಹಾಕಿಕೊಳ್ಳಲು ಮರಳಿ ಆ ಮಹಿಳೆ ಬಳಿ ಬಂದಿದ್ದಾನೆ. ಆಗ ಮಹಿಳೆ ಆತನನ್ನು ಗುರುತು ಹಿಡಿದು ಗದ್ದಲ ಎಬ್ಬಿಸಿದ್ದಾರೆ.

ಇದರಿಂದ ಗಲಿಬಿಲಿಗೊಂಡ ಯುವಕ ಓಡಿ ಹೋಗತೊಡಗಿದ್ದಾನೆ. ತಕ್ಷಣ ಏನೋ ನಡಿತಿದೆ ಎಂದು ಅರಿತ ಸಾರ್ವಜನಿಕರು ಅವನ ಬೆನ್ನು ಹತ್ತಿದ್ದಾರೆ. ಅರ್ಧ ಕಿ.ಮೀ. ವರೆಗೆ ಓಡಿದ ನಂತರ ಯುವಕ ಸಿಕ್ಕಿಹಾಕಿಕೊಂಡಿದ್ದಾನೆ. ಅಷ್ಟೊತ್ತಿಗೆ ಪೊಲೀಸರೂ ಆ ಸ್ಥಳಕ್ಕೆ ಆಗಮಿಸಿದ್ದು, ಸಾರ್ವಜನಿಕರು ಪೊಲೀಸರೆದುರೇ ಧರ್ಮದೇಟು ನೀಡಿದ್ದಾರೆ. ಈ ತಳ್ಳಾಟದಲ್ಲಿ ಯುವಕನ ಕೈಯಲ್ಲಿದ್ದ ಕ್ಯಾರಿಬ್ಯಾಗ್‍ನಲ್ಲಿದ್ದ ಮಾಂಸದ ತುಂಡುಗಳು ರಸ್ತೆಯಲ್ಲೆಲ್ಲ ಚಲ್ಲಾಪಿಲ್ಲಿಯಾಗಿ ಬಿದ್ದವು.

ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಯುವಕನನ್ನು ಠಾಣೆಗೆ ಕರೆದೊಯ್ದರು. ಯುವಕ ಜಮ್ಮಲದಿನ್ನಿ ಗ್ರಾಮದವನೆನ್ನಲಾಗಿದ್ದು, ಆತ ಮಂದಬುದ್ದಿಯವನು. ವೃತ್ತಿಪರ ಕಳ್ಳನಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ಕುರಿತು ಸಂಜೆಯವರೆಗೂ ಪ್ರಕರಣ ದಾಖಲಾಗಿಲ್ಲ. ಬಸ್ ನಿಲ್ದಾಣದಲ್ಲಿ ಪಿಕ್‍ ಪಾಕೆಟ್, ಮೊಬೈಲ್‌ ಕಳ್ಳತನ ಪ್ರಕರಣಗಳು ಹೆಚ್ಚಾಗತೊಡಗಿವೆ. ಬಸ್ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು  ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ಹಾಕಬೇಕು ಎನ್ನುವ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.